Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...