Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...