Homeಕರ್ನಾಟಕಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

ಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

- Advertisement -
- Advertisement -

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಣ್ಣಿನ ಸೊಗಡು ಇದ್ದು, ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣಬೇಕಾದದ್ದು ನಾಗರೀಕತೆಯ ಕರ್ತವ್ಯ. ಆದರೆ, ದೇಶವನ್ನು ತಮ್ಮದೇ ಜಾತಿ- ಧರ್ಮ ಶ್ರೇಷ್ಠ ಎಂಬ ಶ್ರೇಷ್ಠತೆಯ ವ್ಯಸನ ಕಾಡುತ್ತಿರುವಂತೆಯೇ ಇದೀಗ ಭಾಷಾ ಶ್ರೇಷ್ಠತೆಯ ವ್ಯಸನವೂ ದೇಶಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ.

ಭಾರತದಲ್ಲಿ ನೂರೆಂಟು ಭಾಷೆಗಳಿವೆ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಆದರೆ, ಕನ್ನಡ ಅಭಿವೃದ್ಧಿಗೆ ಬಿಡಿಗಾಸು ನೀಡದ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿಯನ್ನು ಹೇರಿದಂತೆ ಇದೀಗ ಸಂಸ್ಕೃತವನ್ನೂ ಹೇರಲು ಮುಂದಾಗಿದೆ. ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನೂರಾರು ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಲು ಹೊರಟಿದೆ. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ, ಹಲವು ಬಲಪಂಥೀಯರು ಸಂಸ್ಕೃತ ಭಾರತದ ಆದಿಭಾಷೆ, ಮೂಲ ಭಾಷೆ, ಭಾರತದ ಮಾತೃಭಾಷೆ ಎಂದೆಲ್ಲಾ ಹೊಸ ಹೊಸ ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಂಸ್ಕೃತ ಭಾಷೆಯ ಅಬ್ಬರ ಜೋರಾಗಿಯೇ ಇದೆ.

ಈ ಹಿನ್ನೆಲೆಯಲ್ಲಿ ಭಾರತದ ಮೂಲ ಭಾಷೆ ಯಾವುದು? ಸಂಸ್ಕೃತಕ್ಕೂ ಭಾರತಕ್ಕೂ ಇರುವ ಸಂಬಂಧವೇನು? ಸಂಸ್ಕೃತ ನಿಜಕ್ಕೂ ಭಾರತದ ಮೂಲ ಭಾಷೆಯ-ದೇವ ಭಾಷೆಯಾ? ಇಷ್ಟಕ್ಕೂ ಸಂಸ್ಕೃತ ಇದೀಗ ಸತ್ತ ಭಾಷೆಯಾಗಿರುವುದು ಏಕೆ? ಎಂಬ ಅಸಲಿ ವಿಚಾರಗಳ ಕಡೆಗೆ ಗಮನ ಹರಿಸಬೇಕಾದ ತುರ್ತು ಎದುರಾಗಿದೆ.

ಸಂಸ್ಕೃತದ ಮೂಲ ಯಾವುದು?

ಜಗತ್ತಿನಲ್ಲಿ ಅತಿದೊಡ್ಡ ನುಡಿ ಕುಟುಂಬ ಇಂಡೋ ಯುರೋಪಿಯನ್ ಕುಟುಂಬ. ಲಿತುವೇನಿಯಾದ ಪುರಾತತ್ವ ತಜ್ಞೆ ಮಾರಿಜಾ ಗಿಂಬುಟಾಸ್ ಎನ್ನುವವರು ಪ್ರತಿಪಾದಿಸಿದ್ದ ಕುರ್ಗಾನ್ ಹಯ್ಪಾತಿಸಿಸ್ (Kurgan hypothesis) ಪ್ರಕಾರ ಇಂಡೋ ಯೂರೋಪಿಯನ್ನರ ತಾಯ್ನೆಲ ಇರುವುದು ಪಾಂಟಿಕ್ ಸ್ಟೆಪ್ (Pontic Steppe) ಜಾಗದಲ್ಲಿ. ಇದು ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರಗಳ ನಡುವಿನ ಜಾಗ. ಈಗ್ಗೆ 5000 ವರ್ಷಗಳ ಹಿಂದೆ ಅಲ್ಲಿದ್ದ ಆದಿ ಇಂಡೊ ಯೂರೋಪಿಯನ್ ನುಡಿಗರು ಯೂರೋಪ್ ಮತ್ತು ದಕ್ಶಿಣ ಏಶಿಯಾ ಕಡೆಗೆ ಎರಡು ಕವಲುಗಳಾಗಿ ವಲಸೆ ಹೋದರು. ಈ ಮೂನಲಕ ಜಗತ್ತಿನ ಎಲ್ಲಾ ಕಡೆ ಇಂಡೋ ಯೂರೋಪಿಯನ್ ಕುಟುಂಬದ ನುಡಿಗಳನ್ನು ಹಬ್ಬಿಸಿದರು. ಈ ಕುರ್ಗPನ್ ಹಯ್ಪಾತಿಸೀಸ್ ನ್ನು ಇತ್ತೀಚಿನ DNA ಸಂಶೋದನೆಗಳು ಸಹ ಗಟ್ಟಿಗೊಳಿಸಿವೆ.

ಈ ಇಂಡೋ ಯೂರೋಪಿಯನ್ ನುಡಿ ಕುಟುಂಬದ ಎರಡು ಕವಲುಗಳು ಇಂಡೋ ಆರ್ಯನ್ ಕವಲು ಮತ್ತು ಇರಾನಿಯನ್ ಕವಲು. ಸಂಸ್ಕೃತ ನುಡಿಯು ಇಂಡೋ ಕುಟುಂಬ ಕವಲಿನ ನುಡಿಯಾದರೆ ಅವೆಸ್ತ ಮತ್ತು ಪರ್ಸಿಯನ್ ಇರಾನಿಯನ್ ಕವಲಿನ ನುಡಿಗಳು. ಬಹಳ ಹಳೆಯದಾದ ಋಗ್ವೇದ ಸಂಸ್ಕೃತದಲ್ಲಿ ಇದ್ದರೆ ಜೊರಾಸ್ಟ್ರಿಯನ್ನರ ಜಂಡ್ ಅವೆಸ್ತಾ ಗ್ರಂಥವು ಅವೆಸ್ತಾ ನುಡಿಯಲ್ಲಿದೆ. ಈ ಎರಡೂ ಪ್ರಾಚೀನ ಗ್ರಂಥಗಳ ನಡುವೆ ಬಹಳ ಸಾಮ್ಯತೆ ಇರುವುದು ಸಹ ಕಂಡುಬಂದಿದೆ.

ಸಂಸ್ಕೃತ ನುಡಿಯ ಮೂಲಕ ಇಂಡೋ ಯೂರೋಪಿಯನ್ ಕುಟುಂಬದ ನುಡಿ ಬಾರತಕ್ಕೆ ಬಂದದ್ದು ಇಂದಿಗೆ 3,500 ವರ್ಷಗಳ ಹಿಂದೆ. ಈ ಹೊತ್ತಿಗೆ ಭಾರತದಲ್ಲಿ ದ್ರಾವಿಡ ನುಡಿ ಬಹಳ ಕುಟುಂಬ ದೊಡ್ಡ ನುಡಿ ಕುಟುಂಬವಾಗಿ ಬಾರತದ ಜನರಲ್ಲಿ ಚಾಲ್ತಿಯಲ್ಲಿತ್ತು. ಸಿಂದೂ ಬಯಲಿನ ನಾಗರೀಕತೆಯೂ ದ್ರಾವಿಡ ನುಡಿಗಳ ಮೂಲಕವೇ ಕಟ್ಟಲ್ಪಟ್ಟಿತ್ತು.

ಜೊತೆಗೇ ಮತ್ತೊಂದು ನುಡಿ ಕುಟುಂಬದ ಕೋಲಾ ಮುಂಡಾ ನುಡಿಯೂ ಭಾರತದಲ್ಲಿ ಬೇರು ಬಿಟ್ಟು ಬೆಳೆದಿತ್ತು. ಈ ಭಾಷೆಗಳಲ್ಲಿ ಭಾರತದ ಮಣ್ಣಿನ ಸೊಗಡಿತ್ತು. ಅಷ್ಟರಲ್ಲಾಗಲೇ ದ್ರಾವಿಡ ಬಾಷೆಗಳಲ್ಲಿ ಸಾಹಿತ್ಯಗಳನ್ನೇ ರಚಿಸಲಾಗಿತ್ತು. ಆದರೆ, ತದನಂತರದ ಕಾಲದಲ್ಲಿ ಭಾರತಕ್ಕೆ ವಲಸೆ ಬಂದ ಸಂಸ್ಕೃತ ಹೇಗೆ ಭಾರತದ ಮೂಲ ಮಾತೃ ಭಾಷೆಯಾಯಿತು? ಎಂದು ಪ್ರಶ್ನೆ ಮಾಡುತ್ತಾರೆ ಸಾಮಾಜಿಕ ಹೋರಾಟಗಾರ, ಎಲ್ಲರ ಕನ್ನಡ ಚಳವಳಿಯ ಪ್ರಮುಖರಲ್ಲೊಬ್ಬರಾದ ಹರ್ಷಕುಮಾರ ಕುಗ್ವೆ.

ಪ್ರಖ್ಯಾತ ಸಂಶೋಧಕರಾದ ಷಾ ಶೆಟ್ಟರ್, ಸಂಗಮೇಶ್ ಬದರಿಮಠ್ ರಂತಹ ಸಂಶೋಧಕರೂ ಸಹ ದ್ರಾವಿಡ ಭಾಷೆಯ ಭಾರತದ ಮೂಲ ಭಾಷೆ ಎಂಬುದನ್ನು ಈಗಾಗಲೇ ತಮ್ಮ ಸಂಶೋಧನೆಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದು ಹಲವರು ಸಂಸ್ಕೃತವೇ ಭಾರತದ ಮಾತೃ ಭಾಷೆ ಎಂದು ಆಧಾರವಿಲ್ಲದೆ ವಾದಿಸುತ್ತಿರುವುದು ವಿಪರ್ಯಾಸ.

(ಮಾಹಿತಿ – ಹರ್ಷಕುಮಾರ್ ಕುಗ್ವೆ)


ಇದನ್ನೂ ಓದಿರಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...