Homeಅಂಕಣಗಳುಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

- Advertisement -
- Advertisement -

ಲೋಕಸಭಾ ಚುನಾವಣೆಗಳು ಮೂರು ವರ್ಷ ದೂರದಲ್ಲಿವೆ. ಚಂಡಪ್ರಚಂಡರ ವರ್ಚಸ್ಸಿನ ಕವಚಕ್ಕೆ ತಗುಲಿರುವ ತುಕ್ಕನ್ನು ಉಜ್ಜಿ ತೆಗೆದು, ಹೊಸ ತಂತ್ರ-ಕುತಂತ್ರಗಳ ಹೆಣೆಯಲು ಸಾಕಷ್ಟು ಕಾಲಾವಕಾಶವಿದೆ
ಬಂಗಾಳದ ವಿಧಾನಸಭಾ ಚುನಾವಣೆಯ ನಂತರ ಮೌನಕ್ಕೆ ಶರಣಾಗಿದ್ದ ಪ್ರಧಾನಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಜನಾಕ್ರೋಶದ ಖಡ್ಗಕ್ಕೆ ಎದುರಾಗಿ ಕಂಬನಿ ತುಂಬಿದ ಭಾವುಕತೆಯ ಗುರಾಣಿಯನ್ನು ಅಡ್ಡ ಹಿಡಿದಿದ್ದಾರೆ.

ಕೋವಿಡ್ ಮಾರಣಹೋಮ ಕೇಕೆ ಹಾಕಿ ಕೊಳ್ಳೆ ಹೊಡೆದ ಭಾರತದ ದಿಡ್ಡಿ ಬಾಗಿಲನ್ನು ಭಾವುಕತೆಯಿಂದ ಮುಚ್ಚುವ ಅವರ ಎದೆಗಾರಿಕೆ ಅಸಾಧಾರಣ. ಆದರೆ ಕಂಬನಿ ತುಂಬಿ ಗಂಟಲು ಕಟ್ಟಿದ ಸಾಂತ್ವನ, ಶ್ರದ್ಧಾಂಜಲಿ ದಿಟವೆನಿಸುವುದಿಲ್ಲ. ಸಟೆಯೇ ಹೌದು. ಈ ಕಾರಣಕ್ಕಾಗಿಯೇ ಗಾಯದ ಮೇಲೆ ಬರೆ ಎಳೆದಿವೆ. ’ಎಲೆ ದೇವಾ, ಬೆಂದ ಹುಣ್ಣಿಗೆ ಬೇಗೆಯನಿಕ್ಕಲು ಬಂದೀತೇ’ ಎಂಬ ಅಕ್ಕನ ವಚನದ ಸಾಲನ್ನು ನೆನಪಿಸಿವೆ.

ಸಾಮಾನ್ಯ ಕಾಲದಲ್ಲಿ ಸರ್ವಾಂತರಿಯಾಗಿ ವಿಜೃಂಭಿಸುವ ಪ್ರಧಾನಿ ಮೋದಿಯವರು ವಾರಗಳ ಹಿಂದೆ ಕೋವಿಡ್ ನರಮೇಧದ ನಟ್ಟ ನಡುವೆ ಹಠಾತ್ತನೆ ಅಂತರ್ಧಾನರಾದರು. ದೇಶವೇ ಬೇಯುತ್ತಿದ್ದಾಗ ಅವರು ಮುಖ ತೋರಲಿಲ್ಲ, ತುಟಿ ಬಿಚ್ಚಲಿಲ್ಲ.

ಮೊದಲ ಅಲೆ ಮತ್ತು ಎರಡನೆಯ ಅಲೆಯ ನಡುವಣ ಅಂತರವನ್ನು ಪೋಲು ಮಾಡಿದರು. ಆಸ್ಪತ್ರೆಗಳು-ಆಮ್ಲಜನಕ-ಔಷಧಿಗಳು-ಲಸಿಕೆಗಳ ಆಲೋಚನೆಯನ್ನೇ ಮಾಡಲಿಲ್ಲ. ನಿಜವಾದ ನಾಯಕನ ಶಕ್ತಿ ಸಾಮರ್ಥ್ಯ ಮುನ್ನೋಟ ಯೋಜನಾಶಕ್ತಿಯ ಸತ್ವ ಪರೀಕ್ಷೆ ನಡೆಯುವುದು ಸಮರಕಾಲದಲ್ಲೇ ವಿನಾ ಶಾಂತಿಯ ದಿನಗಳಲ್ಲಿ ಅಲ್ಲ. ಈ ಪರೀಕ್ಷೆಯ ಬೆಂಕಿಗೆ ಮುಖ್ಯಮಂತ್ರಿಗಳನ್ನು ಮುಂದೆ ತಳ್ಳಿ ತಾವು ತೆರೆಮರೆಗೆ ಸರಿದುಬಿಟ್ಟರು.

ಗುಜರಾತ್ ಮಾದರಿ
Photo Courtesy: PTI

ಪವಿತ್ರನದಿಗಳಾದ ಗಂಗೆ ಯಮುನೆಯರು ಕೋವಿಡ್ ಶವವಾಹಕಗಳಾಗಿ ಹೋದವು. ಶವ ಸುಡುವ ಕಟ್ಟಿಗೆಯ ದರಗಳು ಮುಗಿಲಿಗೇರಿದವು. ವಾಹನಗಳ ಹಳೆಯ ಟೈರುಗಳ ತಂದು ಚಿತೆ ಹೊತ್ತಿಸಿ ಸುಟ್ಟ ದಾರುಣ ಉದಾಹರಣೆಗಳಿವೆ. ಸತ್ತವರ ಸಂಸ್ಕಾರಕ್ಕೆ ಹಣ ಹೊಂದಿಸಲಾಗದ ಬಂಧುಗಳು ನದೀ ನೀರಿಗೆ ಶವಗಳನ್ನು ತೇಲಿಬಿಟ್ಟರು. ಬಹುತೇಕರು ಗಂಗೆ ಮತ್ತು ಯಮುನೆಯ ನದೀ ದಂಡೆಯ ಮರಳು ತೋಡಿ ಹೂತು ಹಾಕಿದರು. ಕಣ್ಣು ಹರಿದಷ್ಟು ದೂರ ಹರಡಿ ಹಬ್ಬಿದ ಈ ಮರಳ ಸಮಾಧಿಗಳನ್ನು ನಾಯಿಗಳು ತೋಡಿ ಶವಗಳನ್ನು ಕಿತ್ತು ತಿಂದವು. ಉತ್ತರ ಭಾರತದಲ್ಲಿ ಸುರಿದ ಅಕಾಲದ ಮಳೆಯು ಮರಳನ್ನು ಕೊಚ್ಚಿ ಹಾಕಿದ ನಂತರ ಗೋಚರವಾದ ಶವಗಳನ್ನೂ ನಾಯಿಗಳು ಕಿತ್ತು ಜಗಿಯತೊಡಗಿದಾಗ, ನಗರಸಭೆಗಳು ಪೌರಕಾರ್ಮಿಕರನ್ನು ಕರೆತಂದು ಪುನಃ ಮರಳನ್ನು ಎಳೆದು ಮುಚ್ಚಿಸಿದವು. ದಿಕ್ಕಿಲ್ಲದ ಶವಗಳನ್ನು ಆಸ್ಪತ್ರೆಗಳು, ಆಂಬುಲೆನ್ಸ್‌ನವರು ನೀರುಪಾಲು ಮಾಡಿದರು. ಹಿಂದೀ ಪತ್ರಿಕೆಯೊಂದು ತನ್ನ 26 ವರದಿಗಾರರನ್ನು ನಿಯುಕ್ತಿ ಮಾಡಿ ನಡೆಸಿದ ತನಿಖಾ ವರದಿಯಲ್ಲಿ ಗಂಗೆಯುದ್ದಕ್ಕೆ ಎರಡು ಸಾವಿರ ಶವಗಳು ಪತ್ತೆಯಾದವು. ಜೀವಿಸಿರುವವರಿಗೆ
ಆಸ್ಪತ್ರೆಯಲ್ಲಿ ಜಾಗವಿಲ್ಲ, ಸತ್ತವರಿಗೆ ಸ್ಮಶಾನದಲ್ಲಿ ಸಂಸ್ಕಾರವಿಲ್ಲ ಎಂಬ ದುಸ್ಥಿತಿ. ದಿನನಿತ್ಯ ಹಗಲಿರುಳು ಉರಿದ ಸಹಸ್ರಾರು ಚಿತೆಗಳಿಗೆ ಲೆಕ್ಕವಿಲ್ಲ. ತಬ್ಬಲಿಗಳಾದ ಮಕ್ಕಳ ನೆತ್ತಿಯ ಮೇಲಿನ ಹೆತ್ತವರ ನೆರಳು ಎಲ್ಲ ಕಾಲಕ್ಕೂ ಸರಿದುಹೋಯಿತು.

ನಡುವೆ ಗೋಮೂತ್ರ ಸೇವನೆಯಿಂದ, ಗೋವಿನ ಸೆಗಣಿಯ ಲೇಪನದಿಂದ ಕೋವಿಡ್ ವೈರಾಣು ನಾಶವಾಗುತ್ತದೆಂಬ ಪ್ರಚಾರದ ಆರ್ಭಟ ನಡೆದಿದೆ. ಸಂಸದೆಯೂ ಆದ ಸಾಧ್ವಿ ಪ್ರಜ್ಞಾ ಸಿಂಗ್ ಈ ಪ್ರಚಾರದ ಮುಂಚೂಣಿಯಲ್ಲಿದ್ದಾರೆ. ಬೀದಿ ಬೀದಿಗಳಲ್ಲಿ ಬೇವಿನ ಸೊಪ್ಪಿನ ಹೊಗೆ ಹಾಕಿ, ಶಂಖಘೋಷ ಮಾಡಿ ಕೊರೊನಾ ಓಡಿಸುವ ಅವಿವೇಕವೂ ಜರುಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಶಾಖೆಗಳು ಅಂಧಶ್ರದ್ಧೆಗೆ ಕುಮ್ಮಕ್ಕು ನೀಡಿವೆ. ನಿತ್ಯ ಗೋಮೂತ್ರ ಸೇವನೆಯಿಂದಾಗಿ ತಮ್ಮನ್ನು ಕೊರೊನಾ ಬಾಧಿಸಿಲ್ಲ ಎಂಬ ಸಾಧ್ವಿ ಪ್ರಜ್ಞಾ ಅವರು ನಿನ್ನೆ ಹಠಾತ್ತನೆ ಉಸಿರಾಟದ ತೊಂದರೆಯನ್ನು ಎದುರಿಸಿದರು. ಅವರನ್ನು ವಿಮಾನ ಆಂಬುಲೆನ್ಸ್‌ನಿಂದ ಸುರಕ್ಷಿತ ಆಸ್ಪತ್ರೆಗೆ ತಲುಪಿಸಲಾಯಿತು. ಅಂಧಶ್ರದ್ಧೆಗಳ ಕುರಿತು ಪ್ರಧಾನಿ ಚಕಾರ ಎತ್ತಲಿಲ್ಲ. ಈ ಎಲ್ಲ ಎಣೆಯಿಲ್ಲದ ದುಃಖ ದುರಂತದಲ್ಲಿ ಪ್ರಧಾನಿಯವರ ಕಂಚಿನ ಕಂಠ ಬಹುತೇಕ ಅಡಗಿಹೋಗಿತ್ತು.

ಕೋವಿಡ್ ಸಾವುನೋವಿನ ಸೂತಕದ ನಡುವೆ 20 ಸಾವಿರ ಕೋಟಿ ರುಪಾಯಿ ವೆಚ್ಚದ ಹೊಸ ಸಂಸತ್ ಭವನ ಮತ್ತು ಪ್ರಧಾನಿ ನಿವಾಸವನ್ನು ಹೊಂದಿರುವ ಸೆಂಟ್ರಲ್ ವಿಸ್ತಾ ನಿರ್ಮಾಣ ಅಬಾಧಿತವಾಗಿ ನಡೆದಿದೆ. ಈ ಯೋಜನೆಯನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ತೆಗೆದುಕೊಂಡಿದ್ದಾರೆ ಪ್ರಧಾನಿಯವರು. ಮಾರಣಹೋಮದ ನಡುವೆ ನಡೆಯುವ ಮೋಜಿನ ಮೇಜವಾನಿಯಷ್ಟೇ ವಿಕೃತ ಕೃತ್ಯವಿದು. ನೊಂದು ಸತ್ತು ಸಂಸ್ಕಾರವನ್ನೂ ಕಾಣದೆ ನೀರುಪಾಲು ನಾಯಿ ನರಿ ಪಾಲಾದ ಕಳೇಬರಗಳ ಅಡಿಪಾಯದ ಮೇಲೆ ಮೈ ತಳೆಯುವ ಈ ಸೌಧಗಳ ಗೋಡೆ ಮಾಡುಗಳು ನೋವು ನರಳಾಟವನ್ನು ಪಿಸುಗುಡುವುದಿಲ್ಲವೇ? ಅಂತಹ ಸುಖಾಸೀನಗಳ ಮೇಲೆ ಕುಳಿತು ಜನಚಿಂತನೆ ಮಾಡುವುದು ಸಾಧ್ಯವೇ? ಅಂತಹ ಮಹಲಿನ ಹಂಸತೂಲಿಕಾ ತಲ್ಪದಲ್ಲಿ ಪ್ರಧಾನಿಯಾದ ವ್ಯಕ್ತಿ ದಿಂಬಿಗೆ ತಲೆಯಾನಿಸಿ ನಿದ್ರಿಸುವುದು ಸಾಧುವೇ?

ಸಂವೇದನೆಗಳು ಸತ್ತು ಹೋದಂತೆ ನಡೆದುಕೊಂಡಿರುವವರು ಏಕಾಏಕಿ ಮಿಡಿಯುವ ಕಂಬನಿ ಕೃತ್ರಿಮ ಅಲ್ಲವೆಂದು ನಂಬುವುದಾದರೂ ಹೇಗೆ?

ಸಾವು ಸಂಕಟಗಳ ನಡುವಿನಿಂದ ಮೋದಿ ಆಡಳಿತದ ವಿರುದ್ಧ ಜನಾಕ್ರೋಶ ಸಿಡಿದಿರುವುದು ಸಹಜ ಬೆಳವಣಿಗೆ. ಉತ್ತುಂಗದಲ್ಲಿದ್ದ ಅವರ ಜನಪ್ರಿಯತೆಯ ಉಕ್ಕಿನ ಕವಚಕ್ಕೆ ತುಕ್ಕು ತಗುಲತೊಡಗಿದೆ. ಪಕ್ಷ ಪರಿವಾರದಲ್ಲಿ ಗಾಬರಿಯ ಗಂಟೆ ಮೊಳಗಿದೆ. ಹಾನಿಯನ್ನು ತಡೆಯುವ ಬಗೆಯೆಂತು ಎಂಬ ಕುರಿತು ಚಿಂತನೆ ನಡೆದಿದೆ. ಉತ್ತರಪ್ರದೇಶದ ವಿಧಾನಸಭೆ ಚುನಾವಣೆಗೆ ವರ್ಷವೂ ಉಳಿದಿಲ್ಲ. ಯೋಗಿ ಆದಿತ್ಯನಾಥರಿಗೆ ಹೋಲಿಸಿದರೆ ನರೇಂದ್ರ ಮೋದಿಯವರು ಅದೃಷ್ಟವಂತರು. ಮುಂದಿನ ಲೋಕಸಭಾ ಚುನಾವಣೆಗಳು ಮೂರು ವರ್ಷ ದೂರದಲ್ಲಿವೆ. ಅಷ್ಟರೊಳಗೆ ವರ್ಚಸ್ಸಿನ ಕವಚಕ್ಕೆ ತಗುಲಿರುವ ತುಕ್ಕನ್ನು ಉಜ್ಜಿ ತೆಗೆದು, ಹೊಸ ತಂತ್ರಗಳ ಹೆಣೆಯಲು ಸಾಕಷ್ಟು ಕಾಲಾವಕಾಶ ಉಂಟು.

ಅಳುವ ದೃಶ್ಯ ಮನುಷ್ಯನನ್ನು ವಿನಮ್ರವಾಗಿಸುತ್ತದೆ, ಮಾನವೀಯಗೊಳಿಸುತ್ತದೆ. ಅನುಕಂಪ-ಸಹಾನುಭೂತಿಯನ್ನು ಹುಟ್ಟಿಸುತ್ತದೆ. ಕಣ್ಣೀರಿಡುವ ವ್ಯಕ್ತಿಯು ಸರ್ವಶಕ್ತನೇನೂ ಅಲ್ಲ, ಬದಲಾಗಿ ಮನುಷ್ಯ ಮಾತ್ರನೇ ಎಂಬ ಅನುಕಂಪ ಹುಟ್ಟಿಸುತ್ತದೆ. ಆತ ತಪ್ಪು ಮಾಡಿರಲಾರ, ಮಾಡಿದ್ದರೂ ಪರವಾಗಿಲ್ಲ, ಕಣ್ಣೀರು ಅವನ ಪಶ್ಚಾತ್ತಾಪವೇ ಇದ್ದೀತು ಎಂಬ ಭಾವನೆಯನ್ನು ಹುಟ್ಟಿಸಿಬಿಡುತ್ತದೆ.

ಕಣ್ಣೀರು ಹಾಕಿ ಅದಕ್ಷ ಆಡಳಿತವನ್ನು ಅಸಾಮರ್ಥ್ಯವನ್ನು ಮುಚ್ಚಿಡುವುದು ಸಾಧ್ಯವಿಲ್ಲ. ವಚನಭಂಗ, ಮೋಹಭಂಗವನ್ನು ಅದುಮಿಡುವುದು ಸುಲಭವಲ್ಲ. ಕುಸಿಯತೊಡಗಿರುವ ಜನತಂತ್ರ, ಜನಸಮುದಾಯಗಳ ವಿಶ್ವಾಸ, ಕವಿಯುತ್ತಿರುವ ನಿರುದ್ಯೋಗ, ಹದಗೆಟ್ಟಿರುವ ಅರ್ಥಸ್ಥಿತಿ, ದ್ರುವೀಕರಣ ರಾಜಕಾರಣದಿಂದಾಗಿ ತಲೆಯೆತ್ತುತ್ತಿರುವ ಆರ್ಥಿಕ-ಸಾಮಾಜಿಕ ಘರ್ಷಣೆಗಳ ಕುರೂಪವನ್ನು ಅಡಗಿಸುವುದು ದುಸ್ಸಾಧ್ಯವೇ ಸರಿ. ಸಾವುನೋವುಗಳಿಗೆ ಹನಿಗೂಡದ ಕಣ್ಣುಗಳು ವರ್ಚಸ್ಸಿನ ಹಾನಿಗೆ, ಗತವೈಭವಕ್ಕೆ ಮರುಜೀವ ನೀಡುವುದಕ್ಕೆ ರಾಜಕೀಯ ನಷ್ಟವನ್ನು ತುಂಬಿಕೊಳ್ಳುವುದಕ್ಕೆ ಕಂಬನಿ ತುಂಬುವುದು ಜನದ್ರೋಹ.

ಹೊಟ್ಟೆ ಬಟ್ಟೆಗೆ ಬಡಿದಾಡುವ ನಿತ್ಯ ಯಾತನೆಯ ಲೌಕಿಕ ವಾಸ್ತವಕ್ಕೆ ಜನಸಮೂಹಗಳನ್ನು ತುಸುಕಾಲ ಜೋಮುಗಟ್ಟಿಸಬಹುದು. ಕಡು ಭಾವುಕತೆಯ ಅರಿವಳಿಕೆ ಮದ್ದು ನೀಡಿ ಹುಸಿ ಆವರಣದಲ್ಲಿ ಕೆಲ ಕಾಲ ಬಂಧಿಸಲು ಬಂದೀತು. ಆದರೆ ಅರಿವಳಿಕೆಯ ಮದ್ದಿನ ಪ್ರಭಾವ ಕಾಯಂ ಅಲ್ಲ. ಹೀಗಾಗಿ ಮೈಮರೆವು ಚಿರಾಯು ಅಲ್ಲ.


ಇದನ್ನೂ ಓದಿ: ಲ್ಯುಟಿನ್ಸ್ ದೆಹಲಿಯ ಐಶಾರಾಮದ ಬಗ್ಗೆ ಗೇಲಿ; ಸಾವಿನ ಸರಣಿಯ ಮಧ್ಯೆ 20 ಸಾವಿರ ಕೋಟಿ ಮಹಲು

ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರಹ ಅರ್ಥಪೂರ್ಣವಾಗಿದೆ. ಬಹುಜನ ಅಪ್ಪಟ ದೇಶ ಭಕ್ತರು ಶಾಶ್ಕವತವಾದ ಗಟ್ಟಿಮುಟ್ಟಾದ ತಳಪಾಯದ ಮೇಲೆ ಕಟ್ಟಿದ್ದ ಏಕತೆ, ಭಾವೈಕ್ಯತೆಯ ಭಾರತ ದೇಶವನ್ನು ಬಿಜೆಪಿ ನೇತೃತ್ವದ ಮನೆಯಾಳ ಮೋದಿ ಬುಡ ಸಹಿತ ಕೇವಲ ೭ ವರ್ಷಗಳಲ್ಲೇ ನೆಲಸಮ ಮಾಡಿ ಸೆಂಟ್ರಲ್ ವಿಸ್ತಾ ಹೆಸರಿನ ಸೂತಕದ ಸೌಧ ನಿರ್ಮಾಣ ಮಾಡುತ್ತಿದ್ದಾರೆ. ಜಗತ್ತಿನಲ್ಲೇ ಅತ್ಯಂತ ದುರ್ಬಲ ಪ್ರಧಾನಿ ಎಂಬ ಕುಖ್ಯಾತಿಯನ್ನು ಮೋದಿ ಪಡೆದುಕೊಳ್ಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಹಾಳು ಮಾಡಿದರು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....