Homeಕರ್ನಾಟಕಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಎಸ್‌ಎಸ್‌ಕೆ ಸಮಾಜದ ಯಾರಾದರೂ ಮುಸ್ಲಿಮರೊಂದಿಗೆ ವಿವಾಹವಾದರೆ ಸಾಮಾಜಿಕ ಬಹಿಷ್ಕಾರ ಹಾಕಬೇಕೆಂದು ಸಲಹೆ ನೀಡಿರುವ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿ ಅವರನ್ನು ‘ನಾನುಗೌರಿ.ಕಾಂ’ ಸಂದರ್ಶಿಸಿದೆ.

- Advertisement -
- Advertisement -

ಸೋಮವಂಶ ಸಹಾಸ್ರಾರ್ಜುನ ಕ್ಷತ್ರಿಯ (ಎಸ್‌ಎಸ್‌ಕೆ) ಸಮಾಜದ ಮುಖ್ಯ ಧರ್ಮದರ್ಶಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿಯವರು ಪತ್ರ ಬರೆದಿದ್ದು, ಎಸ್‌ಎಸ್‌ಕೆ ಸಮಾಜದ ಹೆಣ್ಣು ಹಾಗೂ ಗಂಡು ಮಕ್ಕಳು ಮುಸ್ಲಿಂ ಸಮಾಜದ ಜೊತೆ ವಿವಾಹವಾದರೆ ಸಾಮಾಜಿಕ ಬಹಿಷ್ಕಾರ ಹಾಕಬೇಕೆಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ಎಸ್‌ಎಸ್‌ಕೆ ಸಮಾಜದ ಯುವತಿಯೊಬ್ಬರು ಮುಸ್ಲಿಂ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಇದಕ್ಕೆ ‘ಲವ್‌ ಜಿಹಾದ್‌’ ಎಂದು ಕರೆದು ವಿವಾದ ಸೃಷ್ಟಿಸಲು ಯತ್ನಿಸಿದಾಗ, ಯುವತಿ ಸ್ಪಷ್ಟನೆ ನೀಡಿದ್ದಳು. ತಾನು ಇಷ್ಟಪಟ್ಟು ಮದುವೆಯಾಗಿದ್ದೇನೆಂದು ಯುವತಿ ಹೇಳಿದ್ದರಿಂದ, ವಿವಾದ ಸೃಷ್ಟಿಸಲು ಯತ್ನಿಸಿದವರಿಗೆ ಹಿನ್ನಡೆಯಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಗೇಶ್ ಅವರ ಪತ್ರ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಜದ ಮುಖ್ಯ ಧರ್ಮದರ್ಶಿ ಹಾಗೂ ಕೇಂದ್ರ ಪಂಚ ಟ್ರಸ್ಟ್‌ ಕಮಿಟಿ ಸದಸ್ಯರಿಗೆ ಪತ್ರ ಬರೆದಿರುವ ಅವರು, “ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಸಮಾಜದ ಯುವಕರು ನಮ್ಮ ಸಮಾಜದ ಹೆಣ್ಣು ಮಕ್ಕಳನ್ನು ಟಾರ್ಗೆಟ್‌ ಮಾಡಿ ಲವ್‌ ಜಿಹಾದ್‌ನಲ್ಲಿ ಸಿಲುಕಿಸಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಈಗ ಸಮಾಜ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಯಾರು ಮುಸ್ಲಿಂ ಸಮಾಜದ ಯುವಕರನ್ನು, ಹೆಣ್ಣುಮಕ್ಕಳನ್ನು ಮದುವೆ ಆಗಿರುತ್ತಾರೋ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

“ಮುಸ್ಲಿಮರೊಂದಿಗೆ ವಿವಾಹವಾದ ಕುಟುಂಬವನ್ನು ಸಮಾಜದಿಂದ ಹೊರಗಿಡುವುದು, ಆ ಕುಟುಂಬಕ್ಕೆ ಸಮಾಜದ ಯಾವುದೇ ದೇವಸ್ಥಾನದಲ್ಲಿ ಪ್ರವೇಶ ನಿರಾಕರಿಸುವುದು, ಸಮಾಜದ ಜನ ಯಾರೂ ಹೆಣ್ಣು ಕೊಡದಿರುವುದು ಮತ್ತು ತೆಗೆದುಕೊಳ್ಳದಿರುವುದು, ಸಮಾಜದ ಜನ ತಮ್ಮ ಮನೆಯ ಯಾವುದೇ ಕಾರ್ಯಕ್ರಮದಲ್ಲಿ ಕರೆಯದಿರುವುದು, ಅವರ ಮನೆಯಲ್ಲಿ ಭಾಗವಹಿಸದಿರುವುದು” ಎಂಬ ಸಲಹೆಗಳನ್ನು ನಾಗೇಶ್ ನೀಡಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

“ಇಂತಹ ಕಠಿಣ ಕ್ರಮಕೈಗೊಳ್ಳುವುದರಿಂದ ಸಮಾಜದಲ್ಲಿ ಎಚ್ಚರಿಕೆ ಗಂಟೆ ಭಾರಿಸವುದು ಅನಿವಾರ್ಯವಾಗಿದೆ. ಈ ವಿಚಾರವಾಗಿ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಟ್ರಸ್ಟ್‌ ಕಮಿಟಿಯ ಸಭೆಯಲ್ಲಿ ದೀರ್ಘವಾಗಿ ಚರ್ಚಿಸಿ ಸಮಾಲೋಚಿಸಿ” ಎಂದು ಅವರು ವಿನಂತಿಸಿಕೊಂಡಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರದ ಲೆಟರ್‌ ಹೆಡ್‌ನಲ್ಲಿ ನಾಗೇಶ್‌ ಪಿ.ಕಲಬುರ್ಗಿಯವರು ಪತ್ರ ಬರೆದಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಪತ್ರವನ್ನು ಹೇಗಾದರೂ ಬರೆದಿರಲಿ, ಈ ರೀತಿಯ ಬಹಿಷ್ಕಾರ ಸಂವಿಧಾನ ಬಾಹಿರವಲ್ಲವೇ? ಎಂಬ ಪ್ರಶ್ನೆಯನ್ನು ಮುಖ್ಯವಾಗಿಟ್ಟುಕೊಂಡು ‘ನಾನುಗೌರಿ.ಕಾಂ’ ನಾಗೇಶ್ ಅವರನ್ನು ಸಂಪರ್ಕಿಸಿತು. ಹಲವಾರು ಪ್ರಶ್ನೆಗಳನ್ನು ಕೇಳಲಾಗಿದ್ದು, ಹಾರಿಕೆಯ ಉತ್ತರಗಳನ್ನು ನಾಗೇಶ್‌ ನೀಡಿದ್ದಾರೆ.

“ಇದು ಪ್ರಾಧಿಕಾರದಿಂದ ಬರೆದ ಅಧಿಕೃತ ಪತ್ರವಲ್ಲ” ಎಂದು ಅವರು ಮೊದಲಿಗೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂ: “ಅಧಿಕೃತ ಪತ್ರವೋ ಅಲ್ಲವೋ ಬದಿಗಿರಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು, ಈ ರೀತಿಯಲ್ಲಿ ಸಂವಿಧಾನ ಬಾಹಿರ ನಿಲುವು ತಾಳಬಹುದೇ? ಮದುವೆ ಎಂಬುದು ವೈಯಕ್ತಿಕ ಆಯ್ಕೆ. ಒಂದು ಕುಟುಂಬವನ್ನು ಬಹಿಷ್ಕರಿಸುವ ಅಧಿಕಾರ ನಿಮಗೆ ಇದೆಯೇ?’’

ನಾಗೇಶ್‌: ನಮ್ಮ ಸಮಾಜದ ಹುಡುಗಿ ಲವ್‌ ಜಿಹಾದ್‌ನಲ್ಲಿ ಸಿಲುಕಿ ರಿಜಿಸ್ಟ್ರಾರ್‌ ಮದುವೆ ಆಗಿದ್ದಾಳೆ. ‌ಇದನ್ನು ಸಮಾಜದ ಮುಖಂಡರು ವಿರೋಧಿಸಿದ್ದಾರೆ. ಹೀಗೇಕೆ ಆಗುತ್ತಿದೆ ಎಂದು ಧರ್ಮದರ್ಶಿಗಳು ಚರ್ಚೆ ಮಾಡಿದರು. ಸಮಾಜದಲ್ಲಿ ಸ್ವಲ್ಪ ಎಚ್ಚರಿಕೆ ಘಂಟೆ ಬಾರಿಸಬೇಕು. ಹಾಗಾದಾಗ ಮಾತ್ರ ಇಂಥವು ಕಡಿಮೆಯಾಗಬಹುದು ಎಂದು ಅವರಲ್ಲಿ ತಿಳಿಸಿದೆ. ಕೆಲವು ಸಲಹೆ ನೀಡುವಂತೆ ಧರ್ಮದರ್ಶಿಗಳು ಸೂಚಿಸಿದರು. ಹೀಗಾಗಿ ಐದು ಸಲಹೆಗಳನ್ನು ಕೊಟ್ಟಿದ್ದೇನೆ. ಅವುಗಳನ್ನು ಒಪ್ಪುವುದು, ಬಿಡುವುದು ಸಮಿತಿಗೆ ಬಿಟ್ಟಿದ್ದು.

ಇದನ್ನೂ ಓದಿರಿ: ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌

ನಾನುಗೌರಿ.ಕಾಂ: ಅಧಿಕೃತ ಪತ್ರವೋ, ಅಲ್ಲವೋ ಬೇರೆ ಪ್ರಶ್ನೆ. ನೀವು ಸಮಾಜವನ್ನು ನೋಡುತ್ತೀರೋ; ಜಾತಿ, ಧರ್ಮ ತಾರತಮ್ಯ ನಿರ್ಬಂಧಿಸಿರುವ, ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ ಎಂದಿರುವ ಸಂವಿಧಾನವನ್ನು ಪಾಲನೆ ಮಾಡುತ್ತೀರೋ?

ನಾಗೇಶ್‌: ಸಮಾಜದವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ. ಸಮಾಜಕ್ಕಿಂತ ದೊಡ್ಡವನು ನಾನಲ್ಲ.

ನಾನುಗೌರಿ.ಕಾಂ: ಸಂವಿಧಾನ ದೊಡ್ಡದೋ ಸಮಾಜ ದೊಡ್ಡದೋ ತಿಳಿಸಿ.

ನಾಗೇಶ್‌: ಸಂವಿಧಾನವೂ ಬೇಕು, ಸಮಾಜವೂ ಬೇಕು. ಸಮಾಜದ ರಕ್ಷಣೆಯಾಗಬೇಕಲ್ಲ? ನಾನು ಸಲಹೆಗಳನ್ನು ನೀಡಿದ್ದೇನೆಯೇ ಹೊರತು, ಜಾರಿ ಮಾಡಲೇಬೇಕು ಎಂದು ಹಠ ಹಿಡಿದಿಲ್ಲ. ಸಂವಿಧಾನ ವಿರೋಧಿಯಾಗಿದ್ದರೆ ಸಮಾಜ ಸಲಹೆಗಳನ್ನು ಸಮಾಜ ನಿರಾಕರಿಸುತ್ತದೆ. ಸಂವಿಧಾನಕ್ಕಿಂತ ದೊಡ್ಡವರು ಯಾರು? ನಮ್ಮ ಸಮಾಜದ ಯುವತಿ ಮುಸ್ಲಿಂ ಸಮುದಾಯದವರನ್ನು ಮದುವೆಯಾದಲ್ಲಿ, ಇಡೀ ಕುಟುಂಬವೇ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಜಾಗೃತಿ ಮೂಡಿಸಲು ಪತ್ರ ಬರೆದಿದ್ದೇನೆ. ಇದನ್ನು ಜಾರಿ ಮಾಡಲೇಬೇಕೆಂದು ಹೇಳುತ್ತಿಲ್ಲ. ಸಮಾಜದಲ್ಲಿ ಹೆದರಿಕೆ ಹುಟ್ಟಿಲಿ ಎಂದು ಬರೆದಿದ್ದೇನೆ.

ನಾನುಗೌರಿ.ಕಾಂ: ಮದುವೆ ಎಂಬುದು ವೈಯಕ್ತಿಕ ನಿರ್ಧಾರವಾಗಿರುವಾಗ ಹೆದರಿಕೆ ಹುಟ್ಟಿಸಲು ನೀವ್ಯಾರು?

ನಾಗೇಶ್‌: ಸಮಾಜ ರಕ್ಷಣೆಯನ್ನು ನಾವು ಮಾಡಬೇಕಾಗುತ್ತದೆ.

ನಾನುಗೌರಿ.ಕಾಂ: ಸಂವಿಧಾನ ಬಾಹಿರವಾಗಿ ಸಮಾಜವನ್ನು ರಕ್ಷಣೆ ಮಾಡಬಾರದಲ್ಲ?

ನಾಗೇಶ್‌: ನನ್ನ ಸಲಹೆಗಳು ಜಾರಿಯೇನೂ ಆಗಿಲ್ಲವಲ್ಲ.

(ಕೇಂದ್ರ ಸರ್ಕಾರ ಲವ್‌ ಜಿಹಾದ್ ಕುರಿತು ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ಅವರ ಗಮನಕ್ಕೆ ತರಲಾಯಿತು. “ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಸರ್ಕಾರ ಹೇಳಿರುವುದನ್ನು ವಿವರಿಸಲಾಯಿತು.)

ನಾನುಗೌರಿ.ಕಾಂ: ಮುಸ್ಲಿಂ ವಿರುದ್ಧ ಮಾತನಾಡುತ್ತಿದ್ದೀರಿ. ಇರಲಿ, ಈಗ ನಿಮ್ಮ ಸಮಾಜದವರು ಹಿಂದೂ ಧರ್ಮದಲ್ಲೇ ಬರುವ ದಲಿತ ಹಾಗೂ ಇತರ ಜಾತಿಯವರನ್ನು ಮದುವೆಯಾದರೆ ನಿಮ್ಮ ನಿಲುವು ಏನಾಗಿರುತ್ತದೆ?

ನಾಗೇಶ್‌: ನಾನು ಸ್ಪಷ್ಟವಾಗಿ ಹೇಳುತ್ತಿರುವುದು ಮುಸ್ಲಿಂ ಬಗ್ಗೆ ಮಾತ್ರ. ಹಿಂದೂ ಸಮಾಜ ಜಾಗೃತಿಯಾಗಬೇಕಿದೆ.

ನಾನುಗೌರಿ.ಕಾಂ: ದಲಿತರೊಂದಿಗೆ ವಿವಾಹವಾದರೂ ನಿಮ್ಮ ಸಮಾಜಕ್ಕೆ ಇಂಥದ್ದೇ ಸಲಹೆ ನೀಡುತ್ತೀರಾ?

ನಾಗೇಶ್‌: ಲವ್‌ ಜಿಹಾದ್‌ ಬಗ್ಗೆ ಹೇಳುತ್ತಿದ್ದೇನೆ.

ನಾನುಗೌರಿ.ಕಾಂ: ಹಾಗಾದರೆ ಬೇರೆ ಜಾತಿಯವರನ್ನು ಮದುವೆಯಾಗಬಹುದಲ್ಲವೇ?

ನಾಗೇಶ್‌: ಇಲ್ಲಿ ಲವ್‌ ಜಿಹಾದ್‌- ಮಾತ್ರ ವಿರೋಧಿಸುತ್ತಿದ್ದೇನೆ. ಮೊನ್ನೆ ನಡೆದ ಘಟನೆ ಬೇಜಾರಾಗಿದೆ.

ಅಂತರ್‌ಜಾತಿ ವಿವಾಹದ ಕುರಿತು ಎಷ್ಟೇ ಪ್ರಶ್ನಿಸಿದರೂ ನಾಗೇಶ್ ಅವರ ಉತ್ತರ ಬದಲಾಗಲೇ ಇಲ್ಲ. ಅಂತರ್ಜಾತಿ ವಿವಾಹವು ಸಂವಿಧಾನದಲ್ಲಿ ಮಾನ್ಯವಾಗಿದೆ ಎಂದು ಪದೇ ಪದೇ ಉಲ್ಲೇಖಿಸಿದರೂ, ‘ಲವ್‌ ಜಿಹಾದ್‌, ಲವ್ ಜಿಹಾದ್‌’ ಎನ್ನುತ್ತಾ ಮಾತು ಮುಗಿಸಿದರು.

ಅಂತಾರ್ಜಾತಿ ವಿವಾಹವನ್ನು ಒಪ್ಪಲ್ಲ: ಎಸ್‌ಎಸ್‌ಕೆ ಸಮುದಾಯದ ಮುಖಂಡ

ಎಸ್‌ಎಸ್‌ಕೆ ಸಮಾಜ ಚಿಂತನ ಮಂಥನ ರಾಜ್ಯ ಸಮಿತಿಯ ಪ್ರಮುಖರಾದ ಹನುಮಂತ ಚಂದ್ರಕಾಂತ ನಿರಂಜನ ‘ನಾನುಗೌರಿ.ಕಾಂ’ ಸಂಪರ್ಕಕ್ಕೆ ಸಿಕ್ಕರು. ನಾಗೇಶ್ ಅವರಿಗೆ ಕೇಳಿದ ಪ್ರಶ್ನೆಗಳನ್ನೇ ಅವರಲ್ಲಿಯೂ ಪ್ರಸ್ತಾಪಿಸಲಾಯಿತು. “ಸಂವಿಧಾನ, ಕಾಯ್ದೆಗಳು ಒಂದು ಕಡೆ ಇದ್ದರೆ, ಸಮಾಜದ ಕಟ್ಟಳೆಗಳು ಬೇರೆ ಇವೆ” ಎಂದ ಅವರು, ನಾಗೇಶ್‌ ಅವರ ಪತ್ರವನ್ನು ಸಮರ್ಥಿಸಿಕೊಂಡರು.

ಹನುಮಂತ ಅವರು ಲವ್‌ ಜಿಹಾದ್‌ನಿಂದ ಮಾತು ಆರಂಭಿಸಿ ಹಿಜಾಬ್‌, ಮುಸ್ಲಿಮರ ಬಂದ್‌ ಇತ್ಯಾದಿಗಳನ್ನೆಲ್ಲ ಪ್ರಸ್ತಾಪಿಸಿದರು. “ಮುಸ್ಲಿಂ ಸಮುದಾಯವನ್ನು ಹೊರತುಪಡಿಸಿ ಹೇಳುವುದಾದರೆ ಹಿಂದೂ ಧರ್ಮದಲ್ಲಿನ ಇತರ ಜಾತಿಗಳೊಂದಿಗೂ ನಿಮ್ಮ ಸಮಾಜದವರು ವಿವಾಹ ಆಗುವುದನ್ನು ನೀವು ಒಪ್ಪುವುದಿಲ್ಲವೇ?” ಎಂದು ಪ್ರಶ್ನಿಸಲಾಯಿತು.

“ಅದನ್ನೂ ಕೂಡ ನಾವು ಸ್ವೀಕಾರ ಮಾಡಲ್ಲ. ಅಂತಾರ್ಜಾತಿ ವಿವಾಹವೂ ತಪ್ಪು” ಎಂದರು.

ಹುಬ್ಬಳ್ಳಿ–ಧಾರವಾಡದ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಸಮಿತಿಯ ಧರ್ಮದರ್ಶಿ ನೀಲಕಂಠ ಪಿ.ಜಡಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಅವರ ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್‌ ಮಾಡಲಾಗುವುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಕೊಲೆ ಬೆದರಿಕೆ ಸ್ವೀಕರಿಸಿರುವ ಚಿಂತಕರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾಗಾದರೆ ಆರ್ ಎಸ್ ಎಸ್ ಮುಖಂಡರ ಮಕ್ಕಳ ಮದುವೆ ಬಗ್ಗೆ ಯೆನನ್ನುವೆ ನೀನು

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...