Homeಮುಖಪುಟಕುಸ್ತಿ ಸಂಘದ ವಿಷಯದಲ್ಲಿ ಪ್ರಧಾನಮಂತ್ರಿಗಳ ಅಸಹಾಯಕತೆಯೇನು?

ಕುಸ್ತಿ ಸಂಘದ ವಿಷಯದಲ್ಲಿ ಪ್ರಧಾನಮಂತ್ರಿಗಳ ಅಸಹಾಯಕತೆಯೇನು?

- Advertisement -
- Advertisement -

ಮೊದಲು ರೈತರು ಕೇಳುತ್ತಿದ್ದ ಪ್ರಶ್ನೆಯನ್ನು ಈಗ ಕುಸ್ತಿಪಟುಗಳು ಕೇಳುತ್ತಿದ್ದಾರೆ: ಪ್ರಧಾನಿಗಳು ಸುಮ್ಮನಿರುವುದಾದರೂ ಏತಕ್ಕೆ? ಅಪರಾಧದ ದಾಖಲೆ ಹೊಂದಿರುವ ಮತ್ತು ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ನಾಯಕರ ವಿರುದ್ಧ ಅವರು ಕ್ರಮ ಏಕೆ ಕೈಗೊಳ್ಳುವುದಿಲ್ಲ? ಅಷ್ಟಕ್ಕೂ ಪ್ರಧಾನಮಂತ್ರಿಯವರ ಅಸಹಾಯಕತೆ ಏನು? ಎಂದು.

ಮಹಿಳಾ ಕುಸ್ತಿಪಟುಗಳು ಹೊರಿಸಿದ ಆರೋಪಗಳು ಸಾಮಾನ್ಯ ಆರೋಪಗಳಲ್ಲ. ಯಾವುದೇ ಸಂವೇದನಾಶೀಲ ವ್ಯಕ್ತಿಯ ಹೃದಯ ಕಂಪಿಸಬೇಕು, ಯಾವುದೇ ದೇಶಭಕ್ತನು ತಲೆಬಾಗಬೇಕು, ಅಂತಹ ಆರೋಪಗಳವು. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಇಂದಿನಿಂದಲ್ಲ, ಸುಮಾರು 10 ವರ್ಷಗಳಿಂದ ನಡೆಯುತ್ತಿದೆ. ಕೇವಲ ಒಬ್ಬ ವ್ಯಕ್ತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವಿಲ್ಲ, ಕುಸ್ತಿ ಫೆಡರೇಷನ್‌ನ ಅನೇಕ ಕೋಚ್‌ಗಳೂ ಶಾಮೀಲಾಗಿದ್ದಾರೆ ಎಂದು ಆರೋಪಗಳಿವೆ. ಈ ದೌರ್ಜನ್ಯದ ಬಲಿಪಶು ಆದವರಲ್ಲಿ ಅಪ್ರಾಪ್ತ ಬಾಲಕಿಯರೂ ಇದ್ದಾರೆ ಮತ್ತು ಈ ಆರೋಪ ಹೊರಿಸಿದ್ದು ಕೇವಲ ಒಬ್ಬ ಮಹಿಳೆ ಅಲ್ಲ, ಅನೇಕ ಮಹಿಳೆಯರು ಆರೋಪಗಳನ್ನು ಮಾಡಿದ್ದಾರೆ. ಆರೋಪದ ಗಂಭೀರತೆಯನ್ನು ಖುದ್ದು ಸುಪ್ರೀಂಕೋರ್ಟ್ ಸ್ವೀಕರಿಸಿದೆ. ಇದಿಷ್ಟೇ ಅಲ್ಲದೆ, ಎರಡು ವರ್ಷಗಳ ಮುಂಚೆಯೇ ಸಾಕ್ಷಿ ಮಲಿಕ್ಪ್ರಧಾನಮಂತ್ರಿಗೆ ನೇರವಾಗಿ  ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೂರನ್ನು ನೀಡಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಇದು ಮೊದ ಆರೋಪವೇನೂ ಅಲ್ಲ. ಆರು ಬಾರಿ ಲೋಕಸಭೆಯ ಸದಸ್ಯನಾಗಿರುವ ಬ್ರಿಜ್ ಭೂಷಣ್‌ನ ಚುನಾವಣಾ ಅಫಿಡವಿಟ್ ಆತನ ಅಪರಾಧದ ದಾಖಲೆಯ ಕಥೆ ಬಿಚ್ಚಿಡುತ್ತದೆ. ಕಳೆದ ಲೋಕಸಭೆ ಚುನಾವಣೆಗಳಲ್ಲಿ ಅವನ ಅಫಿಡವಿಟ್‌ನಲ್ಲಿ ಸೆಕ್ಷನ್ 307 (ಕೊಲೆ ಯತ್ನ) ಸೇರಿದಂತೆ ನಾಲ್ಕು ಅಪರಾಧದ ವಿಷಯಗಳ ಉಲ್ಲೇಖವಿದೆ. ಕೊಲೆಯ ಇನ್ನೊಂದು ಪ್ರಕರಣದಲ್ಲಿ ಆತನನ್ನು ಸಾಕ್ಷ್ಯದ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್

ಸಂಸದ ಮಹಾಶಯರು ಖುದ್ದು ತಮ್ಮ ಅಪರಾಧಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ವರ್ಷ ಲಲ್ಲನ್‌ಟಾಪ್‌ಗೆ ನೀಡಿದ ವಿಡಿಯೋ ಸಂದರ್ಶನದಲ್ಲಿ ಅವರೇ ಹೇಳಿದ್ದು: ’ನನ್ನ ಜೀವನದಲ್ಲಿ ನನ್ನ ಕೈಯಿಂದ ಒಂದು ಕೊಲೆಯಾಗಿದೆ, ಜನರು ಏನೇ ಹೇಳಲಿ, ನಾನು ಒಂದು ಕೊಲೆ ಮಾಡಿದ್ದೇನೆ..’ ಎಂದು; ಆದರೆ ಆ ಕೊಲೆಯ ಪ್ರಕರಣದಲ್ಲಿ ಈತನ ಮೇಲೆ ವಿಚಾರಣೆಯೇ ನಡೆದಿಲ್ಲ, ಇದರ ಯಾವ ದಾಖಲೆಯೂ ಇಲ್ಲ. 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೋಂಡಾದಿಂದ ಬಿಜೆಪಿ ಈತನ ಬದಲು ಘನಷ್ಯಾಮ್ ಶುಕ್ಲರನ್ನು ಅಭ್ಯರ್ಥಿಯನ್ನಾಗಿ ಮಾಡಿದಾಗ ಮತದಾನದ ದಿನದಂದು ಒಂದು ದುರ್ಘಟನೆಯಲ್ಲಿ ಶುಕ್ಲ ಅವರು ನಿಧನರಾದರು. ಈ ಸಾವಿನ ಹಿಂದೆ ಬ್ರಿಜ್ ಭೂಷಣ್‌ನ ಕೈವಾಡ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದು ಬೇರೆ ಯಾರೂ ಅಲ್ಲ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರೇ. ಈ ವಿಷಯವನ್ನು ಬಹಿರಂಗಪಡಿಸಿದ್ದು ಬೇರೆ ಯಾರೂ ಅಲ್ಲ, ಖುದ್ದು ಬ್ರಿಜ್ ಭೂಷಣ್ ’ದಿ ಸ್ಕ್ರಾಲ್’ಗೆ ನೀಡಿದ ಒಂದು ಸಂದರ್ಶನದಲ್ಲಿ ಹೇಳಿದ್ದರು.

ಪ್ರಶ್ನೆ ಏನೆಂದರೆ, ಇಂತಹ ವ್ಯಕ್ತಿಗೆ ಪ್ರಧಾನಮಂತ್ರಿಗಳ ರಕ್ಷಣೆ ಹೇಗೆ ಪ್ರಾಪ್ತಿಯಾಯಿತು? ಪ್ರಶ್ನೆಯ ಆಳಕ್ಕೆ ಹೋದರೆ, ನಿಮಗೆ ಸಿಗುವುದೇನೆಂದರೆ, ಬ್ರಿಜ್ ಭೂಷಣ್ ಮಾತ್ರ ಒಂದು ಅಪವಾದವೇನಲ್ಲ ಎಂಬ ಕಟುವಾಸ್ತವ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪಗಳಿರುವ ಬಿಜೆಪಿಯ ನಾಯಕರ ಒಂದು ದೀರ್ಘ ಪಟ್ಟಿಯನ್ನೇ ಮಾಡಬಹುದು, ಆದರೆ ಬಿಜೆಪಿ ಅಥವಾ ಪ್ರಧಾನಮಂತ್ರಿ ಮೂಲಕ ಅವರಲ್ಲಿ ಬಹುತೇಕರ ಮೇಲೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ ಎಂಬುದೂ ಸತ್ಯ.

ಈ ಪಟ್ಟಿಯಲ್ಲಿ ಕುಲದೀಪ್ ಸೆಂಗರ್, ಚಿನ್ಮಯಾನಂದ ಸ್ವಾಮಿ, ಸಾಕ್ಷಿ ಮಹಾರಾಜ್, ಎಂ.ಜೆ ಅಕ್ಬರ್, ಉಮೇಶ್ ಅಗರ್ವಾಲ್, ಬರ್ನಾರ್ಡ್ ಮರಾಕ್ ಹಾಗೂ ಸಂದೀಪ್ ಸಿಂಗ್ ಅವರುಗಳ ಹೆಸರು ಇರಹುದು. ಅತ್ತ ತಥಾಕಥಿತ ಸ್ವಘೋಷಿತ ದೇವಮಾನವರಾದ ಬಾಬಾ ರಾಮ ರಹೀಮ್ ಮತ್ತು ಆಸಾರಾಮ್ ನಂತವರು ಬಿಜೆಪಿಗೆ ನಿಕಟವಾಗಿದ್ದರು ಎಂಬ ಕಟುಸತ್ಯ ಎಲ್ಲರಿಗೂ ತಿಳಿದಿದ್ದೇ ಇದೆ.

ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

ಹಿಂದಿನ ಕೆಲವು ವರ್ಷಗಳಲ್ಲಿ, ನಮ್ಮ ಪ್ರಧಾನಮಂತ್ರಿಯವರ ವಿವಿಧ ಅಧಿಕಾರಾವಧಿಯಲ್ಲಿ ಹಾಥರಸ್, ಕಠುವಾ ಅಥವಾ ಬಿಲ್ಕಿಸ್ ಬಾನೋರಂತಹ ಮಹಿಳೆಯರ ವಿರುದ್ಧ ಬಲಾತ್ಕಾರ ಅಥವಾ ಶೋಷಣೆಯ (ಅಪರಾಧಿಗಳನ್ನು ಬಿಡುಗಡೆ ಮಾಡಿದ್ದು ಸೇರಿ) ಪ್ರಮುಖ ಘಟನೆಗಳ ಬಗ್ಗೆಯೂ ಪ್ರಧಾನಮಂತ್ರಿಗಳು ವಿಚಿತ್ರವಾದ ಮೌನ ವಹಿಸಿದ್ದಾರೆ.

ಈ ಪ್ರಶ್ನೆ ಹೊಸದಲ್ಲ. ಕೇಂದ್ರೀಯ ಗೃಹ ರಾಜ್ಯ ಸಚಿವ ಅಜಯ್ ಮಿಶ್ರ ಟೇನಿಯ ಬಗ್ಗೆಯೂ ರೈತರು ಇದೇ ಪ್ರಶ್ನೆಯನ್ನು ಕೇಳಿದ್ದರು. ಹಾಡುಹಗಲೇ ರೈತರನ್ನು ಕೊಂದ ಆರೋಪಿಯ ತಂದೆ ಹಾಗೂ ಆ ಹತ್ಯಾಕಾಂಡದ ಪಿತೂರಿಯ ಪ್ರಮುಖ ಆರೋಪಿ ಅಜಯ್ ಮಿಶ್ರ ಟೇನಿ ಇಂದಿಗೂ ಮಂತ್ರಿಮಂಡಲದಲ್ಲಿ ಏಕೆ ಇದ್ದಾರೆ? ಇಂದು ಅದೇ ಪ್ರಶ್ನೆ ಬ್ರಿಜ್ ಭೂಷಣ್ ಸಿಂಗ್ ಬಗ್ಗೆ ಎತ್ತಲಾಗಿದೆ. ಬೇಟಿ ಬಚಾವೊ ಎಂಬ ಘೋಷಣೆ ನೀಡಿದ ಪ್ರಧಾನಮಂತ್ರಿ, ಅಪ್ರಾಪ್ತ ಬಾಲಕಿಯ ಮೇಲೆ ಆದ ಲೈಂಗಿಕ ದೌರ್ಜನ್ಯದ ಆರೋಪ ಬಂದ ಮೇಲೂ ಬ್ರಿಜ್ ಭೂಷಣ್‌ಗೆ ಅಭಯಹಸ್ತ ಏಕೆ ನೀಡಿದ್ದಾರೆ? ಈ ಆಟಗಾರರನ್ನು ಭಾರತದ ಹೆಮ್ಮೆ ಎನ್ನುವ ಮೋದೀಜಿ ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಕುಸ್ತಿ ಸಂಘದ ಅಧ್ಯಕ್ಷ ಪದದಿಂದ ತೆಗೆದುಹಾಕುವ ಸಾಮಾನ್ಯ ಕ್ರಮ ಕೈಗೊಳ್ಳಲು ಏಕೆ ಹಿಂಜರಿಯುತ್ತಿದ್ದಾರೆ? ಈ ವರ್ಷ ಜನವರಿಯಲ್ಲಿ ಈ ಹಗರಣ ಸಾರ್ವಜನಿಕ ಆದ ಮೇಲೂ ಹಾಗೂ ಆಟಗಾರರಿಗೆ ಸೂಕ್ತ ಕ್ರಮ ಆಶ್ವಾಸನೆ ನೀಡಿದ ಮೇಲೂ ಯಾವುದೇ ಕ್ರಮ ಯಾಕೆ ಕೈಗೊಳ್ಳಲಾಗಲಿಲ್ಲ?

ನರೇಂದ್ರ ಮೋದಿ

ಈ ಪ್ರಶ್ನೆಗೆ ಎರಡು ಉತ್ತರಗಳು ಸಾಧ್ಯ. ಒಂದೋ ರಾಜಕೀಯ ಅನಿವಾರ್ಯತೆಯ ವಿಷಯವಿದೆ ಅಥವಾ ನೈತಿಕ ದೌರ್ಬಲ್ಯದ ವಿಷಯ. ಲೈಂಗಿಕ ದೌರ್ಜನ್ಯದ ಈ ಎಲ್ಲ ಆರೋಪಿಗಳು ತಮ್ಮ ತಮ್ಮ ಪ್ರದೇಶದ ಪ್ರಬಲ ನಾಯಕರಾಗಿದ್ದಾರೆ ಹಾಗೂ ಕೆಲವು ಜಾತಿಗಳ ಮತಗಳಿಗೆ ಗುತ್ತಿಗೆದಾರರಾಗಿದ್ದಾರೆ. ಈ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವುದರ ಅರ್ಥ, ಬಿಜೆಪಿಯ ವೋಟ್ ಬ್ಯಾಂಕ್‌ನಲ್ಲಿ ಆ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಅಪಾಯವಿದೆ. ಒಂದು ವೇಳೆ ಇದೇ ಕಾರಣವಾಗಿದ್ದರೆ, ಇನ್ನೂ ಕೆಲವು ಪ್ರಶ್ನೆಗಳು ಉದ್ಭವಿಸುತ್ತವೆ: ದೇಶದ ’ಎಲ್ಲಕ್ಕಿಂತ ಜನಪ್ರಿಯ ಮತ್ತು ಪ್ರಬಲ’ ನಾಯಕ ಕೆಲವು ಸ್ಥಳೀಯ ಪ್ರಭಾವಶಾಲಿ ನಾಯಕರ ಎದುರಿಗೆ ಇಷ್ಟೊಂದು ದೈನೇಸಿಯಾಗಿದ್ದಾರೆಯೇ? ಅಷ್ಟಕ್ಕೂ ಬ್ರಿಜ್ ಭೂಷಣ್ ತಾನು ಬಾಯಿ ಬಿಚ್ಚಿದರೆ ಸುನಾಮಿ ಬಂದುಬಿಡುತ್ತೆ ಎಂದು ಯಾವ ಆಧಾರದ ಮೇಲೆ ಬೆದರಿಕೆ ಹಾಕುತ್ತಾನೆ? ಅನೇಕ ದೊಡ್ಡದೊಡ್ಡ ನಾಯಕರನ್ನು ಅಂಚಿಗೆ ತಳ್ಳಿದ ನರೇಂದ್ರ ಮೋದಿ, ಈ ಅರೋಪಿತ ನಾಯಕನ ಎದುರು ಯಾಕೆ ಅಸಹಾಯಕರಾಗಿದ್ದಾರೆ? ಹಾಗೂ ಒಂದು ವೇಳೆ ಅಸಹಾಯಕರಾಗಿದ್ದಲ್ಲಿ, ಯಾವ ಬಾಯಿಂದ ರಾಷ್ಟ್ರದ ಹೆಮ್ಮೆ ಮತ್ತು ಬೇಟಿ ಬಚಾವೊ ಮಾತುಗಳನ್ನಾಡುತ್ತಾರೆ?

ಮತ್ತೊಂದು ಕೋನದಲ್ಲಿ ಯೋಚಿಸುವುದಾದರೆ, ಮಹಿಳೆಯರ ವಿರುದ್ಧ ಆಗುವ ಈ ಅಪರಾಧಗಳನ್ನು ಪ್ರಧಾನಮಂತ್ರಿ ಹಗುರವಾಗಿ ಪರಿಗಣಿಸುತ್ತಾರೆಯೇ? ಅಥವಾ ಪ್ರಧಾನಮಂತ್ರಿಯೂ, ಹೆಚ್ಚೆಚ್ಚು ಮಹಿಳೆಯರೊಂದಿಗೆ ಆಗುವ ಕಿರುಕುಳವನ್ನು ನೋಡಿ ನಕ್ಕು ತಮಾಷೆ ಮಾಡುವ, ಕೌಟುಂಬಿಕ ಹಿಂಸೆಯ ವಾಸ್ತವವನ್ನು ನಿರಾಕರಿಸುವ ಮತ್ತು ಬಲಾತ್ಕಾರದಂತಹ ಘೋರ ಅಪರಾಧಗಳ ಬಗ್ಗೆ ’ಇವೆಲ್ಲ ಮಾಮೂಲಿ’ ಎಂಬ ನಿಲುವನ್ನು ತೆಗೆದುಕೊಳ್ಳುವ ಪುರುಷ ಅಹಂಕಾರದ ಬಲಿಪಶುಗಳಾಗಿದ್ದಾರೆಯೇ? ಪ್ರಧಾನಮಂತ್ರಿಗಳ ಮನಸ್ಸಿನಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ ಹಾಗೂ ಇದು ಸತ್ಯ ಅಲ್ಲ ಎಂದೇ ನಾವು ಆಶಿಸಬೇಕಿದೆ. ಆದರೆ, ಸಾಕ್ಷಿ ಮಲಿಕ್‌ಳ ಕಣ್ಣೀರು, ಬ್ರಿಜ್ ಭೂಷಣ್‌ನ ಅಹಂಕಾರದ ಠೀವಿ ಮತ್ತು ಪ್ರಧಾನಮಂತ್ರಿಯ ಮೌನವನ್ನು ನೋಡುವ ಕೋಟ್ಯಂತರ ಮಹಿಳೆಯರಿಗೆ ಹೀಗೇ ಅನಿಸಬಹುದಲ್ಲವೇ? ಎಲ್ಲಿಯವರೆಗೆ ಪ್ರಧಾನಮಂತ್ರಿ ತಮ್ಮ ಬಾಯಿ ಬಿಚ್ಚುವುದಿಲ್ಲವೋ, ಅಲ್ಲಿಯವರೆಗೆ ಈ ಪ್ರಶ್ನೆ ಎಲ್ಲರ ಕಣ್ಣುಮುಂದೆಯೇ ಇರಲಿದೆ.

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಕುಸ್ತಿಪಟುಗಳು ಭಾರತದ ’ಬೇಟಿ’ಗಳಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...