Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...