Homeಮುಖಪುಟ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

- Advertisement -
- Advertisement -

ಕೇಂದ್ರ ಸರ್ಕಾರವು ಟ್ವಿಟರ್‌ ಜೊತೆ ಅಸಮಧಾನಗೊಂಡಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌ಗೆ ಪ್ರೋತ್ಸಾಹಿಸಿದೆ. ಈ ಹಿನ್ನಲೆಯಲ್ಲಿ ಈ ಆಪ್‌‌ ಅನ್ನು ಹಲವಾರು ಜನರು ಡೌನ್‌ಲೋಡ್ ಮಾಡಿದ್ದಾರೆ. ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೌನ್‌ಲೋಡ್‌ಗಳಾಗಿದೆ ಎನ್ನಲಾಗಿದೆ. ಆದರೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಫ್ರೆಂಚ್ ಸಂಶೋಧಕರು ಬಹಿರಂಗ ಪಡಿಸಿರುವುದ ಜೊತೆಗೆ, ಆಪ್‌‌ಗೆ ಚೀನಾದೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು, ’ಕೂ’ ಆಪ್‌ ಹೆಚ್ಚು ಸುರಕ್ಷಿತವಲ್ಲ, ಅದು ಬಳಕೆದಾರರ ಇಮೇಲ್ ಐಡಿ, ಫೋನ್‌ ಸಂಖ್ಯೆಗಳು, ಹುಟ್ಟಿದ ದಿನಾಂಕ ಸೇರಿದಂತೆ ಬಹಳಷ್ಟು ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ  ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು. ಇಷ್ಟೇ ಅಲ್ಲದೆ, ಇತರ ತಂತ್ರಜ್ಞಾನಗಳಲ್ಲಿನ ಹಲವಾರು ಭದ್ರತಾ ದೋಷಗಳು ಅವರು ಎತ್ತಿ ತೋರಿಸಿದ್ದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಕಳೆದ ರಾತ್ರಿ ಬ್ಯಾಪ್ಟಿಸ್ಟ್ ಮಾಡಿದ್ದ ಟ್ವೀಟ್‌ನಲ್ಲಿ, “ಹೊಸ ‘ಕೂ’ ಅಪ್ಲಿಕೇಶನ್‌ ಜೊತೆ ನಾನು ಕೇವಲ 30 ನಿಮಿಷ ಕಳೆದೆ. ಈ ಅಪ್ಲಿಕೇಷನ್ ತನ್ನ ಬಳಕೆದಾರರ, ಇಮೇಲ್, ಹುಟ್ಟಿದ ದಿನಾಂಕ, ಹೆಸರು, ಅವರ ವೈವಾಹಿಕ ಮಾಹಿತಿ, ಲಿಂಗ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡುತ್ತದೆ. ನೀವು ಕೇಳಿದ್ದರಿಂದ ಇದನ್ನು ಮಾಡಿದ್ದೇನೆ” ಎಂದು ಬರೆದಿದ್ದಾರೆ.

ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ನೋಡಿದರೆ, ‘ಕೂ’ ಆಪ್‌ ಕೆಲವು ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈಗಾಗಲೆ ‘ಕೂ’ ಆಪ್‌ನಲ್ಲಿ ಖಾತೆಗಳನ್ನು ಸೃಷ್ಟಿಸಿರುವ ಭಾರತ ಸರ್ಕಾರದ ಇಲಾಖೆಗಳು, ಮಂತ್ರಿಗಳು ಸೇರಿದಂತೆ ಲಕ್ಷಾಂತರ ಬಳಕೆದಾರರ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನಲಾಗಿದೆ.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

 

ಆದರೆ ಬ್ಯಾಪ್ಟಿಸ್ಟ್ ಅವರು ಎತ್ತಿದೆ ಪ್ರಶ್ನೆಗೆ ಕೂ ಸಂಸ್ಥಾಪಕ ಉತ್ತರಿಸದೆ, “ನಾವು ನಮ್ಮ ದೇಶ, ಭಾರತಕ್ಕಾಗಿ ಏನಾದರೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಈ ಪ್ರಯಾಣದಲ್ಲಿ ನೀವು ಸಹಾಯ ಮಾಡಲು ಬಯಸಿದರೆ ದಯವಿಟ್ಟು ನನಗೆ ಪತ್ರ ಬರೆಯಿರಿ. ನಿಮ್ಮ ಎಲ್ಲಾ ಪ್ರತಿಕ್ರಿಯೆಯನ್ನು ನಾವು ನೋಡುತ್ತೇವೆ” ಎಂದು ಹೇಳಿದ್ದಾರೆ. ಅಪ್ರಮೇಯ ಅವರ ಈ ಉತ್ತರಕ್ಕೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

 

ರೈತರ ಹೋರಾಟದ ಬಗ್ಗೆ ಟ್ವೀಟ್ ಮಾಡುವ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್ ನಿರಾಕರಿಸಿದ ನಂತರ, ಕೇಂದ್ರ ಸರ್ಕಾರ ಸೇರಿದಂತೆ ಲಕ್ಷಾಂತರ ಜನರು ‘ಕೂ’ ಅಪ್ಲಿಕೇಶನ್‌‌‌ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪ್ರಸ್ತುತ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳ ಹ್ಯಾಂಡಲ್‌ಗಳನ್ನು ‘ಕೂ’ ವೇರಿಫೈ ಮಾಡಿದೆ. ನಾನು ಈಗ ‘ಕೂ’ ಆಪ್‌‌ನಲ್ಲಿದ್ದೇನೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

‘ಕೂ’ ಆಪ್‌ನಲ್ಲಿನ ದೋಷವನ್ನು ಬ್ಯಾಪ್ಟಿಸ್ಟ್ ಮಾತ್ರವಲ್ಲದೆ ಬೇರೊಬ್ಬರೂ ಕಂಡು ಹಿಡಿದಿದ್ದಾರೆ. ಪ್ರಣವ್ ಎಂಬವರು, ಈ ಆಪ್‌ನಲ್ಲಿ ತಾನು ಯಾವುದೆ ಖಾತೆಯನ್ನು ಮಾಡದೆ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

 

 

 

ಚೀನೀ ಸಂಪರ್ಕ?

ಬ್ಯಾಪ್ಟಿಸ್ಟ್ ‘ಕೂ’ ಆಪ್‌ಗೆ ಚೀನಾ ಸಂಪರ್ಕವಿದೆ ಎಂಬ ಟ್ವೀಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ. ಆದರೆ ಅದು ಅಷ್ಟೊಂದು ನಿಖರವಾಗಿಲ್ಲ ಎನ್ನಲಾಗಿದೆ. ‘ಕೂಆಪ್‌.ಕಾಮ್’ ಡೊಮೇನ್‌‌‌ ಅನ್ನು ನಾಲ್ಕು ವರ್ಷಗಳ ಹಿಂದೆ ರಚಿಸಲಾಗಿದೆ. ಅಂದಿನಿಂದ ಇಂದಿನವರೆಗೂ ಇದರ ಮಾಲಿಕತ್ವ ಹಲವು ಬಾರಿ ಬದಲಾಗಿದೆ ಎಂದು ಈ ದಾಖಲೆ ತಿಳಿಸುತ್ತದೆ. ಅದರ ಇತ್ತೀಚೆನ ಮಾಲಿಕರು ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಆಗಿದೆಯಾದರೂ, ಅದು ಅದನ್ನು 2019 ರಲ್ಲಷ್ಟೇ ಸ್ವಾಧೀನ ಪಡಿಸಿಕೊಂಡಿದೆ.

ಆದರೆ ಕೂ ಅಪ್ಲಿಕೇಶನ್‌ನಲ್ಲಿ ಚೀನೀ ಹೂಡಿಕೆ ಇದ್ದು, ಚೀನಾ ಮೂಲದ ಶಿಯೋಮಿ ಕಂಪೆನಿಯೊಂದಿಗೆ ಸಂಬಂಧವಿರುವ ಶುನ್‌ವೇಯು ಇದರಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಆದರೆ ಕೂವನ್ನು ಸಂಪೂರ್ಣ ಸ್ವದೇಶಿ ಅಪ್ಲಿಕೇಶನ್ ಮಾಡುತ್ತಿದ್ದು ಅಲ್ಪ ಪಾಲಷ್ಟೆ ಶುನ್‌ವೆ ಅವರಲ್ಲಿದೆ, ಅವರು ಅದನ್ನು ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ‘ಕೂ’ ಸಿಇಒ ಅಪ್ರಮೇಯ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನಲ್ಲಿ ಇತ್ತು.
    ಅದು ಒಂದು ಪಕ್ಷದ ಪರವಾಗಿದೆ ಎಂದು ಅಲ್ಲಿಂದ ವರ್ಷಗಳ ಹಿಂದೆ ತೊರೆದಿದ್ದೇನೆ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...