Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...