Homeಮುಖಪುಟ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

- Advertisement -
- Advertisement -

ಕೇಂದ್ರ ಸರ್ಕಾರವು ಟ್ವಿಟರ್‌ ಜೊತೆ ಅಸಮಧಾನಗೊಂಡಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌ಗೆ ಪ್ರೋತ್ಸಾಹಿಸಿದೆ. ಈ ಹಿನ್ನಲೆಯಲ್ಲಿ ಈ ಆಪ್‌‌ ಅನ್ನು ಹಲವಾರು ಜನರು ಡೌನ್‌ಲೋಡ್ ಮಾಡಿದ್ದಾರೆ. ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೌನ್‌ಲೋಡ್‌ಗಳಾಗಿದೆ ಎನ್ನಲಾಗಿದೆ. ಆದರೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಫ್ರೆಂಚ್ ಸಂಶೋಧಕರು ಬಹಿರಂಗ ಪಡಿಸಿರುವುದ ಜೊತೆಗೆ, ಆಪ್‌‌ಗೆ ಚೀನಾದೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು, ’ಕೂ’ ಆಪ್‌ ಹೆಚ್ಚು ಸುರಕ್ಷಿತವಲ್ಲ, ಅದು ಬಳಕೆದಾರರ ಇಮೇಲ್ ಐಡಿ, ಫೋನ್‌ ಸಂಖ್ಯೆಗಳು, ಹುಟ್ಟಿದ ದಿನಾಂಕ ಸೇರಿದಂತೆ ಬಹಳಷ್ಟು ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ  ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು. ಇಷ್ಟೇ ಅಲ್ಲದೆ, ಇತರ ತಂತ್ರಜ್ಞಾನಗಳಲ್ಲಿನ ಹಲವಾರು ಭದ್ರತಾ ದೋಷಗಳು ಅವರು ಎತ್ತಿ ತೋರಿಸಿದ್ದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಕಳೆದ ರಾತ್ರಿ ಬ್ಯಾಪ್ಟಿಸ್ಟ್ ಮಾಡಿದ್ದ ಟ್ವೀಟ್‌ನಲ್ಲಿ, “ಹೊಸ ‘ಕೂ’ ಅಪ್ಲಿಕೇಶನ್‌ ಜೊತೆ ನಾನು ಕೇವಲ 30 ನಿಮಿಷ ಕಳೆದೆ. ಈ ಅಪ್ಲಿಕೇಷನ್ ತನ್ನ ಬಳಕೆದಾರರ, ಇಮೇಲ್, ಹುಟ್ಟಿದ ದಿನಾಂಕ, ಹೆಸರು, ಅವರ ವೈವಾಹಿಕ ಮಾಹಿತಿ, ಲಿಂಗ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡುತ್ತದೆ. ನೀವು ಕೇಳಿದ್ದರಿಂದ ಇದನ್ನು ಮಾಡಿದ್ದೇನೆ” ಎಂದು ಬರೆದಿದ್ದಾರೆ.

ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ನೋಡಿದರೆ, ‘ಕೂ’ ಆಪ್‌ ಕೆಲವು ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈಗಾಗಲೆ ‘ಕೂ’ ಆಪ್‌ನಲ್ಲಿ ಖಾತೆಗಳನ್ನು ಸೃಷ್ಟಿಸಿರುವ ಭಾರತ ಸರ್ಕಾರದ ಇಲಾಖೆಗಳು, ಮಂತ್ರಿಗಳು ಸೇರಿದಂತೆ ಲಕ್ಷಾಂತರ ಬಳಕೆದಾರರ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನಲಾಗಿದೆ.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

 

ಆದರೆ ಬ್ಯಾಪ್ಟಿಸ್ಟ್ ಅವರು ಎತ್ತಿದೆ ಪ್ರಶ್ನೆಗೆ ಕೂ ಸಂಸ್ಥಾಪಕ ಉತ್ತರಿಸದೆ, “ನಾವು ನಮ್ಮ ದೇಶ, ಭಾರತಕ್ಕಾಗಿ ಏನಾದರೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಈ ಪ್ರಯಾಣದಲ್ಲಿ ನೀವು ಸಹಾಯ ಮಾಡಲು ಬಯಸಿದರೆ ದಯವಿಟ್ಟು ನನಗೆ ಪತ್ರ ಬರೆಯಿರಿ. ನಿಮ್ಮ ಎಲ್ಲಾ ಪ್ರತಿಕ್ರಿಯೆಯನ್ನು ನಾವು ನೋಡುತ್ತೇವೆ” ಎಂದು ಹೇಳಿದ್ದಾರೆ. ಅಪ್ರಮೇಯ ಅವರ ಈ ಉತ್ತರಕ್ಕೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

 

ರೈತರ ಹೋರಾಟದ ಬಗ್ಗೆ ಟ್ವೀಟ್ ಮಾಡುವ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್ ನಿರಾಕರಿಸಿದ ನಂತರ, ಕೇಂದ್ರ ಸರ್ಕಾರ ಸೇರಿದಂತೆ ಲಕ್ಷಾಂತರ ಜನರು ‘ಕೂ’ ಅಪ್ಲಿಕೇಶನ್‌‌‌ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪ್ರಸ್ತುತ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳ ಹ್ಯಾಂಡಲ್‌ಗಳನ್ನು ‘ಕೂ’ ವೇರಿಫೈ ಮಾಡಿದೆ. ನಾನು ಈಗ ‘ಕೂ’ ಆಪ್‌‌ನಲ್ಲಿದ್ದೇನೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

‘ಕೂ’ ಆಪ್‌ನಲ್ಲಿನ ದೋಷವನ್ನು ಬ್ಯಾಪ್ಟಿಸ್ಟ್ ಮಾತ್ರವಲ್ಲದೆ ಬೇರೊಬ್ಬರೂ ಕಂಡು ಹಿಡಿದಿದ್ದಾರೆ. ಪ್ರಣವ್ ಎಂಬವರು, ಈ ಆಪ್‌ನಲ್ಲಿ ತಾನು ಯಾವುದೆ ಖಾತೆಯನ್ನು ಮಾಡದೆ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

 

 

 

ಚೀನೀ ಸಂಪರ್ಕ?

ಬ್ಯಾಪ್ಟಿಸ್ಟ್ ‘ಕೂ’ ಆಪ್‌ಗೆ ಚೀನಾ ಸಂಪರ್ಕವಿದೆ ಎಂಬ ಟ್ವೀಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ. ಆದರೆ ಅದು ಅಷ್ಟೊಂದು ನಿಖರವಾಗಿಲ್ಲ ಎನ್ನಲಾಗಿದೆ. ‘ಕೂಆಪ್‌.ಕಾಮ್’ ಡೊಮೇನ್‌‌‌ ಅನ್ನು ನಾಲ್ಕು ವರ್ಷಗಳ ಹಿಂದೆ ರಚಿಸಲಾಗಿದೆ. ಅಂದಿನಿಂದ ಇಂದಿನವರೆಗೂ ಇದರ ಮಾಲಿಕತ್ವ ಹಲವು ಬಾರಿ ಬದಲಾಗಿದೆ ಎಂದು ಈ ದಾಖಲೆ ತಿಳಿಸುತ್ತದೆ. ಅದರ ಇತ್ತೀಚೆನ ಮಾಲಿಕರು ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಆಗಿದೆಯಾದರೂ, ಅದು ಅದನ್ನು 2019 ರಲ್ಲಷ್ಟೇ ಸ್ವಾಧೀನ ಪಡಿಸಿಕೊಂಡಿದೆ.

ಆದರೆ ಕೂ ಅಪ್ಲಿಕೇಶನ್‌ನಲ್ಲಿ ಚೀನೀ ಹೂಡಿಕೆ ಇದ್ದು, ಚೀನಾ ಮೂಲದ ಶಿಯೋಮಿ ಕಂಪೆನಿಯೊಂದಿಗೆ ಸಂಬಂಧವಿರುವ ಶುನ್‌ವೇಯು ಇದರಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಆದರೆ ಕೂವನ್ನು ಸಂಪೂರ್ಣ ಸ್ವದೇಶಿ ಅಪ್ಲಿಕೇಶನ್ ಮಾಡುತ್ತಿದ್ದು ಅಲ್ಪ ಪಾಲಷ್ಟೆ ಶುನ್‌ವೆ ಅವರಲ್ಲಿದೆ, ಅವರು ಅದನ್ನು ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ‘ಕೂ’ ಸಿಇಒ ಅಪ್ರಮೇಯ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನಲ್ಲಿ ಇತ್ತು.
    ಅದು ಒಂದು ಪಕ್ಷದ ಪರವಾಗಿದೆ ಎಂದು ಅಲ್ಲಿಂದ ವರ್ಷಗಳ ಹಿಂದೆ ತೊರೆದಿದ್ದೇನೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...