Homeಮುಖಪುಟಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? - BJP ನಾಯಕರ ಹೇಳಿಕೆಯ ನಿಜಾಂಶವೇನು?

ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

- Advertisement -
- Advertisement -

ದೇಶದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುವ ಪೆಟ್ರೋಲ್ ಡೀಸೆಲ್ ಬೆಲೆ ಹಲವೆಡೆ ಲೀಟರ್‌ಗೆ 100 ರೂ ದಾಟಿದೆ. ಇದರಿಂದ ಸಹಜವಾಗಿ ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿದ್ದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ದರ ಹೆಚ್ಚಳಕ್ಕೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ನೇರ ಕಾರಣ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿರುವ ಬಿಜೆಪಿ ಇದನ್ನು ಒಪ್ಪಿಕೊಳ್ಳದೆ ದರ ಹೆಚ್ಚಳಕ್ಕೆ ಹಿಂದಿನ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿದೆ.

ಒಕ್ಕೂಟ ಸರ್ಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಹಿಂದಿನ ಯುಪಿಎ ಸರ್ಕಾರ ಆಯಿಲ್ ಬಾಂಡ್‌ಗಳನ್ನು ನೀಡಿದ್ದೆ ಈಗ ದರ ಎಚ್ಚಳ ಕಾರಣ ಎಂದು ಹೇಳಿದ್ದರು. ಜೊತೆಗೆ ಬುಧವಾರ ರಾಜ್ಯದ ವಿಧಾನಸಭಾ ಅಧಿವೇಶನದಲ್ಲೂ, ಆಡಳಿತ ಪಕ್ಷದ ಸಚಿವರು, ಕಾಂಗ್ರೆಸ್‌ ಸರ್ಕಾರ ಇದ್ದಾಗಿನ ಆಯಿಲ್ ಬಾಂಡ್‌ ಕತೆಗಳನ್ನು ಹೇಳಿದ್ದರು. ಇಂಧನ ದರ ಹೆಚ್ಚಳಕ್ಕೆ ಆದರೆ ಆಯಿಲ್ ಬಾಂಡ್‌ಗಳು ಕಾರಣವೆ? ಇಲ್ಲಿದೆ ಅವುಗಳಿಗೆ ಉತ್ತರ!

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಆಯಿಲ್ ಬಾಂಡ್‌ 

ಯುಪಿಎ-1 ಒಂದರ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು ಪೆಟ್ರೋಲಿಯಂ ಕಂಪೆನಿಗಳಿಗೆ ಆಯಿಲ್ ಬಾಂಡ್ ನೀಡಿದ್ದು ನಿಜವೇ ಆಗಿದೆ. ಆದರೆ ಅದು ನೀಡುವುದಕ್ಕೆ ಕಾರಣವು ಇದ್ದು, ಆ ಸಮಯದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಅತಿ ದುಬಾರಿಯಾಗಿತ್ತು. ಎಷ್ಟೆಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು.

ಹಾಗಾಗಿ ಅದರ ಹೊರೆ ದೇಶದ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು. ಅದರ ಮೇಲೆ ಬಡ್ಡಿ ನೀಡುವುದಾಗಿಯು ಮನಮೋಹನ್ ಸಿಂಗ್ ಅವರ ಸರ್ಕಾರ ಒಪ್ಪಿಕೊಂಡಿತ್ತು.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಈ ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.44 ಲಕ್ಷ ಕೋಟಿ ರೂಗಳಾಗಿದ್ದು, ಬಾಂಡ್‌ಗಳು ‘Mature’ ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ-2 ರ ಸಮಯದಲ್ಲಿ 53 ಸಾವಿರ ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು. ಜೊತೆಗೆ ಈ ಸಮಯದಲ್ಲಿ ‘Mature’ ಆದ ಮೂರು ಆಯಿಲ್‌ ಬಾಂಡ್‌ಗಳ ಮೊತ್ತ 9.7 ಸಾವಿರ ಕೋಟಿ ರೂಗಳನ್ನು ಯುಪಿಎ ಸರ್ಕಾರ ಪಾವತಿಸಿತ್ತು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪಾವತಿಸಿದ ಮೊತ್ತವೆಷ್ಟು?

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70 ಸಾವಿರ ಕೋಟಿ ರೂಗಳನ್ನು ಕಟ್ಟಲಾಗಿದೆ. 2014-15 ರಿಂದ 2018-19 ರ ಅವಧಿಗೆ ‘Mature’ ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3.5 ಸಾವಿರ ಕೋಟಿರೂಗಳನ್ನು ಪಾವತಿಸಲಾಗಿದೆ. ಅಂದರೆ ಮೋದಿ ಸರ್ಕಾರ ಒಟ್ಟು 73.7 ಸಾವಿರ ಕೋಟಿ ರೂಗಳನ್ನು ಈಗಾಗಲೆ ಪಾವತಿಸಿದೆ.

ಇನ್ನು ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.34 ಲಕ್ಷ ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40 ಸಾವಿರ ಕೋಟಿ ರೂ. ಅವರೆಡನ್ನೂ ಒಟ್ಟು ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರ ಪಾವತಿ ಮಾಡಬೇಕಿರುವುದು ಒಟ್ಟು 1.74 ಲಕ್ಷಕೋಟಿ ರೂ. ಮಾತ್ರ. ಆದರೆ ಅವರುಗಳನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯಾವಕಾಶವಿದೆ.

ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಇಂಧನ ತೆರಿಗೆ ಹೆಸರಲ್ಲಿ ಲಕ್ಷ ಕೋಟಿ ಸಂಗ್ರಹಿಸಿದ ಮೋದಿ ಸರ್ಕಾರ

ಮೋದಿ ಸರ್ಕಾರ ಕಳೆದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿದೆ. 2020-21 ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಶುಲ್ಕ ವಿಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂದ ಹೆಚ್ಚು!

ಮೋದಿ ಸರ್ಕಾರ ಇಂಧನ ದರವನ್ನು ಹೆಚ್ಚಿಸಿ ಸಂಗ್ರಹಿಸಿರುವ ದುಡ್ಡನ್ನು ಹೋಲಿಸಿದರೆ, ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73.7 ಸಾವಿರ ಕೋಟಿ ಮತ್ತು ಬಾಕಿ ಉಳಿದಿರುವ 1.74 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ. ಆದ್ದರಿಂದ ಬಿಜೆಪಿ ನಾಯಕರು, ಸಚಿವರು ಮತ್ತು ಬೆಂಬಲಿಗರು ಹೇಳುತ್ತಿರುವ ಆಯಿಲ್ ಬಾಂಡ್‌ ಸಮಜಾಯಿಷಿ ತಪ್ಪಾಗಿದೆ. ಆಯಿಲ್ ಬಾಂಡ್‌ಗೂ ಇಂಧನ ದರ ಹೆಚ್ಚಳಕ್ಕೂ ದೊಡ್ಡ ಸಂಬಂಧವಿಲ್ಲ.

ಇದನ್ನೂ ಓದಿ: Explainer: GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...