Homeಮುಖಪುಟ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

- Advertisement -
- Advertisement -

ಕೇಂದ್ರ ಸರ್ಕಾರವು ಟ್ವಿಟರ್‌ ಜೊತೆ ಅಸಮಧಾನಗೊಂಡಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌ಗೆ ಪ್ರೋತ್ಸಾಹಿಸಿದೆ. ಈ ಹಿನ್ನಲೆಯಲ್ಲಿ ಈ ಆಪ್‌‌ ಅನ್ನು ಹಲವಾರು ಜನರು ಡೌನ್‌ಲೋಡ್ ಮಾಡಿದ್ದಾರೆ. ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೌನ್‌ಲೋಡ್‌ಗಳಾಗಿದೆ ಎನ್ನಲಾಗಿದೆ. ಆದರೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಫ್ರೆಂಚ್ ಸಂಶೋಧಕರು ಬಹಿರಂಗ ಪಡಿಸಿರುವುದ ಜೊತೆಗೆ, ಆಪ್‌‌ಗೆ ಚೀನಾದೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು, ’ಕೂ’ ಆಪ್‌ ಹೆಚ್ಚು ಸುರಕ್ಷಿತವಲ್ಲ, ಅದು ಬಳಕೆದಾರರ ಇಮೇಲ್ ಐಡಿ, ಫೋನ್‌ ಸಂಖ್ಯೆಗಳು, ಹುಟ್ಟಿದ ದಿನಾಂಕ ಸೇರಿದಂತೆ ಬಹಳಷ್ಟು ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ  ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು. ಇಷ್ಟೇ ಅಲ್ಲದೆ, ಇತರ ತಂತ್ರಜ್ಞಾನಗಳಲ್ಲಿನ ಹಲವಾರು ಭದ್ರತಾ ದೋಷಗಳು ಅವರು ಎತ್ತಿ ತೋರಿಸಿದ್ದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಕಳೆದ ರಾತ್ರಿ ಬ್ಯಾಪ್ಟಿಸ್ಟ್ ಮಾಡಿದ್ದ ಟ್ವೀಟ್‌ನಲ್ಲಿ, “ಹೊಸ ‘ಕೂ’ ಅಪ್ಲಿಕೇಶನ್‌ ಜೊತೆ ನಾನು ಕೇವಲ 30 ನಿಮಿಷ ಕಳೆದೆ. ಈ ಅಪ್ಲಿಕೇಷನ್ ತನ್ನ ಬಳಕೆದಾರರ, ಇಮೇಲ್, ಹುಟ್ಟಿದ ದಿನಾಂಕ, ಹೆಸರು, ಅವರ ವೈವಾಹಿಕ ಮಾಹಿತಿ, ಲಿಂಗ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡುತ್ತದೆ. ನೀವು ಕೇಳಿದ್ದರಿಂದ ಇದನ್ನು ಮಾಡಿದ್ದೇನೆ” ಎಂದು ಬರೆದಿದ್ದಾರೆ.

ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ನೋಡಿದರೆ, ‘ಕೂ’ ಆಪ್‌ ಕೆಲವು ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈಗಾಗಲೆ ‘ಕೂ’ ಆಪ್‌ನಲ್ಲಿ ಖಾತೆಗಳನ್ನು ಸೃಷ್ಟಿಸಿರುವ ಭಾರತ ಸರ್ಕಾರದ ಇಲಾಖೆಗಳು, ಮಂತ್ರಿಗಳು ಸೇರಿದಂತೆ ಲಕ್ಷಾಂತರ ಬಳಕೆದಾರರ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನಲಾಗಿದೆ.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

 

ಆದರೆ ಬ್ಯಾಪ್ಟಿಸ್ಟ್ ಅವರು ಎತ್ತಿದೆ ಪ್ರಶ್ನೆಗೆ ಕೂ ಸಂಸ್ಥಾಪಕ ಉತ್ತರಿಸದೆ, “ನಾವು ನಮ್ಮ ದೇಶ, ಭಾರತಕ್ಕಾಗಿ ಏನಾದರೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಈ ಪ್ರಯಾಣದಲ್ಲಿ ನೀವು ಸಹಾಯ ಮಾಡಲು ಬಯಸಿದರೆ ದಯವಿಟ್ಟು ನನಗೆ ಪತ್ರ ಬರೆಯಿರಿ. ನಿಮ್ಮ ಎಲ್ಲಾ ಪ್ರತಿಕ್ರಿಯೆಯನ್ನು ನಾವು ನೋಡುತ್ತೇವೆ” ಎಂದು ಹೇಳಿದ್ದಾರೆ. ಅಪ್ರಮೇಯ ಅವರ ಈ ಉತ್ತರಕ್ಕೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

 

ರೈತರ ಹೋರಾಟದ ಬಗ್ಗೆ ಟ್ವೀಟ್ ಮಾಡುವ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್ ನಿರಾಕರಿಸಿದ ನಂತರ, ಕೇಂದ್ರ ಸರ್ಕಾರ ಸೇರಿದಂತೆ ಲಕ್ಷಾಂತರ ಜನರು ‘ಕೂ’ ಅಪ್ಲಿಕೇಶನ್‌‌‌ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪ್ರಸ್ತುತ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳ ಹ್ಯಾಂಡಲ್‌ಗಳನ್ನು ‘ಕೂ’ ವೇರಿಫೈ ಮಾಡಿದೆ. ನಾನು ಈಗ ‘ಕೂ’ ಆಪ್‌‌ನಲ್ಲಿದ್ದೇನೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

‘ಕೂ’ ಆಪ್‌ನಲ್ಲಿನ ದೋಷವನ್ನು ಬ್ಯಾಪ್ಟಿಸ್ಟ್ ಮಾತ್ರವಲ್ಲದೆ ಬೇರೊಬ್ಬರೂ ಕಂಡು ಹಿಡಿದಿದ್ದಾರೆ. ಪ್ರಣವ್ ಎಂಬವರು, ಈ ಆಪ್‌ನಲ್ಲಿ ತಾನು ಯಾವುದೆ ಖಾತೆಯನ್ನು ಮಾಡದೆ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

 

 

 

ಚೀನೀ ಸಂಪರ್ಕ?

ಬ್ಯಾಪ್ಟಿಸ್ಟ್ ‘ಕೂ’ ಆಪ್‌ಗೆ ಚೀನಾ ಸಂಪರ್ಕವಿದೆ ಎಂಬ ಟ್ವೀಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ. ಆದರೆ ಅದು ಅಷ್ಟೊಂದು ನಿಖರವಾಗಿಲ್ಲ ಎನ್ನಲಾಗಿದೆ. ‘ಕೂಆಪ್‌.ಕಾಮ್’ ಡೊಮೇನ್‌‌‌ ಅನ್ನು ನಾಲ್ಕು ವರ್ಷಗಳ ಹಿಂದೆ ರಚಿಸಲಾಗಿದೆ. ಅಂದಿನಿಂದ ಇಂದಿನವರೆಗೂ ಇದರ ಮಾಲಿಕತ್ವ ಹಲವು ಬಾರಿ ಬದಲಾಗಿದೆ ಎಂದು ಈ ದಾಖಲೆ ತಿಳಿಸುತ್ತದೆ. ಅದರ ಇತ್ತೀಚೆನ ಮಾಲಿಕರು ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಆಗಿದೆಯಾದರೂ, ಅದು ಅದನ್ನು 2019 ರಲ್ಲಷ್ಟೇ ಸ್ವಾಧೀನ ಪಡಿಸಿಕೊಂಡಿದೆ.

ಆದರೆ ಕೂ ಅಪ್ಲಿಕೇಶನ್‌ನಲ್ಲಿ ಚೀನೀ ಹೂಡಿಕೆ ಇದ್ದು, ಚೀನಾ ಮೂಲದ ಶಿಯೋಮಿ ಕಂಪೆನಿಯೊಂದಿಗೆ ಸಂಬಂಧವಿರುವ ಶುನ್‌ವೇಯು ಇದರಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಆದರೆ ಕೂವನ್ನು ಸಂಪೂರ್ಣ ಸ್ವದೇಶಿ ಅಪ್ಲಿಕೇಶನ್ ಮಾಡುತ್ತಿದ್ದು ಅಲ್ಪ ಪಾಲಷ್ಟೆ ಶುನ್‌ವೆ ಅವರಲ್ಲಿದೆ, ಅವರು ಅದನ್ನು ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ‘ಕೂ’ ಸಿಇಒ ಅಪ್ರಮೇಯ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನಲ್ಲಿ ಇತ್ತು.
    ಅದು ಒಂದು ಪಕ್ಷದ ಪರವಾಗಿದೆ ಎಂದು ಅಲ್ಲಿಂದ ವರ್ಷಗಳ ಹಿಂದೆ ತೊರೆದಿದ್ದೇನೆ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...