Homeಕರ್ನಾಟಕಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿಂತೆ ಬೊಬ್ಬಿಡುತ್ತಿರುವ ಸಚಿವೆ ಶೋಭಾ ಕರಂದ್ಲಾಜೆಯ ಮೌನ ಪೊಲೀಸ್‌ ದೌರ್ಜನ್ಯಕ್ಕೆ ಸಮ್ಮತಿ ಎಂದು ಅರ್ಥೈಸೋಣವೇ? ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೆ ಪ್ರಕರಣ ದಾಖಲು ಮಾಡಿರುವುದು ನೋಡಿದರೆ, ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

“ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು. ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ:ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

“ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ, ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...