Homeಕರ್ನಾಟಕ'19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..'; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್...

’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

'ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ, ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ'

- Advertisement -
- Advertisement -

ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮತ್ತೋರ್ವ ‘ದಳ’ ಶಾಸಕ ಬಹಿರಂಗವಾಗಿ ಆಗ್ರಹಿಸಿದ್ದಾರೆ. “19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ಪ್ರಜ್ವಲ್ ರೆವಣ್ಣ ಮುಖ್ಯವೋ ತೀರ್ಮಾನಿಸಬೇಕಿದೆ, 24ಗಂಟೆಗಳಲ್ಲಿ ಆರೋಪ ಹೊತ್ತಿರುವ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು’ ಎಂದು ಮುಳಬಾಗಿಲು ಎಂಎಲ್‌ಎ ಸಮೃದ್ಧಿ ಮಣಜುನಾಥ್ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇತ್ತಿಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ, ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ. ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ” ಎಂದು ಅವರು ಬೇಸರ ಹೊರಹಾಕಿದ್ದಾರೆ.

“ಮಾನ್ಯ ವರಿಷ್ಠರು, ರಾಷ್ಟ್ರಾಧ್ಯಕ್ಷರು ಎಚ್.ಡಿ.ದೇವೇಗೌಡ ಅಪ್ಪಾಜಿ ರವರು, ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಣ್ಣರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ವಿನಂತಿಸಿಕೊಳ್ಳುವುದೇನೆಂದರೆ, 19 ಜನ ಶಾಸಕರ ಭವಿಷ್ಯ ಬೇಕೋ; ತಮ್ಮ ಕುಟುಂಬದ ಪ್ರಜ್ವಲ್ ರೇವಣ್ಣರವರು ಮುಖ್ಯವೋ ತೀರ್ಮಾನಿಸಬೇಕಿದೆ. 24ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ, ಪಕ್ಷದ ಸಿದ್ಧಾಂತಗಳನ್ನು ಉಳಿಸಿ, ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಬಗ್ಗೆ ಮೊದಲೇ ಗೊತ್ತಿದ್ದೂ ಸುಮ್ಮನಿದ್ರಾ ಮೈತ್ರಿ ನಾಯಕರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...