Homeಕರ್ನಾಟಕಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

ಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

- Advertisement -
- Advertisement -

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಣ್ಣಿನ ಸೊಗಡು ಇದ್ದು, ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣಬೇಕಾದದ್ದು ನಾಗರೀಕತೆಯ ಕರ್ತವ್ಯ. ಆದರೆ, ದೇಶವನ್ನು ತಮ್ಮದೇ ಜಾತಿ- ಧರ್ಮ ಶ್ರೇಷ್ಠ ಎಂಬ ಶ್ರೇಷ್ಠತೆಯ ವ್ಯಸನ ಕಾಡುತ್ತಿರುವಂತೆಯೇ ಇದೀಗ ಭಾಷಾ ಶ್ರೇಷ್ಠತೆಯ ವ್ಯಸನವೂ ದೇಶಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ.

ಭಾರತದಲ್ಲಿ ನೂರೆಂಟು ಭಾಷೆಗಳಿವೆ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಆದರೆ, ಕನ್ನಡ ಅಭಿವೃದ್ಧಿಗೆ ಬಿಡಿಗಾಸು ನೀಡದ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿಯನ್ನು ಹೇರಿದಂತೆ ಇದೀಗ ಸಂಸ್ಕೃತವನ್ನೂ ಹೇರಲು ಮುಂದಾಗಿದೆ. ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನೂರಾರು ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಲು ಹೊರಟಿದೆ. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ, ಹಲವು ಬಲಪಂಥೀಯರು ಸಂಸ್ಕೃತ ಭಾರತದ ಆದಿಭಾಷೆ, ಮೂಲ ಭಾಷೆ, ಭಾರತದ ಮಾತೃಭಾಷೆ ಎಂದೆಲ್ಲಾ ಹೊಸ ಹೊಸ ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಂಸ್ಕೃತ ಭಾಷೆಯ ಅಬ್ಬರ ಜೋರಾಗಿಯೇ ಇದೆ.

ಈ ಹಿನ್ನೆಲೆಯಲ್ಲಿ ಭಾರತದ ಮೂಲ ಭಾಷೆ ಯಾವುದು? ಸಂಸ್ಕೃತಕ್ಕೂ ಭಾರತಕ್ಕೂ ಇರುವ ಸಂಬಂಧವೇನು? ಸಂಸ್ಕೃತ ನಿಜಕ್ಕೂ ಭಾರತದ ಮೂಲ ಭಾಷೆಯ-ದೇವ ಭಾಷೆಯಾ? ಇಷ್ಟಕ್ಕೂ ಸಂಸ್ಕೃತ ಇದೀಗ ಸತ್ತ ಭಾಷೆಯಾಗಿರುವುದು ಏಕೆ? ಎಂಬ ಅಸಲಿ ವಿಚಾರಗಳ ಕಡೆಗೆ ಗಮನ ಹರಿಸಬೇಕಾದ ತುರ್ತು ಎದುರಾಗಿದೆ.

ಸಂಸ್ಕೃತದ ಮೂಲ ಯಾವುದು?

ಜಗತ್ತಿನಲ್ಲಿ ಅತಿದೊಡ್ಡ ನುಡಿ ಕುಟುಂಬ ಇಂಡೋ ಯುರೋಪಿಯನ್ ಕುಟುಂಬ. ಲಿತುವೇನಿಯಾದ ಪುರಾತತ್ವ ತಜ್ಞೆ ಮಾರಿಜಾ ಗಿಂಬುಟಾಸ್ ಎನ್ನುವವರು ಪ್ರತಿಪಾದಿಸಿದ್ದ ಕುರ್ಗಾನ್ ಹಯ್ಪಾತಿಸಿಸ್ (Kurgan hypothesis) ಪ್ರಕಾರ ಇಂಡೋ ಯೂರೋಪಿಯನ್ನರ ತಾಯ್ನೆಲ ಇರುವುದು ಪಾಂಟಿಕ್ ಸ್ಟೆಪ್ (Pontic Steppe) ಜಾಗದಲ್ಲಿ. ಇದು ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರಗಳ ನಡುವಿನ ಜಾಗ. ಈಗ್ಗೆ 5000 ವರ್ಷಗಳ ಹಿಂದೆ ಅಲ್ಲಿದ್ದ ಆದಿ ಇಂಡೊ ಯೂರೋಪಿಯನ್ ನುಡಿಗರು ಯೂರೋಪ್ ಮತ್ತು ದಕ್ಶಿಣ ಏಶಿಯಾ ಕಡೆಗೆ ಎರಡು ಕವಲುಗಳಾಗಿ ವಲಸೆ ಹೋದರು. ಈ ಮೂನಲಕ ಜಗತ್ತಿನ ಎಲ್ಲಾ ಕಡೆ ಇಂಡೋ ಯೂರೋಪಿಯನ್ ಕುಟುಂಬದ ನುಡಿಗಳನ್ನು ಹಬ್ಬಿಸಿದರು. ಈ ಕುರ್ಗPನ್ ಹಯ್ಪಾತಿಸೀಸ್ ನ್ನು ಇತ್ತೀಚಿನ DNA ಸಂಶೋದನೆಗಳು ಸಹ ಗಟ್ಟಿಗೊಳಿಸಿವೆ.

ಈ ಇಂಡೋ ಯೂರೋಪಿಯನ್ ನುಡಿ ಕುಟುಂಬದ ಎರಡು ಕವಲುಗಳು ಇಂಡೋ ಆರ್ಯನ್ ಕವಲು ಮತ್ತು ಇರಾನಿಯನ್ ಕವಲು. ಸಂಸ್ಕೃತ ನುಡಿಯು ಇಂಡೋ ಕುಟುಂಬ ಕವಲಿನ ನುಡಿಯಾದರೆ ಅವೆಸ್ತ ಮತ್ತು ಪರ್ಸಿಯನ್ ಇರಾನಿಯನ್ ಕವಲಿನ ನುಡಿಗಳು. ಬಹಳ ಹಳೆಯದಾದ ಋಗ್ವೇದ ಸಂಸ್ಕೃತದಲ್ಲಿ ಇದ್ದರೆ ಜೊರಾಸ್ಟ್ರಿಯನ್ನರ ಜಂಡ್ ಅವೆಸ್ತಾ ಗ್ರಂಥವು ಅವೆಸ್ತಾ ನುಡಿಯಲ್ಲಿದೆ. ಈ ಎರಡೂ ಪ್ರಾಚೀನ ಗ್ರಂಥಗಳ ನಡುವೆ ಬಹಳ ಸಾಮ್ಯತೆ ಇರುವುದು ಸಹ ಕಂಡುಬಂದಿದೆ.

ಸಂಸ್ಕೃತ ನುಡಿಯ ಮೂಲಕ ಇಂಡೋ ಯೂರೋಪಿಯನ್ ಕುಟುಂಬದ ನುಡಿ ಬಾರತಕ್ಕೆ ಬಂದದ್ದು ಇಂದಿಗೆ 3,500 ವರ್ಷಗಳ ಹಿಂದೆ. ಈ ಹೊತ್ತಿಗೆ ಭಾರತದಲ್ಲಿ ದ್ರಾವಿಡ ನುಡಿ ಬಹಳ ಕುಟುಂಬ ದೊಡ್ಡ ನುಡಿ ಕುಟುಂಬವಾಗಿ ಬಾರತದ ಜನರಲ್ಲಿ ಚಾಲ್ತಿಯಲ್ಲಿತ್ತು. ಸಿಂದೂ ಬಯಲಿನ ನಾಗರೀಕತೆಯೂ ದ್ರಾವಿಡ ನುಡಿಗಳ ಮೂಲಕವೇ ಕಟ್ಟಲ್ಪಟ್ಟಿತ್ತು.

ಜೊತೆಗೇ ಮತ್ತೊಂದು ನುಡಿ ಕುಟುಂಬದ ಕೋಲಾ ಮುಂಡಾ ನುಡಿಯೂ ಭಾರತದಲ್ಲಿ ಬೇರು ಬಿಟ್ಟು ಬೆಳೆದಿತ್ತು. ಈ ಭಾಷೆಗಳಲ್ಲಿ ಭಾರತದ ಮಣ್ಣಿನ ಸೊಗಡಿತ್ತು. ಅಷ್ಟರಲ್ಲಾಗಲೇ ದ್ರಾವಿಡ ಬಾಷೆಗಳಲ್ಲಿ ಸಾಹಿತ್ಯಗಳನ್ನೇ ರಚಿಸಲಾಗಿತ್ತು. ಆದರೆ, ತದನಂತರದ ಕಾಲದಲ್ಲಿ ಭಾರತಕ್ಕೆ ವಲಸೆ ಬಂದ ಸಂಸ್ಕೃತ ಹೇಗೆ ಭಾರತದ ಮೂಲ ಮಾತೃ ಭಾಷೆಯಾಯಿತು? ಎಂದು ಪ್ರಶ್ನೆ ಮಾಡುತ್ತಾರೆ ಸಾಮಾಜಿಕ ಹೋರಾಟಗಾರ, ಎಲ್ಲರ ಕನ್ನಡ ಚಳವಳಿಯ ಪ್ರಮುಖರಲ್ಲೊಬ್ಬರಾದ ಹರ್ಷಕುಮಾರ ಕುಗ್ವೆ.

ಪ್ರಖ್ಯಾತ ಸಂಶೋಧಕರಾದ ಷಾ ಶೆಟ್ಟರ್, ಸಂಗಮೇಶ್ ಬದರಿಮಠ್ ರಂತಹ ಸಂಶೋಧಕರೂ ಸಹ ದ್ರಾವಿಡ ಭಾಷೆಯ ಭಾರತದ ಮೂಲ ಭಾಷೆ ಎಂಬುದನ್ನು ಈಗಾಗಲೇ ತಮ್ಮ ಸಂಶೋಧನೆಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದು ಹಲವರು ಸಂಸ್ಕೃತವೇ ಭಾರತದ ಮಾತೃ ಭಾಷೆ ಎಂದು ಆಧಾರವಿಲ್ಲದೆ ವಾದಿಸುತ್ತಿರುವುದು ವಿಪರ್ಯಾಸ.

(ಮಾಹಿತಿ – ಹರ್ಷಕುಮಾರ್ ಕುಗ್ವೆ)


ಇದನ್ನೂ ಓದಿರಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....