Homeಮುಖಪುಟಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? - BJP ನಾಯಕರ ಹೇಳಿಕೆಯ ನಿಜಾಂಶವೇನು?

ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

- Advertisement -
- Advertisement -

ದೇಶದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುವ ಪೆಟ್ರೋಲ್ ಡೀಸೆಲ್ ಬೆಲೆ ಹಲವೆಡೆ ಲೀಟರ್‌ಗೆ 100 ರೂ ದಾಟಿದೆ. ಇದರಿಂದ ಸಹಜವಾಗಿ ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿದ್ದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ದರ ಹೆಚ್ಚಳಕ್ಕೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ನೇರ ಕಾರಣ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿರುವ ಬಿಜೆಪಿ ಇದನ್ನು ಒಪ್ಪಿಕೊಳ್ಳದೆ ದರ ಹೆಚ್ಚಳಕ್ಕೆ ಹಿಂದಿನ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿದೆ.

ಒಕ್ಕೂಟ ಸರ್ಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಹಿಂದಿನ ಯುಪಿಎ ಸರ್ಕಾರ ಆಯಿಲ್ ಬಾಂಡ್‌ಗಳನ್ನು ನೀಡಿದ್ದೆ ಈಗ ದರ ಎಚ್ಚಳ ಕಾರಣ ಎಂದು ಹೇಳಿದ್ದರು. ಜೊತೆಗೆ ಬುಧವಾರ ರಾಜ್ಯದ ವಿಧಾನಸಭಾ ಅಧಿವೇಶನದಲ್ಲೂ, ಆಡಳಿತ ಪಕ್ಷದ ಸಚಿವರು, ಕಾಂಗ್ರೆಸ್‌ ಸರ್ಕಾರ ಇದ್ದಾಗಿನ ಆಯಿಲ್ ಬಾಂಡ್‌ ಕತೆಗಳನ್ನು ಹೇಳಿದ್ದರು. ಇಂಧನ ದರ ಹೆಚ್ಚಳಕ್ಕೆ ಆದರೆ ಆಯಿಲ್ ಬಾಂಡ್‌ಗಳು ಕಾರಣವೆ? ಇಲ್ಲಿದೆ ಅವುಗಳಿಗೆ ಉತ್ತರ!

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಆಯಿಲ್ ಬಾಂಡ್‌ 

ಯುಪಿಎ-1 ಒಂದರ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು ಪೆಟ್ರೋಲಿಯಂ ಕಂಪೆನಿಗಳಿಗೆ ಆಯಿಲ್ ಬಾಂಡ್ ನೀಡಿದ್ದು ನಿಜವೇ ಆಗಿದೆ. ಆದರೆ ಅದು ನೀಡುವುದಕ್ಕೆ ಕಾರಣವು ಇದ್ದು, ಆ ಸಮಯದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಅತಿ ದುಬಾರಿಯಾಗಿತ್ತು. ಎಷ್ಟೆಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು.

ಹಾಗಾಗಿ ಅದರ ಹೊರೆ ದೇಶದ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು. ಅದರ ಮೇಲೆ ಬಡ್ಡಿ ನೀಡುವುದಾಗಿಯು ಮನಮೋಹನ್ ಸಿಂಗ್ ಅವರ ಸರ್ಕಾರ ಒಪ್ಪಿಕೊಂಡಿತ್ತು.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಈ ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.44 ಲಕ್ಷ ಕೋಟಿ ರೂಗಳಾಗಿದ್ದು, ಬಾಂಡ್‌ಗಳು ‘Mature’ ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ-2 ರ ಸಮಯದಲ್ಲಿ 53 ಸಾವಿರ ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು. ಜೊತೆಗೆ ಈ ಸಮಯದಲ್ಲಿ ‘Mature’ ಆದ ಮೂರು ಆಯಿಲ್‌ ಬಾಂಡ್‌ಗಳ ಮೊತ್ತ 9.7 ಸಾವಿರ ಕೋಟಿ ರೂಗಳನ್ನು ಯುಪಿಎ ಸರ್ಕಾರ ಪಾವತಿಸಿತ್ತು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪಾವತಿಸಿದ ಮೊತ್ತವೆಷ್ಟು?

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70 ಸಾವಿರ ಕೋಟಿ ರೂಗಳನ್ನು ಕಟ್ಟಲಾಗಿದೆ. 2014-15 ರಿಂದ 2018-19 ರ ಅವಧಿಗೆ ‘Mature’ ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3.5 ಸಾವಿರ ಕೋಟಿರೂಗಳನ್ನು ಪಾವತಿಸಲಾಗಿದೆ. ಅಂದರೆ ಮೋದಿ ಸರ್ಕಾರ ಒಟ್ಟು 73.7 ಸಾವಿರ ಕೋಟಿ ರೂಗಳನ್ನು ಈಗಾಗಲೆ ಪಾವತಿಸಿದೆ.

ಇನ್ನು ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.34 ಲಕ್ಷ ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40 ಸಾವಿರ ಕೋಟಿ ರೂ. ಅವರೆಡನ್ನೂ ಒಟ್ಟು ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರ ಪಾವತಿ ಮಾಡಬೇಕಿರುವುದು ಒಟ್ಟು 1.74 ಲಕ್ಷಕೋಟಿ ರೂ. ಮಾತ್ರ. ಆದರೆ ಅವರುಗಳನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯಾವಕಾಶವಿದೆ.

ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಇಂಧನ ತೆರಿಗೆ ಹೆಸರಲ್ಲಿ ಲಕ್ಷ ಕೋಟಿ ಸಂಗ್ರಹಿಸಿದ ಮೋದಿ ಸರ್ಕಾರ

ಮೋದಿ ಸರ್ಕಾರ ಕಳೆದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿದೆ. 2020-21 ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಶುಲ್ಕ ವಿಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂದ ಹೆಚ್ಚು!

ಮೋದಿ ಸರ್ಕಾರ ಇಂಧನ ದರವನ್ನು ಹೆಚ್ಚಿಸಿ ಸಂಗ್ರಹಿಸಿರುವ ದುಡ್ಡನ್ನು ಹೋಲಿಸಿದರೆ, ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73.7 ಸಾವಿರ ಕೋಟಿ ಮತ್ತು ಬಾಕಿ ಉಳಿದಿರುವ 1.74 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ. ಆದ್ದರಿಂದ ಬಿಜೆಪಿ ನಾಯಕರು, ಸಚಿವರು ಮತ್ತು ಬೆಂಬಲಿಗರು ಹೇಳುತ್ತಿರುವ ಆಯಿಲ್ ಬಾಂಡ್‌ ಸಮಜಾಯಿಷಿ ತಪ್ಪಾಗಿದೆ. ಆಯಿಲ್ ಬಾಂಡ್‌ಗೂ ಇಂಧನ ದರ ಹೆಚ್ಚಳಕ್ಕೂ ದೊಡ್ಡ ಸಂಬಂಧವಿಲ್ಲ.

ಇದನ್ನೂ ಓದಿ: Explainer: GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...