Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...