HomeUncategorizedತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

- Advertisement -
- Advertisement -

‘ಮಳೆ ನಿಂತರೂ ಮರದ ಹನಿ ನಿಲ್ಲಲ್ಲ’ ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು ಈ ಮಾತಿಗೆ ಇನ್ನಷ್ಟು ಪುಷ್ಟಿ ನೀಡುವಂತೆ ಮಾಡುತ್ತದೆ. ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿ, ಮತದಾನದ ಪ್ರಕ್ರಿಯೆಯೆಂಬ ಮಳೆ ನಿಂತಿದೆ. ಜನಾದೇಶ ಸ್ಪಷ್ಟವಾಗಿ ಬಂದಿದ್ದರೂ, ಅದರ ನಂತರದ ಸರ್ಕಾರ ರಚನೆಯ ಹನಿಗಳು ನಿಲ್ಲದೆ ಕುತೂಹಲ ಮೂಡಿಸಿದೆ.

108 ಸ್ಥಾನಗಳನ್ನು ಗೆದ್ದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತಮಿಳಗ ವೆಟ್ರಿ ಕಳಗಂ (TVK), 118 ರ ಬಹುಮತವನ್ನು ತಲುಪಲು ಕನಿಷ್ಠ 10 ಸ್ಥಾನಗಳ ಅಗತ್ಯವಿತ್ತು. ಕಾಂಗ್ರೆಸ್‌ನ 5 ಸ್ಥಾನಗಳೊಂದಿಗೆ, ವಿಜಯ್ ಗೆದ್ದ ಎರಡು ಸ್ಥಾನಗಳಲ್ಲಿ ಒಂದನ್ನು ಹೊರತುಪಡಿಸಿದರೆ, ಸಂಖ್ಯೆ 112 ಆಗಲಿದೆ. ಬಹುಮತ ಸಾಬೀತುಪಡಿಸಲು ಟಿವಿಕೆಗೆ ಇನ್ನೂ 6 ಸ್ಥಾನಗಳ ಅಗತ್ಯವಿದೆ. ಸಿಪಿಐ-2 ಮತ್ತು ಸಿಪಿಐ(ಎಂ)-2 ಬೆಂಬಲ ಸೂಚಿಸಿದರೆ ಒಟ್ಟು ಸಂಖ್ಯೆ 116 ಆಗುತ್ತದೆ. ಇನ್ನು 2 ಸ್ಥಾನ ಗೆದ್ದಿರುವ ವಿಸಿಕೆ ತಮಿಳಗ ವೆಟ್ರಿ ಕಳಗಂ (TVK) ಗೆ ಬೆಂಬಲ ನೀಡಿದರೆ ಸರ್ಕಾರ ರಚನೆಯ ಕಸರತ್ತು ಸುಲಭವಾಗುತ್ತದೆ.

ಅನುಮಾನಗಳಿಗೆ ಕಾರಣವಾಗುತ್ತಿರುವ ರಾಜ್ಯಪಾಲರ ನಡೆ

ತಮಿಳುನಾಡು ವಿಧಾನಸಭೆಯ ಒಟ್ಟು ಸ್ಥಾನಗಳು 234. ಸರ್ಕಾರ ರಚಿಸಲು ಬೇಕಾದ ಕನಿಷ್ಠ ಬಹುಮತ 118. ಆದರೆ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ, ಬಹುಮತಕ್ಕೆ ಇನ್ನೂ 10 ಸ್ಥಾನಗಳ ಕೊರತೆಯಿದೆ. ರಾಜ್ಯಪಾಲರ ಪ್ರಕಾರ, ಕೇವಲ ಅತಿ ದೊಡ್ಡ ಪಕ್ಷವಾದ ಮಾತ್ರಕ್ಕೆ ಸರ್ಕಾರ ರಚಿಸಲು ಸಾಧ್ಯವಿಲ್ಲ, ಸದನದಲ್ಲಿ ವಿಶ್ವಾಸ ಸಾಬೀತುಪಡಿಸುವಷ್ಟು ಸಂಖ್ಯಾಬಲದ ಖಚಿತ ಪುರಾವೆ ಬೇಕು ಎಂದಿದ್ದಾರೆ.

ಬೆಂಬಲ ಪತ್ರದ ತಾಂತ್ರಿಕ ಸಮಸ್ಯೆಯ ನೆಪ: ಕಾಂಗ್ರೆಸ್ ಮತ್ತು ಇತರರು ಬೆಂಬಲ ನೀಡುವ ಭರವಸೆ ನೀಡಿದ್ದರೂ, ವಿಜಯ್ ಅವರು ಆ ಪಕ್ಷಗಳ ಶಾಸಕರ ಸಹಿ ಇರುವ ಅಧಿಕೃತ ‘ಬೆಂಬಲ ಪತ್ರ’ವನ್ನು (Letter of Support) ರಾಜ್ಯಪಾಲರಿಗೆ ಸಲ್ಲಿಸಿಲ್ಲ ಎನ್ನಲಾಗಿದೆ. ಸಂವಿಧಾನದ ಪ್ರಕಾರ, ಮೈತ್ರಿಕೂಟದ ಬೆಂಬಲದ ಮೇಲೆ ಸರ್ಕಾರ ರಚಿಸುವಾಗ ಪ್ರತಿಯೊಬ್ಬ ಬೆಂಬಲಿತ ಶಾಸಕನ ಸಹಿ ಕಡ್ಡಾಯವಾಗಿರುತ್ತದೆ. ಪ್ರಸ್ತುತ ವಿಜಯ್ ಅವರ ಬಳಿ 112 ಶಾಸಕರ ಬೆಂಬಲ ಮಾತ್ರ ಇದೆ ಎಂದು ಮೂಲಗಳು ತಿಳಿಸಿವೆ (ಬಹುಮತಕ್ಕೆ 118 ಬೇಕು).

ಆದರೆ ಸಹಿ ಕಡ್ಡಾಯವೇ?

ವಿಶ್ವಾಸದ ಆಧಾರ: ವಿಜಯ್ ಅವರು “ನನ್ನ ಬಳಿ ಇಷ್ಟು ಮಂದಿಯ ಬೆಂಬಲವಿದೆ” ಎಂದು ಹೇಳಿದಾಗ, ಅವರ ಮೇಲೆ ನಂಬಿಕೆಯಿಟ್ಟು ಅವಕಾಶ ನೀಡುವುದು ರಾಜ್ಯಪಾಲರ ಕರ್ತವ್ಯ. ಆದರೆ, “ಮ್ಯಾಜಿಕ್ ನಂಬರ್” (118) ಗಿಂತ ಕಡಿಮೆ ಸ್ಥಾನಗಳಿದ್ದಾಗ, ರಾಜ್ಯಪಾಲರು “ಖಚಿತತೆ”ಗಾಗಿ ಬೆಂಬಲ ಪತ್ರವನ್ನು ಕೇಳುತ್ತಾರೆ. ಆದರೆ ಸಹಿ ಕಡ್ಡಾಯವಲ್ಲ ಯಾವುದೇ ಕಾನೂನು ಅಥವಾ ಸಂವಿಧಾನದ ವಿಧಿಯು ಶಾಸಕರ ಸಹಿ ಇರುವ ಪಟ್ಟಿಯನ್ನು ನೀಡುವುದು ಕಡ್ಡಾಯ ಎಂದು ಹೇಳುವುದಿಲ್ಲ.

ರಾಜ್ಯಪಾಲರು ಯಾರಿಗೆ ಬಹುಮತವಿದೆ ಎಂದು ರಾಜಭವನದ ಒಳಗಡೆ ನಿರ್ಧರಿಸುವಂತಿಲ್ಲ. ಬಹುಮತದ ಪರೀಕ್ಷೆಯು ಕೇವಲ ವಿಧಾನಸಭೆಯ ಒಳಗಡೆ (On the floor of the House) ನಡೆಯಬೇಕು. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಯನ್ನು ಮೊದಲು ಆಹ್ವಾನಿಸಿ, ಅವರಿಗೆ ಬಹುಮತ ಸಾಬೀತುಪಡಿಸಲು ಸಮಯ ನೀಡುವುದು ಸಾಂವಿಧಾನಿಕ ಸಂಪ್ರದಾಯ ಮತ್ತು ರಾಜ್ಯಪಾಲರ ಕರ್ತವ್ಯ

“ರಾಜ್ಯಪಾಲರು 118 ಜನರ ಸಹಿ ಬೇಕು ಎಂದು ಹಠ ಹಿಡಿಯುವುದು ಅಸಂವಿಧಾನಿಕ. ಅತಿ ದೊಡ್ಡ ಪಕ್ಷವನ್ನು ಮೊದಲು ಕರೆದು ವಿಶ್ವಾಸ ಮತ ಯಾಚಿಸಲು ಅವಕಾಶ ಕೊಡಬೇಕು. ಸಹಿ ಸಂಗ್ರಹಿಸುವುದು ಅಥವಾ ಶಾಸಕರನ್ನು ರಾಜ್ಯಪಾಲರ ಮುಂದೆ ಪರೇಡ್ ಮಾಡಿಸುವುದು ಪ್ರಜಾಪ್ರಭುತ್ವದ ಘನತೆಗೆ ತಕ್ಕುದಲ್ಲ.” ಎನ್ನುತ್ತಾರೆ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ.

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ನಾಲ್ಕು ದಿನ ಕಳೆದರೂ, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ (ಈ ಲೇಖನವನ್ನು ನೀವು ಓದುವ ವೇಳೆಗೆ ಸರ್ಕಾರ ರಚಿಸುವ ಹಾದಿ ಸುಗಮವೂ ಆಗಿರಲೂಬಹುದು) ಸಿಗದಿರುವುದು ಈಗ ಹಲವು ಸಾಂವಿಧಾನಿಕ ಪ್ರಶ್ನೆಗಳ ಜೊತೆಗೆ ‘ರಾಜಕೀಯ ಪಿತೂರಿ’ಯ ಶಂಕೆಯನ್ನೂ ಹುಟ್ಟುಹಾಕಿದೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಟಿವಿಕೆಗೆ ಆಹ್ವಾನ ನೀಡಲು ವಿಳಂಬ ಮಾಡುತ್ತಿರುವುದು ಕೇವಲ ‘ಸಂಖ್ಯಾಬಲ’ದ ಕಾರಣಕ್ಕೋ ಅಥವಾ ಇದರ ಹಿಂದೆ ದೆಹಲಿಯ ‘ದೂರದರ್ಶನ’ವಿದೆಯೇ ಎಂಬ ಚರ್ಚೆ ಜೋರಾಗಿದೆ. 108 ಸ್ಥಾನಗಳನ್ನು ಗೆದ್ದಿರುವ ವಿಜಯ್‌ಗೆ ಕಾಂಗ್ರೆಸ್‌ನ 5 ಶಾಸಕರು ಮತ್ತು ಎಡಪಕ್ಷಗಳ ಬೆಂಬಲ ಸೇರಿದರೂ 118ರ ಗಡಿ ತಲುಪಲು ಕಷ್ಟವಾಗುತ್ತಿದೆ. ಈ ‘ಸಣ್ಣ ಅಂತರ’ವನ್ನೇ ಬಳಸಿಕೊಂಡು ಕೇಂದ್ರದ ಆಣತಿಯಂತೆ ರಾಜ್ಯಪಾಲರು ಬಿಕ್ಕಟ್ಟು ಸೃಷ್ಟಿಸುತ್ತಿದ್ದಾರೆಯೇ ಎಂಬ ವಾದಕ್ಕೆ ಪುಷ್ಟಿ ಸಿಗುತ್ತಿದೆ.

ಎನ್.ಡಿ.ಎ (NDA) ಮಿತ್ರಪಕ್ಷವಾಗಿರುವ ಎಐಎಡಿಎಂಕೆ (AIADMK) ಜೊತೆ ಟಿವಿಕೆ ಮೈತ್ರಿ ಮಾಡಿಕೊಳ್ಳುವಂತೆ ತೆರೆಮರೆಯ ಒತ್ತಡಗಳು ನಡೆಯುತ್ತಿವೆ. ವಿಜಯ್ ಅವರು ಜಾತ್ಯತೀತ ನಿಲುವಿನ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳಲು ಬಯಸಿದ್ದಾರೆ. ಆದರೆ, ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಎಐಎಡಿಎಂಕೆ ಮತ್ತು ಟಿವಿಕೆ ಒಂದಾಗುವುದು ಅನಿವಾರ್ಯವಾಗಿದೆ. ಈ ಮೈತ್ರಿಗೆ ವಿಜಯ್ ಒಪ್ಪುವವರೆಗೆ ರಾಜ್ಯಪಾಲರು ಆಹ್ವಾನ ನೀಡದೆ ಕಾಲಹರಣ ಮಾಡುತ್ತಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಗಂಭೀರ ಆರೋಪ.

ಕರ್ನಾಟಕ, ತೆಲಂಗಾಣ ಮತ್ತು ಈಗ ತಮಿಳುನಾಡು – ಈ ರಾಜ್ಯಗಳಲ್ಲಿ ಬಿಜೆಪಿ ನೇರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗದಿದ್ದಾಗ, ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರದ ಹಾದಿಗೆ ಮುಳ್ಳು ಹರಡುವುದು ಅಥವಾ ಮೈತ್ರಿ ಬದಲಿಸುವಂತೆ ಒತ್ತಡ ಹೇರುವುದು ಒಂದು ‘ಪ್ಯಾಟರ್ನ್’ ಆಗಿ ಬದಲಾಗಿದೆ. ತಮಿಳುನಾಡಿನಲ್ಲಿ ವಿಜಯ್ ಅನಿವಾರ್ಯವಾಗಿ ಬಿಜೆಪಿಯ ಮಿತ್ರಪಕ್ಷಗಳ ಮೊರೆ ಹೋಗುವಂತೆ ಮಾಡುವಲ್ಲಿ ಕೇಂದ್ರದ ಚಾಣಕ್ಯ ನೀತಿ ಕೆಲಸ ಮಾಡುತ್ತಿದೆ ಎಂಬ ಶಂಕೆ ದಟ್ಟವಾಗಿದೆ.

ವಿಜಯ್ ಅವರ ಪಕ್ಷವನ್ನು ಆಹ್ವಾನಿಸಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡುವುದೇ ಸರಿಯಾದ ಕ್ರಮ. ಆದರೆ, ರಾಜ್ಯಪಾಲರು ‘ಖಚಿತವಾದ ಬಹುಮತ’ ಇಲ್ಲದ ಸರ್ಕಾರ ರಚನೆಯಿಂದ ಮುಂದೆ ಮತ್ತೊಂದು ಬಿಕ್ಕಟ್ಟು ಎದುರಾಗಬಹುದು ಎಂಬ ನೆಪವೊಡ್ಡಿ ವಿಳಂಬ ಮಾಡುತ್ತಿದ್ದಾರೆ. ಇದು ಮೇಲ್ನೋಟಕ್ಕೆ ‘ಸಾಂವಿಧಾನಿಕ ಜಾಗರೂಕತೆ’ಯಂತೆ ಕಂಡರೂ, ಒಳಗೊಳಗೆ ಇದು ‘ರಾಜಕೀಯ ತಂತ್ರ’ದಂತೆ ಕಾಣುತ್ತಿದೆ

ಒಂದು ಪಕ್ಷಕ್ಕೆ ಕೆಲವೇ ಸ್ಥಾನಗಳ ಕೊರತೆಯಿರುವಾಗ ಆ ಪಕ್ಷಕ್ಕೆ ಮೊದಲ ಅವಕಾಶ ನೀಡುವುದು ಸಂವಿಧಾನಿಕ ಸಂಪ್ರದಾಯ. ವಿಳಂಬ ಮಾಡುವುದು ಕೇವಲ ‘ಕುದುರೆ ವ್ಯಾಪಾರ’ಕ್ಕೆ ದಾರಿ ಮಾಡಿಕೊಡುತ್ತದೆ ಎಂಬ ಗಂಭೀರತೆಯೂ ರಾಜ್ಯಪಾಲರಿಗೆ ಅರ್ಥವಾಗುತ್ತಿಲ್ಲವೋ ಅಥವಾ ದೆಹಲಿಯಿಂದ ಬರಬಹುದಾದ ಸಂದೇಶಕ್ಕೆ ಕಾಯುತ್ತಿದ್ದಾರೋ ಎಂಬುದು ಯಕ್ಷ ಪ್ರಶ್ನೆಯೇನಲ್ಲ.

ಸದ್ಯ ರಾಜ್ಯಪಾಲರ ಒಪ್ಪಿಗೆ

ತಮಿಳುನಾಡಿನಲ್ಲಿ ಸ್ಥಿರ ಸರ್ಕಾರ ರಚಿಸಲು ಅಗತ್ಯವಿರುವ 118 ಬಹುಮತ ಸಂಖ್ಯೆಗಳನ್ನು ವಿಜಯ್ ನೇತೃತ್ವದ ಟಿವಿಕೆ ಶುಕ್ರವಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮೂರನೇ ಬಾರಿಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ಬೆಂಬಲದ ಪತ್ರವನ್ನು ನೀಡಿದ್ದಾರೆ. ಹೀಗಾಗಿ, ಇಂದು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆ ಟಿವಿಕೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಸರ್ಕಾರ ರಚನೆಗೆ ರಾಜ್ಯಪಾಲರು ಹಸಿರು ನಿಶಾನೆ ತೋರಿದ್ದು, ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಪದಗ್ರಹಣ ಮಾಡಲಿದ್ದಾರೆ.

ಸಿನಿಮಾ ಪರದೆಯ ಮೇಲೆ ವಿಲನ್ಗಳನ್ನು ಸದೆಬಡಿಯುವ ವಿಜಯ್‌ಗೆ, ಮುಂಬರುವ ವಾಸ್ತವ ರಾಜಕಾರಣ ಸವಾಲಾಗಿ ಪರಿಣಮಿಸಿವೆ. ಈ ಸರ್ಕಸ್‌ನಲ್ಲಿ ವಿಜಯ್ ಗೆಲ್ಲುತ್ತಾರೋ ಅಥವಾ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿಯುತ್ತಾರೋ ಎನ್ನುವುದು ತಮಿಳುನಾಡಿನ ಮುಂದಿನ ಐದು ವರ್ಷಗಳ ಭವಿಷ್ಯವನ್ನು ನಿರ್ಧರಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...