Homeಕರ್ನಾಟಕಯಡಿಯೂರಪ್ಪರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಯಡಿಯೂರಪ್ಪರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

1992ರ ಗಲಭೆ ಆರೋಪಿ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಈ ರೀತಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಪ್ರಶ್ನಿಸಿದ್ದಾರೆ.

ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ ಎಂದಿದ್ದಾರೆ.

ಗಲಭೆ ಆರೋಪಿಯ ಬಂಧನ 

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಶ್ರೀಕಾಂತ್ ಎಂಬಾತನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ.

ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿಯಿಂದ ಪ್ರತಿಭಟನೆ: 

ಗಲಭೆ ಆರೋಪಿ ಶ್ರೀಕಾಂತ್ ಪೂಜಾರ ಬಂಧನ ಖಂಡಿಸಿ ಇಂದು(ಡಿ.3) ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆಕೊಟ್ಟಿದೆ. ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಅಂಬಾಸಿಡರ್. ಅವರಿಗೆ ರಾಮ ಮಂದಿರ ನಿರ್ಮಣವಾಗುತ್ತಿರುವುದು ಇಷ್ಟವಿಲ್ಲ. ಈ ಕಾರಣಕ್ಕೆ ಹಳೆಯ ಪ್ರಕರಣದ ಆರೋಪಿಯನ್ನು ಬಂಧಿಸಿ, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಭಯಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...