Homeಮುಖಪುಟ‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ - RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

‘BJP ಸರ್ಕಾರ ಕೂಡಾ ದೇಶ ವಿರೋಧಿಯೆ?’ – RSS ಮುಖವಾಣಿ ಪಾಂಚಜನ್ಯಕ್ಕೆ ರಘುರಾಮ ರಾಜನ್ ಪ್ರಶ್ನೆ

- Advertisement -
- Advertisement -

ತೆರಿಗೆ ಸಲ್ಲಿಕೆಯ ವೆಬ್‌ಸೈಟ್‌ನಲ್ಲಿ ಲೋಪದೋಷ ಇರುವುದಕ್ಕಾಗಿ ಇನ್ಫೋಸಿಸ್‌ ಸಂಸ್ಥೆಯನ್ನು ‘ದೇಶ ವಿರೋಧಿ’ ಎಂದು ಕರೆದಿರುವ ಆರೆಸ್ಸೆಸ್‌ ಮುಖ್ಯವಾಣಿ ಪಾಂಚಜನ್ಯವನ್ನು, ಆರ್‌ಬಿಐನ ಮಾಜಿ ಗವರ್ನರ್‌ ಡಾ. ರಘುರಾಮ ರಾಜನ್‌ ಅವರು ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕೆಯನ್ನು ಪ್ರಶ್ನಿಸಿರುವ ಅವರು, ಕೊರೊನಾ ಲಸಿಕೆ ನೀಡುವಲ್ಲಿ ಒಕ್ಕೂಟ ಸರ್ಕಾರ ಕೂಡಾ ಕಳಪೆ ಪ್ರದರ್ಶನ ನೀಡಿದೆ, ಅದನ್ನು ಕೂಡಾ ರಾಷ್ಟ್ರ ವಿರೋಧಿ ಎಂದು ಕರೆಯುತ್ತಾರೆಯೇ ಎಂದು ಕೇಳಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞರಾಗಿರುವ ರಘುರಾಮ ರಾಜನ್‌ ಅವರು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಖಾಸಗಿ ವಲಯದ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ಆಕ್ರೋಶವನ್ನು ಎದುರಿಸುತ್ತಿವೆ. ಜೊತೆಗೆ ಹಲವಾರು ಖಾಸಗಿ ಸಂಸ್ಥೆಗಳು ಮುಚ್ಚಿವೆ. ಈ ಪಟ್ಟಿಗೆ ತೀರಾ ಇತ್ತೀಚಿನ ಉದಾಹರಣೆಯಾಗಿದೆ ಇನ್ಫೋಸಿಸ್.

ಇದನ್ನೂ ಓದಿ: ‘ಇನ್ಫೋಸಿಸ್‌ ಎಡಪಂಥೀಯರಿಗೆ ಸಹಾಯ ಮಾಡುತ್ತಿದೆ’ – ಆರೆಸ್ಸೆಸ್‌‌ ಮುಖವಾಣಿ ಪತ್ರಿಕೆ ಆಕ್ರೋಶ

“ಲಸಿಕೆ ನೀಡುವಲ್ಲಿ ಉತ್ತಮ ಕೆಲಸ ಮಾಡದ ಸರ್ಕಾರವನ್ನು ನೀವು ದೇಶವಿರೋಧಿ ಎಂದು ಆರೋಪಿಸುತ್ತೀರಾ? ನೀವು ತಪ್ಪಾಗಿದೆ ಎಂದು ಹೇಳುತ್ತೀರಿ, ಹಾಗೆಯೆ ಜನರು ಕೂಡಾ ತಪ್ಪುಗಳನ್ನು ಮಾಡುತ್ತಾರೆ” ಎಂದು ರಘುರಾಮ ರಾಜನ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಜಿಎಸ್‌ಟಿ ಜಾರಿಮಾಡಿರುವುದನ್ನು ಅದ್ಭುತವಾಗಿದೆ ಎಂದು ನಾನು ಭಾವಿಸುವುದಿಲ್ಲ. ಅದನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು…ಆದರೆ ಆ ತಪ್ಪುಗಳಿಂದ ಕಲಿಯಿರಿ ಮತ್ತು ನಿಮ್ಮ ಸ್ವಂತ ಪೂರ್ವಾಗ್ರಹಗಳನ್ನು ಹೊರಹಾಕಲು ಅದನ್ನು ವೇದಿಕೆಯಾಗಿ ಬಳಸಬೇಡಿ” ಎಂದು ರಘುರಾಮ ಅವರು ಹೇಳಿದ್ದಾರೆ.

ಆರೆಸ್ಸೆಸ್‌ ಮುಖವಾಣಿ ಆಗಿರುವ ಪಾಂಚಜನ್ಯ ಪತ್ರಿಕೆಯು, ಇನ್ಫೋಸಿಸ್‌ ಸಂಸ್ಥೆ ಅಭಿವೃದ್ಧಿಪಡಿಸಿರುವ ಒಕ್ಕೂಟ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ನೂತನ ಆದಾಯ ತೆರಿಗೆ ಪೋರ್ಟಲ್‌ಗಳು ಗೊಂದಲಕಾರಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ

ಇದು ದೇಶದಾದ್ಯಂತ ಭಾರಿ ಚರ್ಚೆಯನ್ನೂ ಹುಟ್ಟುಹಾಕಿತ್ತು. ಪಾಂಚಜನ್ಯ ತನ್ನ ಸೆ.5ರ ಸಂಚಿಕೆಯಲ್ಲಿ ಈ ಕುರಿತು ಪ್ರಧಾನ ಲೇಖನ ಬರೆದಿದ್ದು, ಮುಖಪುಟದಲ್ಲಿ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರ ಭಾವಚಿತ್ರ ಹಾಗೂ ’ಸಾಖ್‌ ಔರ್‌ ಆಘಾತ್‌’ (ಖ್ಯಾತಿ ಮತ್ತು ಅಘಾತ) ಎಂಬ ಶೀರ್ಷಿಕೆಯನ್ನು ನೀಡಲಾಗಿದೆ ಎಂಬುದಾಗಿ ದಿ ಹಿಂದೂ ವರದಿ ಮಾಡಿದೆ.

ಇನ್ಫೋಸಿಸ್‌ ರೂಪಿಸಿರುವ ಈ ಪೋರ್ಟಲ್‌ಗಳು ಕಳಪೆಯಾಗಿದ್ದು, ತೆರಿಗೆ ಸಂಗ್ರಹವನ್ನು ತಗ್ಗಿಸುವಂತಿವೆ. ವ್ಯವಸ್ಥೆಯನ್ನು ಸುಲಭಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲೆಂದು ಸರ್ಕಾರ ಗುತ್ತಿಗೆ ನೀಡಿದರೆ, ವ್ಯವಸ್ಥೆಯನ್ನೇ ಗೊಂದಲಕಾರಿ ಮಾಡಲಾಗಿದೆ. ಸರ್ಕಾರ ಅನುಸರಿಸುವ ಕಡಿಮೆ ಮಟ್ಟದ ವಾಣಿಜ್ಯ ಹರಾಜು ಪ್ರಕ್ರಿಯೆ ಕುರಿತೂ ಪಾಂಚಜನ್ಯ ಪ್ರಶ್ನೆ ಎತ್ತಿದ್ದು, “ಇನ್ಫೋಸಿಸ್‌ ತನ್ನ ವಿದೇಶಿ ಗ್ರಾಹಕರಿಗೂ ಇದೇ ರೀತಿಯ ಕಳಪೆ ಸೇವೆಯನ್ನೇ ನೀಡುತ್ತದೆಯೇ?” ಎಂದೂ ಪ್ರಶ್ನಿಸಿದೆ.

ಜೊತೆಗೆ, “ಮೋದಿ ಸರ್ಕಾರವನ್ನು ಟೀಕಿಸುವ ಎಡಪಂಥೀಯ ಶಕ್ತಿಗಳಿಗೆ, ಸತ್ಯ ಶೋಧಕ ಸಂಸ್ಥೆಗಳಿಗೆ, ಸುದ್ದಿ ಪೋರ್ಟಲ್‌ಗಳಿಗೆ ಇನ್ಫೋಸಿಸ್‌ ಸಂಸ್ಥೆಯು ಹಣಕಾಸು ಒದಗಿಸುತ್ತಿದೆ” ಎಂದು ಪಾಂಚಜನ್ಯ ಆರೋಪಿಸಿದೆ. ಇನ್ಫೋಸಿಸ್‌ ಇತ್ತ ಸರ್ಕಾರದ ಪೋರ್ಟಲ್‌ ಅನ್ನೂ ನಿರ್ವಹಿಸುತ್ತಿರುವುದು ಪೋರ್ಟಲ್‌ನ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅದು ಸಂಶಯ ವ್ಯಕ್ತಪಡಿಸಿತ್ತು.

ಈ ನಡುವೆ ಆರೆಸ್ಸೆಸ್‌ ಈ ಲೇಖನದಿಂದ ಅಂತರ ಕಾಯ್ದುಕೊಂಡಿದೆ. ಇದು ವ್ಯಕ್ತಿಗತ ಲೇಖನವಾಗಿದ್ದು, ಇದಕ್ಕೂ ಆರೆಸ್ಸೆಸ್‌ಗೂ ಯಾವುದೆ ಸಂಬಂಧವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...