Homeಮುಖಪುಟಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? - BJP ನಾಯಕರ ಹೇಳಿಕೆಯ ನಿಜಾಂಶವೇನು?

ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

- Advertisement -
- Advertisement -

ದೇಶದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುವ ಪೆಟ್ರೋಲ್ ಡೀಸೆಲ್ ಬೆಲೆ ಹಲವೆಡೆ ಲೀಟರ್‌ಗೆ 100 ರೂ ದಾಟಿದೆ. ಇದರಿಂದ ಸಹಜವಾಗಿ ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿದ್ದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ದರ ಹೆಚ್ಚಳಕ್ಕೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ನೇರ ಕಾರಣ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿರುವ ಬಿಜೆಪಿ ಇದನ್ನು ಒಪ್ಪಿಕೊಳ್ಳದೆ ದರ ಹೆಚ್ಚಳಕ್ಕೆ ಹಿಂದಿನ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿದೆ.

ಒಕ್ಕೂಟ ಸರ್ಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಹಿಂದಿನ ಯುಪಿಎ ಸರ್ಕಾರ ಆಯಿಲ್ ಬಾಂಡ್‌ಗಳನ್ನು ನೀಡಿದ್ದೆ ಈಗ ದರ ಎಚ್ಚಳ ಕಾರಣ ಎಂದು ಹೇಳಿದ್ದರು. ಜೊತೆಗೆ ಬುಧವಾರ ರಾಜ್ಯದ ವಿಧಾನಸಭಾ ಅಧಿವೇಶನದಲ್ಲೂ, ಆಡಳಿತ ಪಕ್ಷದ ಸಚಿವರು, ಕಾಂಗ್ರೆಸ್‌ ಸರ್ಕಾರ ಇದ್ದಾಗಿನ ಆಯಿಲ್ ಬಾಂಡ್‌ ಕತೆಗಳನ್ನು ಹೇಳಿದ್ದರು. ಇಂಧನ ದರ ಹೆಚ್ಚಳಕ್ಕೆ ಆದರೆ ಆಯಿಲ್ ಬಾಂಡ್‌ಗಳು ಕಾರಣವೆ? ಇಲ್ಲಿದೆ ಅವುಗಳಿಗೆ ಉತ್ತರ!

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಆಯಿಲ್ ಬಾಂಡ್‌ 

ಯುಪಿಎ-1 ಒಂದರ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು ಪೆಟ್ರೋಲಿಯಂ ಕಂಪೆನಿಗಳಿಗೆ ಆಯಿಲ್ ಬಾಂಡ್ ನೀಡಿದ್ದು ನಿಜವೇ ಆಗಿದೆ. ಆದರೆ ಅದು ನೀಡುವುದಕ್ಕೆ ಕಾರಣವು ಇದ್ದು, ಆ ಸಮಯದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಅತಿ ದುಬಾರಿಯಾಗಿತ್ತು. ಎಷ್ಟೆಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು.

ಹಾಗಾಗಿ ಅದರ ಹೊರೆ ದೇಶದ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು. ಅದರ ಮೇಲೆ ಬಡ್ಡಿ ನೀಡುವುದಾಗಿಯು ಮನಮೋಹನ್ ಸಿಂಗ್ ಅವರ ಸರ್ಕಾರ ಒಪ್ಪಿಕೊಂಡಿತ್ತು.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಈ ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.44 ಲಕ್ಷ ಕೋಟಿ ರೂಗಳಾಗಿದ್ದು, ಬಾಂಡ್‌ಗಳು ‘Mature’ ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ-2 ರ ಸಮಯದಲ್ಲಿ 53 ಸಾವಿರ ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು. ಜೊತೆಗೆ ಈ ಸಮಯದಲ್ಲಿ ‘Mature’ ಆದ ಮೂರು ಆಯಿಲ್‌ ಬಾಂಡ್‌ಗಳ ಮೊತ್ತ 9.7 ಸಾವಿರ ಕೋಟಿ ರೂಗಳನ್ನು ಯುಪಿಎ ಸರ್ಕಾರ ಪಾವತಿಸಿತ್ತು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪಾವತಿಸಿದ ಮೊತ್ತವೆಷ್ಟು?

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70 ಸಾವಿರ ಕೋಟಿ ರೂಗಳನ್ನು ಕಟ್ಟಲಾಗಿದೆ. 2014-15 ರಿಂದ 2018-19 ರ ಅವಧಿಗೆ ‘Mature’ ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3.5 ಸಾವಿರ ಕೋಟಿರೂಗಳನ್ನು ಪಾವತಿಸಲಾಗಿದೆ. ಅಂದರೆ ಮೋದಿ ಸರ್ಕಾರ ಒಟ್ಟು 73.7 ಸಾವಿರ ಕೋಟಿ ರೂಗಳನ್ನು ಈಗಾಗಲೆ ಪಾವತಿಸಿದೆ.

ಇನ್ನು ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.34 ಲಕ್ಷ ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40 ಸಾವಿರ ಕೋಟಿ ರೂ. ಅವರೆಡನ್ನೂ ಒಟ್ಟು ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರ ಪಾವತಿ ಮಾಡಬೇಕಿರುವುದು ಒಟ್ಟು 1.74 ಲಕ್ಷಕೋಟಿ ರೂ. ಮಾತ್ರ. ಆದರೆ ಅವರುಗಳನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯಾವಕಾಶವಿದೆ.

ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಇಂಧನ ತೆರಿಗೆ ಹೆಸರಲ್ಲಿ ಲಕ್ಷ ಕೋಟಿ ಸಂಗ್ರಹಿಸಿದ ಮೋದಿ ಸರ್ಕಾರ

ಮೋದಿ ಸರ್ಕಾರ ಕಳೆದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿದೆ. 2020-21 ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಶುಲ್ಕ ವಿಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂದ ಹೆಚ್ಚು!

ಮೋದಿ ಸರ್ಕಾರ ಇಂಧನ ದರವನ್ನು ಹೆಚ್ಚಿಸಿ ಸಂಗ್ರಹಿಸಿರುವ ದುಡ್ಡನ್ನು ಹೋಲಿಸಿದರೆ, ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73.7 ಸಾವಿರ ಕೋಟಿ ಮತ್ತು ಬಾಕಿ ಉಳಿದಿರುವ 1.74 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ. ಆದ್ದರಿಂದ ಬಿಜೆಪಿ ನಾಯಕರು, ಸಚಿವರು ಮತ್ತು ಬೆಂಬಲಿಗರು ಹೇಳುತ್ತಿರುವ ಆಯಿಲ್ ಬಾಂಡ್‌ ಸಮಜಾಯಿಷಿ ತಪ್ಪಾಗಿದೆ. ಆಯಿಲ್ ಬಾಂಡ್‌ಗೂ ಇಂಧನ ದರ ಹೆಚ್ಚಳಕ್ಕೂ ದೊಡ್ಡ ಸಂಬಂಧವಿಲ್ಲ.

ಇದನ್ನೂ ಓದಿ: Explainer: GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...