Homeಅಂಕಣಗಳುಮುರುಘಾ ಶರಣರ ಮರುಳು ಮಾತು ನಿಜವೆ?

ಮುರುಘಾ ಶರಣರ ಮರುಳು ಮಾತು ನಿಜವೆ?

- Advertisement -
- Advertisement -

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಜನಸಾಗರ ನೋಡಿದ ಬಿಜೆಪಿಗಳು ಅದಕ್ಕೆ ಪ್ರತಿಯಾಗಿ ತಾವೂ ಸಾಗರೋಪಾದಿಯಲ್ಲಿ ಜನರನ್ನು ಸೇರಿಸುವ ಬಗ್ಗೆ ಗಾಢ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರಂತಲ್ಲಾ. ಸ್ವತಃ ಎಡೂರಪ್ಪನವರೇ ಇಡೀ ದಿನ ಟಿ.ವಿ. ಮುಂದೆ ಕುಳಿತು ಸಿದ್ದರಾಮೋತ್ಸವ ನೋಡಿ, ಏನೂ ಹೇಳಲಾಗದ ಏನೂ ಮಾಡಲಾಗದ ಅಸಹಾಯಕತೆ ಚಡಪಡಿಕೆ ಪ್ರದರ್ಶಿಸಿದರು. ಕಾರಣ ಅವರೀಗ ಮುಖ್ಯಮಂತ್ರಿಯಲ್ಲಿ. ವಿರೋಧಪಕ್ಷದ ನಾಯಕರೂ ಅಲ್ಲ. ತಮ್ಮ ಅಧಿಕಾರಾವಧಿಯ ಮಧ್ಯದಲ್ಲೇ ಅವರನ್ನು ಕೆಳಗಿಳಿಸಲಾಯ್ತು. ಇಳಿಯುವಾಗಲಾದರೂ ಇಂತಹದೊಂದು ಎಡೂರು ಜಾತ್ರೆ ಮಾಡಿಬಿಡಬಹುದಿತ್ತು. ಆ ಜಾತ್ರೆಗೆ ಸರಕಾರದಿಂದ ಭಿಕ್ಷೆ ಪಡೆದ ಹಲವು ಜಗತ್ತಿನ ಜಗದ್ಗುರುಗಳ ಪರಿಷೆಯೇ ನೆರೆಯುತ್ತಿತ್ತು. ಸಹಜವಾಗಿ ಆ ಮಠಗಳ ಭಕ್ತಾದಿಗಳು, ಸರಕಾರಿ ಮತ್ತು ಖಾಸಗಿಯವರ ಸುವಿಹಾರಿ ಬಸ್ಸಿನಲ್ಲಿ ಬಂದಿಳಿಯುತ್ತಿದ್ದರು. ಅವರಿಗೆಲ್ಲಾ ಹೋಳಿಗೆ ಶೀಖರಣೆ ಊಟ ಹಾಕಿಕಳಿಸಬಹುದಿತ್ತು. ಪೀಠ ಹಿಡಿದು ಕುಳಿತಿರುವ ಸಿರಿವಂತ ಸ್ವಾಮಿಗಳು, ತಮ್ಮ ಎಂದಿನ ನಿಷ್ಠುರ ಮಾತುಗಳನ್ನು ಝಳಪಿಸಿ ಎಡೂರಪ್ಪನವರು ಎಂದಿಗೂ ಸ್ಥಾನ ಬಿಟ್ಟುಕೊಡಬಾರದು, ನನ್ನನ್ನಾದರೂ ನೋಡಿ ಅವರು ಧೈರ್ಯ ತುಂಬಿಕೊಳ್ಳಬೇಕೆಂದು ಅಪ್ಪಣೆ ಕೊಡಿಸಿದರೆ, ಇನ್ನ ಮುರುಘಾ ಮಠದವರು ಎಡೂರಪ್ಪನವರು ಎದೆಗುಂದಬಾರದು, ಸುತ್ತ ಮುತ್ತ ಶತ್ರುಗಳಿರುವಾಗ ಧೈರ್ಯದಿಂದ ರಾಜ್ಯವನ್ನಾಳಬೇಕು ಎಂದು ಹೇಳೇ ಹೇಳುತ್ತಿದ್ದರಂತಲ್ಲಾ, ಥೂತ್ತೆರಿ.

****

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಬಂದಿದ್ದ ರಾಹುಲಗಾಂಧಿಯನ್ನು ಒಂದರ್ಥದಲ್ಲಿ ಹೈಜಾಕ್ ಮಾಡಿದ ಡಿ.ಕೆ. ಶಿವಕುಮಾರ್ ತಾವು ಮುಂದೆ ಮುಖ್ಯಮಂತ್ರಿಯಾಗಲು ಶರಣ ಸಮೂಹದ ಓಟು ಬೇಕಾದ್ದರಿಂದ, ತಂತ್ರಗಾರಿಕೆ ನಡೆಸಿ, ಅದರಂತೆ ಮುರುಘಾ ಶರಣರಿಂದ ರಾಹುಲಗಾಂಧಿಗೆ ಲಿಂಗದೀಕ್ಷೆ ಕೊಡಿಸೇಬಿಟ್ಟರಂತಲ್ಲಾ. ಮುಖ್ಯವಾಗಿ ದಯವೇ ಧರ್ಮದ ಮೂಲವೆಂದು ಒಪ್ಪಿದವರೆಲ್ಲಾ ಬಸವಣ್ಣನ ಅನುಯಾಯಿಗಳಾಗುತ್ತಾರೆ. ಅವರಿಗೆ ಲಿಂಗದೀಕ್ಷೆಯ ಅಗತ್ಯವೇ ಇರುವುದಿಲ್ಲ. ಇಂತಹ ಸೂಕ್ಷ್ಮ ವಿಚಾರ ಮುರುಘಾ ಶರಣರಿಗೆ ಹೊಳೆಯಬೇಕಿತ್ತು. ನಮ್ಮ ಮುರುಘಾ ಶರಣರು ಬೆಂಬಲಿಸಿದ ಎಡೂರಪ್ಪ ಶರಣ. ಬಸವ ತತ್ವಪ್ರತಿಪಾದಕರಾಗಬೇಕಿತ್ತು. ಆದರೇ ಮಾಡಿದ್ದೆಲ್ಲಾ ಪುರೋಹಿತ ಶಾಹಿಗಳು ಹೇಳಿದ ಕೆಲಸವನ್ನು. ಅವರ ನಂತರ ಮುಖ್ಯಮಂತ್ರಿಯಾದ ಸಾದಲಿಂಗಾಯಿತರ ಬಸವರಾಜ ಬೊಮ್ಮಾಯಿ ಮತ್ತೊಬ್ಬ ಶರಣ. ಲಿಂಗಕಟ್ಟಿಗೊಂಡು ಇವರು ಮಾಡಿದ ಆಡಳಿತವೆಲ್ಲಾ ಕೇಶವಕೃಪಾದ ಆಜ್ಞೆಯ ಪರಿಪಾಲನೆ; ಹಿಜಾಬು, ನಮಾಜು, ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ ಇತ್ಯಾದಿ ಕೇಶವ ಕೃಪದ ಮನೆಹಾಳು ಕೃತ್ಯಗಳ ಜಾರಿ ಮತ್ತು ಸಮರ್ಥನೆ; ಇದ ಒಬ್ಬ ಲಿಂಗದೀಕ್ಷೆಯ ಶರಣನ ಆಡಳಿತದಲ್ಲಿ ಜರುಗಿದ ದುಸ್ವಪ್ನ. ಸಿದ್ದರಾಮಯ್ಯ ಹುಟ್ಟಿನಿಂದ ಶರಣನಲ್ಲ. ಆದರೆ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಿದ್ದು ಬಸವ ಜಯಂತಿಯಂದು. ನಂತರ ಮಾಡಿದ್ದು ಶರಣರ ದಾಸೋಹ ಕಲ್ಪನೆಯ ಅನನಭಾಗ್ಯ ಮುಂತಾದ ಕೆಲಸ. ಹಾಗೆ ನೋಡಿದರೆ, ಲಿಂಗದೀಕ್ಷೆಗೂ ಶರಣ ತತ್ವ ಪ್ರತಿಪಾದನೆಗೂ ತಾಳಮೇಳವೇ ಇಲ್ಲವೆಂಬುದು ಮುರುಘಾ ಶರಣರಿಗೆ ಹೊಳೆಯಬೇಕಿತ್ತಂತಲ್ಲಾ, ಥೂತ್ತೆರಿ.

*****

ಚಿತ್ರದುರ್ಗದ ಮಠಕ್ಕೆ ಬಂದ ರಾಹುಲಗಾಂಧಿಯನ್ನ ಹಿಡಿದುಕೊಂಡ ಮುರುಘಾ ಶರಣರು, ಮೋದಿ ಒಬ್ಬ ಸಮರ್ಥನಾಯಕ, ಸದ್ಯ ನಮ್ಮ ಸುತ್ತಲೂ ಶತ್ರು ರಾಷ್ಟ್ರಗಳಿದ್ದು, ಅವುಗಳಿಂದ ದೇಶವನ್ನ ರಕ್ಷಿಸಬೇಕಾದರೆ ಮೋದಿಯಂತಹ ಸಮರ್ಥ ನಾಯಕ ಬೇಕೆಂದು ರಾಹುಲಗಾಂಧಿಗೇ ಹೇಳಿದರಂತಲ್ಲಾ. ಆಗ ಮುಗ್ದ ಬಾಲಕನಂತೆ ಮುರುಘಾ ಶರಣರ ಮುಖ ನೋಡಿದ ರಾಹುಲಗಾಂಧಿ, ಶರಣರ ಜ್ಞಾನಕ್ಕೆ ಮರುಕ ಪಟ್ಟಿರಬಹುದಲ್ಲವೆ. ಮುಖ್ಯವಾಗಿ ಕಾಮನ್ ಸೆನ್ಸ್ ಏಂಬುದೊಂದು ಮನಸ್ಥಿತಿ ಇದ್ದಿದ್ದರೆ, ಮೋದಿಯ ಸಮರ್ಥ ನಾಯಕತ್ವದ ಅರಿವಾಗಬೇಕಿತ್ತು. ಚೀನಾ ಅತಿಕ್ರಮಿಸಿರುವ ವಿಷಯವನ್ನು ದೇಶದ ಮುಂದೆ ಅವರು ಈವರೆಗೂ ಹೇಳಿಲ್ಲ. ಕೃಷಿ ಕಾಯ್ದೆ ಜಾರಿಮಾಡಿದ್ದಕ್ಕಾಗಿ ಒಂದು ವರ್ಷ ನಡೆದ ರೈತರ ಧರಣಿಯಲ್ಲಿ ಏಳುನೂರ ರೈತರು ಹತರಾದರು. ಆ ಬಗ್ಗೆ ಮೋದಿ ಈವರೆಗೂ ಪ್ರತಿಕ್ರಿಯಿಸಿಲ್ಲ. ಹೀಗಿರುವಾಗ, ಮೋದಿ ಒಬ್ಬ ಸಮರ್ಥ ಪ್ರಧಾನಿ ಎಂಬ ಅಭಿಪ್ರಾಯವನ್ನು ಹೊಂದಿರುವ ಮುರುಘಾ ಶರಣರು ಚಿತ್ರದುರ್ಗದಾಚೆಗೆ ದೇಶದ ಆಗುಹೋಗುಗಳನ್ನು ಕಣ್ಣುತೆರೆದು ನೋಡಿದರೆ ನಿಜದ ಅರಿವಾಗಬಹುದು ಎಂಬ ಅಭಿಪ್ರಾಯ ರಾಹುಲಗಾಂಧಿಗೆ ಹೊಳೆದಿರಬಹುದಂತಲ್ಲಾ, ಥೂತ್ತೆರಿ.

****

ಇನ್ನ ನಮ್ಮೂರ ಕೆರೆ ಕೋಡಿಯಲ್ಲಿ ಕುಳಿತಿರುವ ಕಾಲಜ್ಞಾನಿ ಸ್ವಾಮೀಜಿಗಳು ಎಂದಿನಂತೆ ಮತ್ತೆ ಜನಗಳನ್ನು ಹೆದರಿಸಿದ್ದಾರೆ. ದುರ್ದೈವವೆಂದರೆ ಅವರ ಮಾತುಗಳಿಗೆ ಯಾರೂ ಹೆದರಿದಂತೆ ಕಾಣದೇ ಇರುವುದರಿಂದ ಮತ್ತೆ ಗುಡಾಗಿದ್ದಾರಂತಲ್ಲಾ. ಆ ಗುಡುಗಿನ ಶಬ್ದ ಯಾವುದೆಂದರೆ ಕರ್ನಾಟಕ ಅತಿವೃಷ್ಠಿಯಿಂದ ಕಂಗೆಟ್ಟು ಹೋಗಲಿದೆ, ದಟ್ಟೈಸಿದ ಮೋಡದಿಂದ ಧಾರಾಕಾರ ಮಳೆಯಾಗುತ್ತದೆ. ಈ ಮಳೆ ದೆಸೆಯಿಂದ ಕೆರೆಕಟ್ಟಿ ತುಂಬಿ ಹರಿಯುತ್ತವೆ. ಆದಕಾರಣ ಕೆರೆಗೆ ಬಿಟ್ಟು ಸಾಕುತ್ತಿರುವ ಮೀನುಗಳು ಕೊಚ್ಚಿಕೊಂಡು ಹೋಗಿ ಕಂಡವರ ಪಾಲಾಗುತ್ತವೆ. ಕೆರೆ ಏರಿ ಹೊಡೆಯುತ್ತದೆ. ಮನೆಗಳ ಗೋಡೆ ಕುಸಿಯುತ್ತದೆ. ಗೋಡೆ ಕೆಳಗೆ ಸಿಕ್ಕವರು ಸತ್ತುಹೋಗುತ್ತಾರೆ. ಜಾನುವಾರುಗಳು ನೀರಲ್ಲಿ ತೇಲುತ್ತ ಹೋಗುತ್ತವೆ. ರಸ್ತೆಯ ಬದಿಯ ಮರಗಳು ರಸ್ತೆಗೇ ಉರುಳುತ್ತವೆ. ಸಂಚಾರಕ್ಕೆ ಅಡ್ಡಿಯಾಗುತ್ತದೆ. ದೇವಸ್ಥಾನ ಮಠಗಳಿಗೆ ಹೋಗುವ ಜನಗಳಿಗೆ ಅನಾನುಕೂಲವಾಗಿ ಪೂಜೆಪುನಸ್ಕಾರಗಳು ನಿಂತುಹೋಗುತ್ತವೆ. ಮಳೆಯಿಂದ ಬೆಳೆಗೆ ಹಾನಿಯಾಗುತ್ತದೆ. ಬೆಳೆಹಾನಿಯಿಂದ ಮಳೆ ಹೆಚ್ಚಾಗುತ್ತದೆ. ದಿನಕ್ಕೊಂದು ಕೊಲೆಯಾಗುತ್ತದೆ. ಕಳ್ಳತನ ಜಾಸ್ತಿಯಾಗುತ್ತದೆ. ಸರಕಾರದ ತನಿಖೆ ನಾಟಕವಾಗುತ್ತದೆ. ರಾಜ್ಯ ಆಳುವ ನಾಯಕನಿಗೆ ಅಪಾಯವಿದೆ. ಅವರಿಗೆ ಅನಾರೋಗ್ಯವುಂಟಾಗಿ ಮಾನಸಿಕ ನೆಮ್ಮದಿ ಕಳೆದುಕೊಂಡು ಏನೇನೂ ಮಾತನಾಡುತ್ತಾರೆ, ಇದಕ್ಕೆ ಪರಿಹಾರವಿದೆ. ಈ ಆಷಾಢ ಮಾಸ ಮುಗಿದ ನಂತರ ಮಠಕ್ಕೆ ಒಂದುನೂರು ದೀಪ ಹಚ್ಚಿ ದಾಸೋಹನಡೆಸಿ ಗುರುವರ್ಯರ ಪಾದ ಹಿಡಿದರೆ ಎಲ್ಲವೂ ಸಾಂಗವಾಗಿ, ಅವರು ನಿರಾತಂಕವಾಗಿ ರಾಜ್ಯದಾಳಬಹುದೆಂಬ ಸಂದೇಶ ಹೊgಟಿದೆಯಂತಲ್ಲಾ, ಥೂಥೂ ಥೂತ್ತೆರಿ.


ಇದನ್ನೂ ಓದಿ: ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...