Homeಕರ್ನಾಟಕಯಡಿಯೂರಪ್ಪರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಯಡಿಯೂರಪ್ಪರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

1992ರ ಗಲಭೆ ಆರೋಪಿ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಈ ರೀತಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಪ್ರಶ್ನಿಸಿದ್ದಾರೆ.

ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ ಎಂದಿದ್ದಾರೆ.

ಗಲಭೆ ಆರೋಪಿಯ ಬಂಧನ 

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಶ್ರೀಕಾಂತ್ ಎಂಬಾತನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ.

ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿಯಿಂದ ಪ್ರತಿಭಟನೆ: 

ಗಲಭೆ ಆರೋಪಿ ಶ್ರೀಕಾಂತ್ ಪೂಜಾರ ಬಂಧನ ಖಂಡಿಸಿ ಇಂದು(ಡಿ.3) ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆಕೊಟ್ಟಿದೆ. ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಅಂಬಾಸಿಡರ್. ಅವರಿಗೆ ರಾಮ ಮಂದಿರ ನಿರ್ಮಣವಾಗುತ್ತಿರುವುದು ಇಷ್ಟವಿಲ್ಲ. ಈ ಕಾರಣಕ್ಕೆ ಹಳೆಯ ಪ್ರಕರಣದ ಆರೋಪಿಯನ್ನು ಬಂಧಿಸಿ, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಭಯಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...