Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...