Homeಮುಖಪುಟಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ಒಬ್ಬರು ವ್ಯಕ್ತಿಯ ಮೇಲೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲು ಪ್ರತಿಭಟನೆ ಆಯೋಜನೆ ಕಾರಣವಷ್ಟೆ ಸಾಕಾ? ಎಂದು ದೆಹಲಿ ಹೈಕೋರ್ಟ್ ಬುಧವಾರ (ಜ.8) ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ವಿರೋಧಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅಮಿತ್ ಪ್ರಸಾದ್ ಅವರಿಗೆ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಪ್ರಶ್ನೆಯನ್ನು ಕೇಳಿದೆ.

ಯುಎಪಿಎ ಅಡಿ ಪ್ರಕರಣ ದಾಖಲಿಸಲು ಪ್ರತಿಭಟನಾ ಸ್ಥಳ ನಿಗದಿ ಮಾಡುವುದು ಅಥವಾ ಪ್ರತಿಭಟನೆ ಆಯೋಜಿಸಿದ ಕಾರಣವಷ್ಟೇ ಸಾಕಾ? ಇಲ್ಲಾ ಆ ಪ್ರತಿಭಟನಾ ಸ್ಥಳದಲ್ಲಿ ಹಿಂಸಾಚಾರ ನಡೆದಿರಬೇಕಾ? ನಿಮ್ಮ ವಾದ ಏನು? ಈಗ ಯಾವುದನ್ನು ಯುಎಪಿಎ ಅಡಿ ಪರಿಗಣಿಸಬೇಕು? ಎಂದು ನ್ಯಾಯಪೀಠ ಪ್ರಶ್ನಿಸಿದೆ. 

ಆರೋಪಿಗಳು ಗಲಭೆಗೆ ಸಂಚು ರೂಪಿಸಿದ್ದರು ಮತ್ತು ಅದನ್ನು ವಾಟ್ಸಾಪ್‌ ಚಾಟ್‌ಗಳ ಮೂಲಕ ಕಾರ್ಯಗತಗೊಳಿಸಿದ್ದಾರೆ ಎಂದು ಎಸ್‌ಪಿಪಿ ಪ್ರಸಾದ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಅಲ್ಲದೆ, ಇಬ್ಬರು ಆರೋಪಿಗಳು ಯಾರು, ಯಾರಿಗೆ, ಏನು ಸಂದೇಶ ಕಳಿಸಿದ್ದರು ಎಂದು ಓದಲು ಶುರು ಮಾಡಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಯುಎಪಿಎ ವಿಧಿಸಲು ಪ್ರತಿಭಟನೆ ಆಯೋಜಿಸುವುದಷ್ಠೇ ಸಾಕಾ? ಆರೋಪಿಗಳು ಹಿಂಸಾತ್ಮಕ ಕೃತ್ಯವನ್ನು ಯೋಜಿಸಿ ಅದನ್ನು ಕಾರ್ಯಗತಗೊಳಿಸಿದ್ದಾರೆ ಎಂಬುವುದಕ್ಕೆ ಪುರಾವೆಗಳಿದ್ದರೆ, ಭಯೋತ್ಪಾದನಾ ವಿರೋಧಿ ಕಾನೂನಿನ ನಿಬಂಧನೆಗಳನ್ನು ಅನ್ವಯಿಸಬಹುದು. ಆದರೆ ವಾಟ್ಸಾಪ್ ಗುಂಪು ಮೂಲಕ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದಾರೆ ಎಂಬುದು ನಿಮ್ಮ ವಾದವಾಗಿದೆ, ಅದು ಯುಎಪಿಎ ದಾಖಲಾತಿಗೆ ಸಾಕಾ? ಎಂದು ಕೇಳಿದೆ.

ಈ ವೇಳೆ ಶಾಹೀನ್ ಬಾಗ್ ಪ್ರತಿಭಟನೆಯನ್ನು ಉಲ್ಲೇಖಿಸಿದ ಎಸ್‌ಪಿಪಿ ಪ್ರಸಾದ್, ಆ ಪ್ರತಿಭಟನೆ ಕೂಡ ಅದಾಗಿಯೇ ನಡೆದಿರುವುದಲ್ಲ. ಅದರ ಹಿಂದೆ ದೊಡ್ಡ ಯೋಜನೆ ರೂಪಿಸಲಾಗಿತ್ತು. ಸ್ಥಳೀಯರು ಕೂಡ ಬೆಂಬಲಿಸದಿದ್ದಾಗ ಅದು ಹೇಗೆ ಅದಾಗಿಯೇ ಆದ ಪ್ರತಿಭಟನೆಯಾಗಲು ಸಾಧ್ಯ ಎಂದು ಹೇಳಿದ್ದಾರೆ.

ಯಾವ ಆರೋಪಿ, ಯಾವ ನಿರ್ದಿಷ್ಟ ವಾಟ್ಸಾಪ್ ಗುಂಪಿನ ಸದಸ್ಯನಾಗಿದ್ದಾನೆ ಎಂಬುವುದನ್ನು ತೋರಿಸುವ ಚಾರ್ಟ್ ರಚಿಸಲು ಎಸ್‌ಪಿಪಿಗೆ ಸೂಚಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಇದನ್ನೂ ಓದಿ : ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...