Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...