Homeಮುಖಪುಟಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? - BJP ನಾಯಕರ ಹೇಳಿಕೆಯ ನಿಜಾಂಶವೇನು?

ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

- Advertisement -
- Advertisement -

ದೇಶದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುವ ಪೆಟ್ರೋಲ್ ಡೀಸೆಲ್ ಬೆಲೆ ಹಲವೆಡೆ ಲೀಟರ್‌ಗೆ 100 ರೂ ದಾಟಿದೆ. ಇದರಿಂದ ಸಹಜವಾಗಿ ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿದ್ದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ದರ ಹೆಚ್ಚಳಕ್ಕೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ನೇರ ಕಾರಣ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿರುವ ಬಿಜೆಪಿ ಇದನ್ನು ಒಪ್ಪಿಕೊಳ್ಳದೆ ದರ ಹೆಚ್ಚಳಕ್ಕೆ ಹಿಂದಿನ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿದೆ.

ಒಕ್ಕೂಟ ಸರ್ಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಹಿಂದಿನ ಯುಪಿಎ ಸರ್ಕಾರ ಆಯಿಲ್ ಬಾಂಡ್‌ಗಳನ್ನು ನೀಡಿದ್ದೆ ಈಗ ದರ ಎಚ್ಚಳ ಕಾರಣ ಎಂದು ಹೇಳಿದ್ದರು. ಜೊತೆಗೆ ಬುಧವಾರ ರಾಜ್ಯದ ವಿಧಾನಸಭಾ ಅಧಿವೇಶನದಲ್ಲೂ, ಆಡಳಿತ ಪಕ್ಷದ ಸಚಿವರು, ಕಾಂಗ್ರೆಸ್‌ ಸರ್ಕಾರ ಇದ್ದಾಗಿನ ಆಯಿಲ್ ಬಾಂಡ್‌ ಕತೆಗಳನ್ನು ಹೇಳಿದ್ದರು. ಇಂಧನ ದರ ಹೆಚ್ಚಳಕ್ಕೆ ಆದರೆ ಆಯಿಲ್ ಬಾಂಡ್‌ಗಳು ಕಾರಣವೆ? ಇಲ್ಲಿದೆ ಅವುಗಳಿಗೆ ಉತ್ತರ!

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಆಯಿಲ್ ಬಾಂಡ್‌ 

ಯುಪಿಎ-1 ಒಂದರ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು ಪೆಟ್ರೋಲಿಯಂ ಕಂಪೆನಿಗಳಿಗೆ ಆಯಿಲ್ ಬಾಂಡ್ ನೀಡಿದ್ದು ನಿಜವೇ ಆಗಿದೆ. ಆದರೆ ಅದು ನೀಡುವುದಕ್ಕೆ ಕಾರಣವು ಇದ್ದು, ಆ ಸಮಯದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಅತಿ ದುಬಾರಿಯಾಗಿತ್ತು. ಎಷ್ಟೆಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು.

ಹಾಗಾಗಿ ಅದರ ಹೊರೆ ದೇಶದ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು. ಅದರ ಮೇಲೆ ಬಡ್ಡಿ ನೀಡುವುದಾಗಿಯು ಮನಮೋಹನ್ ಸಿಂಗ್ ಅವರ ಸರ್ಕಾರ ಒಪ್ಪಿಕೊಂಡಿತ್ತು.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಈ ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.44 ಲಕ್ಷ ಕೋಟಿ ರೂಗಳಾಗಿದ್ದು, ಬಾಂಡ್‌ಗಳು ‘Mature’ ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ-2 ರ ಸಮಯದಲ್ಲಿ 53 ಸಾವಿರ ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು. ಜೊತೆಗೆ ಈ ಸಮಯದಲ್ಲಿ ‘Mature’ ಆದ ಮೂರು ಆಯಿಲ್‌ ಬಾಂಡ್‌ಗಳ ಮೊತ್ತ 9.7 ಸಾವಿರ ಕೋಟಿ ರೂಗಳನ್ನು ಯುಪಿಎ ಸರ್ಕಾರ ಪಾವತಿಸಿತ್ತು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪಾವತಿಸಿದ ಮೊತ್ತವೆಷ್ಟು?

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70 ಸಾವಿರ ಕೋಟಿ ರೂಗಳನ್ನು ಕಟ್ಟಲಾಗಿದೆ. 2014-15 ರಿಂದ 2018-19 ರ ಅವಧಿಗೆ ‘Mature’ ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3.5 ಸಾವಿರ ಕೋಟಿರೂಗಳನ್ನು ಪಾವತಿಸಲಾಗಿದೆ. ಅಂದರೆ ಮೋದಿ ಸರ್ಕಾರ ಒಟ್ಟು 73.7 ಸಾವಿರ ಕೋಟಿ ರೂಗಳನ್ನು ಈಗಾಗಲೆ ಪಾವತಿಸಿದೆ.

ಇನ್ನು ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.34 ಲಕ್ಷ ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40 ಸಾವಿರ ಕೋಟಿ ರೂ. ಅವರೆಡನ್ನೂ ಒಟ್ಟು ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರ ಪಾವತಿ ಮಾಡಬೇಕಿರುವುದು ಒಟ್ಟು 1.74 ಲಕ್ಷಕೋಟಿ ರೂ. ಮಾತ್ರ. ಆದರೆ ಅವರುಗಳನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯಾವಕಾಶವಿದೆ.

ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಇಂಧನ ತೆರಿಗೆ ಹೆಸರಲ್ಲಿ ಲಕ್ಷ ಕೋಟಿ ಸಂಗ್ರಹಿಸಿದ ಮೋದಿ ಸರ್ಕಾರ

ಮೋದಿ ಸರ್ಕಾರ ಕಳೆದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿದೆ. 2020-21 ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಶುಲ್ಕ ವಿಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂದ ಹೆಚ್ಚು!

ಮೋದಿ ಸರ್ಕಾರ ಇಂಧನ ದರವನ್ನು ಹೆಚ್ಚಿಸಿ ಸಂಗ್ರಹಿಸಿರುವ ದುಡ್ಡನ್ನು ಹೋಲಿಸಿದರೆ, ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73.7 ಸಾವಿರ ಕೋಟಿ ಮತ್ತು ಬಾಕಿ ಉಳಿದಿರುವ 1.74 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ. ಆದ್ದರಿಂದ ಬಿಜೆಪಿ ನಾಯಕರು, ಸಚಿವರು ಮತ್ತು ಬೆಂಬಲಿಗರು ಹೇಳುತ್ತಿರುವ ಆಯಿಲ್ ಬಾಂಡ್‌ ಸಮಜಾಯಿಷಿ ತಪ್ಪಾಗಿದೆ. ಆಯಿಲ್ ಬಾಂಡ್‌ಗೂ ಇಂಧನ ದರ ಹೆಚ್ಚಳಕ್ಕೂ ದೊಡ್ಡ ಸಂಬಂಧವಿಲ್ಲ.

ಇದನ್ನೂ ಓದಿ: Explainer: GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...