Homeಮುಖಪುಟಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? - BJP ನಾಯಕರ ಹೇಳಿಕೆಯ ನಿಜಾಂಶವೇನು?

ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

- Advertisement -
- Advertisement -

ದೇಶದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುವ ಪೆಟ್ರೋಲ್ ಡೀಸೆಲ್ ಬೆಲೆ ಹಲವೆಡೆ ಲೀಟರ್‌ಗೆ 100 ರೂ ದಾಟಿದೆ. ಇದರಿಂದ ಸಹಜವಾಗಿ ಇತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿದ್ದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ದರ ಹೆಚ್ಚಳಕ್ಕೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ನೇರ ಕಾರಣ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿರುವ ಬಿಜೆಪಿ ಇದನ್ನು ಒಪ್ಪಿಕೊಳ್ಳದೆ ದರ ಹೆಚ್ಚಳಕ್ಕೆ ಹಿಂದಿನ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿದೆ.

ಒಕ್ಕೂಟ ಸರ್ಕಾರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಹಿಂದಿನ ಯುಪಿಎ ಸರ್ಕಾರ ಆಯಿಲ್ ಬಾಂಡ್‌ಗಳನ್ನು ನೀಡಿದ್ದೆ ಈಗ ದರ ಎಚ್ಚಳ ಕಾರಣ ಎಂದು ಹೇಳಿದ್ದರು. ಜೊತೆಗೆ ಬುಧವಾರ ರಾಜ್ಯದ ವಿಧಾನಸಭಾ ಅಧಿವೇಶನದಲ್ಲೂ, ಆಡಳಿತ ಪಕ್ಷದ ಸಚಿವರು, ಕಾಂಗ್ರೆಸ್‌ ಸರ್ಕಾರ ಇದ್ದಾಗಿನ ಆಯಿಲ್ ಬಾಂಡ್‌ ಕತೆಗಳನ್ನು ಹೇಳಿದ್ದರು. ಇಂಧನ ದರ ಹೆಚ್ಚಳಕ್ಕೆ ಆದರೆ ಆಯಿಲ್ ಬಾಂಡ್‌ಗಳು ಕಾರಣವೆ? ಇಲ್ಲಿದೆ ಅವುಗಳಿಗೆ ಉತ್ತರ!

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಆಯಿಲ್ ಬಾಂಡ್‌ 

ಯುಪಿಎ-1 ಒಂದರ ಸಮಯದಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಅವರು ಪೆಟ್ರೋಲಿಯಂ ಕಂಪೆನಿಗಳಿಗೆ ಆಯಿಲ್ ಬಾಂಡ್ ನೀಡಿದ್ದು ನಿಜವೇ ಆಗಿದೆ. ಆದರೆ ಅದು ನೀಡುವುದಕ್ಕೆ ಕಾರಣವು ಇದ್ದು, ಆ ಸಮಯದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಅತಿ ದುಬಾರಿಯಾಗಿತ್ತು. ಎಷ್ಟೆಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು.

ಹಾಗಾಗಿ ಅದರ ಹೊರೆ ದೇಶದ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು. ಅದರ ಮೇಲೆ ಬಡ್ಡಿ ನೀಡುವುದಾಗಿಯು ಮನಮೋಹನ್ ಸಿಂಗ್ ಅವರ ಸರ್ಕಾರ ಒಪ್ಪಿಕೊಂಡಿತ್ತು.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಈ ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.44 ಲಕ್ಷ ಕೋಟಿ ರೂಗಳಾಗಿದ್ದು, ಬಾಂಡ್‌ಗಳು ‘Mature’ ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ-2 ರ ಸಮಯದಲ್ಲಿ 53 ಸಾವಿರ ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು. ಜೊತೆಗೆ ಈ ಸಮಯದಲ್ಲಿ ‘Mature’ ಆದ ಮೂರು ಆಯಿಲ್‌ ಬಾಂಡ್‌ಗಳ ಮೊತ್ತ 9.7 ಸಾವಿರ ಕೋಟಿ ರೂಗಳನ್ನು ಯುಪಿಎ ಸರ್ಕಾರ ಪಾವತಿಸಿತ್ತು.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪಾವತಿಸಿದ ಮೊತ್ತವೆಷ್ಟು?

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70 ಸಾವಿರ ಕೋಟಿ ರೂಗಳನ್ನು ಕಟ್ಟಲಾಗಿದೆ. 2014-15 ರಿಂದ 2018-19 ರ ಅವಧಿಗೆ ‘Mature’ ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3.5 ಸಾವಿರ ಕೋಟಿರೂಗಳನ್ನು ಪಾವತಿಸಲಾಗಿದೆ. ಅಂದರೆ ಮೋದಿ ಸರ್ಕಾರ ಒಟ್ಟು 73.7 ಸಾವಿರ ಕೋಟಿ ರೂಗಳನ್ನು ಈಗಾಗಲೆ ಪಾವತಿಸಿದೆ.

ಇನ್ನು ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1.34 ಲಕ್ಷ ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40 ಸಾವಿರ ಕೋಟಿ ರೂ. ಅವರೆಡನ್ನೂ ಒಟ್ಟು ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರ ಪಾವತಿ ಮಾಡಬೇಕಿರುವುದು ಒಟ್ಟು 1.74 ಲಕ್ಷಕೋಟಿ ರೂ. ಮಾತ್ರ. ಆದರೆ ಅವರುಗಳನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯಾವಕಾಶವಿದೆ.

ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಇಂಧನ ತೆರಿಗೆ ಹೆಸರಲ್ಲಿ ಲಕ್ಷ ಕೋಟಿ ಸಂಗ್ರಹಿಸಿದ ಮೋದಿ ಸರ್ಕಾರ

ಮೋದಿ ಸರ್ಕಾರ ಕಳೆದ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಗಳಷ್ಟು ಅಬಕಾರಿ ಸುಂಕ ಸಂಗ್ರಹಿಸಿದೆ. 2020-21 ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಶುಲ್ಕ ವಿಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂದ ಹೆಚ್ಚು!

ಮೋದಿ ಸರ್ಕಾರ ಇಂಧನ ದರವನ್ನು ಹೆಚ್ಚಿಸಿ ಸಂಗ್ರಹಿಸಿರುವ ದುಡ್ಡನ್ನು ಹೋಲಿಸಿದರೆ, ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73.7 ಸಾವಿರ ಕೋಟಿ ಮತ್ತು ಬಾಕಿ ಉಳಿದಿರುವ 1.74 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ. ಆದ್ದರಿಂದ ಬಿಜೆಪಿ ನಾಯಕರು, ಸಚಿವರು ಮತ್ತು ಬೆಂಬಲಿಗರು ಹೇಳುತ್ತಿರುವ ಆಯಿಲ್ ಬಾಂಡ್‌ ಸಮಜಾಯಿಷಿ ತಪ್ಪಾಗಿದೆ. ಆಯಿಲ್ ಬಾಂಡ್‌ಗೂ ಇಂಧನ ದರ ಹೆಚ್ಚಳಕ್ಕೂ ದೊಡ್ಡ ಸಂಬಂಧವಿಲ್ಲ.

ಇದನ್ನೂ ಓದಿ: Explainer: GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...