Homeಮುಖಪುಟಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? - BJP ನಾಯಕರ ಹೇಳಿಕೆಯ ನಿಜಾಂಶವೇನು?

ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

- Advertisement -
- Advertisement -

ದೇಶದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುವ ಪೆಟ್ರೋಲ್ ಡೀಸೆಲ್ ಬೆಲೆ ಹಲವೆಡೆ ಲೀಟರ್‌ಗೆ 100 ರೂ ದಾಟಿದೆ. ಇದರಿಂದ ಸಹಜವಾಗಿ ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿದ್ದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ದರ ಹೆಚ್ಚಳಕ್ಕೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ನೇರ ಕಾರಣ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿರುವ ಬಿಜೆಪಿ ಇದನ್ನು ಒಪ್ಪಿಕೊಳ್ಳದೆ ದರ ಹೆಚ್ಚಳಕ್ಕೆ ಹಿಂದಿನ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿದೆ.

ಒಕ್ಕೂಟ ಸರ್ಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಹಿಂದಿನ ಯುಪಿಎ ಸರ್ಕಾರ ಆಯಿಲ್ ಬಾಂಡ್‌ಗಳನ್ನು ನೀಡಿದ್ದೆ ಈಗ ದರ ಎಚ್ಚಳ ಕಾರಣ ಎಂದು ಹೇಳಿದ್ದರು. ಜೊತೆಗೆ ಬುಧವಾರ ರಾಜ್ಯದ ವಿಧಾನಸಭಾ ಅಧಿವೇಶನದಲ್ಲೂ, ಆಡಳಿತ ಪಕ್ಷದ ಸಚಿವರು, ಕಾಂಗ್ರೆಸ್‌ ಸರ್ಕಾರ ಇದ್ದಾಗಿನ ಆಯಿಲ್ ಬಾಂಡ್‌ ಕತೆಗಳನ್ನು ಹೇಳಿದ್ದರು. ಇಂಧನ ದರ ಹೆಚ್ಚಳಕ್ಕೆ ಆದರೆ ಆಯಿಲ್ ಬಾಂಡ್‌ಗಳು ಕಾರಣವೆ? ಇಲ್ಲಿದೆ ಅವುಗಳಿಗೆ ಉತ್ತರ!

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಆಯಿಲ್ ಬಾಂಡ್‌ 

ಯುಪಿಎ-1 ಒಂದರ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು ಪೆಟ್ರೋಲಿಯಂ ಕಂಪೆನಿಗಳಿಗೆ ಆಯಿಲ್ ಬಾಂಡ್ ನೀಡಿದ್ದು ನಿಜವೇ ಆಗಿದೆ. ಆದರೆ ಅದು ನೀಡುವುದಕ್ಕೆ ಕಾರಣವು ಇದ್ದು, ಆ ಸಮಯದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಅತಿ ದುಬಾರಿಯಾಗಿತ್ತು. ಎಷ್ಟೆಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು.

ಹಾಗಾಗಿ ಅದರ ಹೊರೆ ದೇಶದ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು. ಅದರ ಮೇಲೆ ಬಡ್ಡಿ ನೀಡುವುದಾಗಿಯು ಮನಮೋಹನ್ ಸಿಂಗ್ ಅವರ ಸರ್ಕಾರ ಒಪ್ಪಿಕೊಂಡಿತ್ತು.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಈ ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.44 ಲಕ್ಷ ಕೋಟಿ ರೂಗಳಾಗಿದ್ದು, ಬಾಂಡ್‌ಗಳು ‘Mature’ ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ-2 ರ ಸಮಯದಲ್ಲಿ 53 ಸಾವಿರ ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು. ಜೊತೆಗೆ ಈ ಸಮಯದಲ್ಲಿ ‘Mature’ ಆದ ಮೂರು ಆಯಿಲ್‌ ಬಾಂಡ್‌ಗಳ ಮೊತ್ತ 9.7 ಸಾವಿರ ಕೋಟಿ ರೂಗಳನ್ನು ಯುಪಿಎ ಸರ್ಕಾರ ಪಾವತಿಸಿತ್ತು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪಾವತಿಸಿದ ಮೊತ್ತವೆಷ್ಟು?

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70 ಸಾವಿರ ಕೋಟಿ ರೂಗಳನ್ನು ಕಟ್ಟಲಾಗಿದೆ. 2014-15 ರಿಂದ 2018-19 ರ ಅವಧಿಗೆ ‘Mature’ ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3.5 ಸಾವಿರ ಕೋಟಿರೂಗಳನ್ನು ಪಾವತಿಸಲಾಗಿದೆ. ಅಂದರೆ ಮೋದಿ ಸರ್ಕಾರ ಒಟ್ಟು 73.7 ಸಾವಿರ ಕೋಟಿ ರೂಗಳನ್ನು ಈಗಾಗಲೆ ಪಾವತಿಸಿದೆ.

ಇನ್ನು ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.34 ಲಕ್ಷ ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40 ಸಾವಿರ ಕೋಟಿ ರೂ. ಅವರೆಡನ್ನೂ ಒಟ್ಟು ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರ ಪಾವತಿ ಮಾಡಬೇಕಿರುವುದು ಒಟ್ಟು 1.74 ಲಕ್ಷಕೋಟಿ ರೂ. ಮಾತ್ರ. ಆದರೆ ಅವರುಗಳನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯಾವಕಾಶವಿದೆ.

ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಇಂಧನ ತೆರಿಗೆ ಹೆಸರಲ್ಲಿ ಲಕ್ಷ ಕೋಟಿ ಸಂಗ್ರಹಿಸಿದ ಮೋದಿ ಸರ್ಕಾರ

ಮೋದಿ ಸರ್ಕಾರ ಕಳೆದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿದೆ. 2020-21 ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಶುಲ್ಕ ವಿಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂದ ಹೆಚ್ಚು!

ಮೋದಿ ಸರ್ಕಾರ ಇಂಧನ ದರವನ್ನು ಹೆಚ್ಚಿಸಿ ಸಂಗ್ರಹಿಸಿರುವ ದುಡ್ಡನ್ನು ಹೋಲಿಸಿದರೆ, ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73.7 ಸಾವಿರ ಕೋಟಿ ಮತ್ತು ಬಾಕಿ ಉಳಿದಿರುವ 1.74 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ. ಆದ್ದರಿಂದ ಬಿಜೆಪಿ ನಾಯಕರು, ಸಚಿವರು ಮತ್ತು ಬೆಂಬಲಿಗರು ಹೇಳುತ್ತಿರುವ ಆಯಿಲ್ ಬಾಂಡ್‌ ಸಮಜಾಯಿಷಿ ತಪ್ಪಾಗಿದೆ. ಆಯಿಲ್ ಬಾಂಡ್‌ಗೂ ಇಂಧನ ದರ ಹೆಚ್ಚಳಕ್ಕೂ ದೊಡ್ಡ ಸಂಬಂಧವಿಲ್ಲ.

ಇದನ್ನೂ ಓದಿ: Explainer: GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...