Homeಕರ್ನಾಟಕಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

ಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

- Advertisement -
- Advertisement -

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಣ್ಣಿನ ಸೊಗಡು ಇದ್ದು, ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣಬೇಕಾದದ್ದು ನಾಗರೀಕತೆಯ ಕರ್ತವ್ಯ. ಆದರೆ, ದೇಶವನ್ನು ತಮ್ಮದೇ ಜಾತಿ- ಧರ್ಮ ಶ್ರೇಷ್ಠ ಎಂಬ ಶ್ರೇಷ್ಠತೆಯ ವ್ಯಸನ ಕಾಡುತ್ತಿರುವಂತೆಯೇ ಇದೀಗ ಭಾಷಾ ಶ್ರೇಷ್ಠತೆಯ ವ್ಯಸನವೂ ದೇಶಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ.

ಭಾರತದಲ್ಲಿ ನೂರೆಂಟು ಭಾಷೆಗಳಿವೆ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಆದರೆ, ಕನ್ನಡ ಅಭಿವೃದ್ಧಿಗೆ ಬಿಡಿಗಾಸು ನೀಡದ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿಯನ್ನು ಹೇರಿದಂತೆ ಇದೀಗ ಸಂಸ್ಕೃತವನ್ನೂ ಹೇರಲು ಮುಂದಾಗಿದೆ. ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನೂರಾರು ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಲು ಹೊರಟಿದೆ. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ, ಹಲವು ಬಲಪಂಥೀಯರು ಸಂಸ್ಕೃತ ಭಾರತದ ಆದಿಭಾಷೆ, ಮೂಲ ಭಾಷೆ, ಭಾರತದ ಮಾತೃಭಾಷೆ ಎಂದೆಲ್ಲಾ ಹೊಸ ಹೊಸ ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಂಸ್ಕೃತ ಭಾಷೆಯ ಅಬ್ಬರ ಜೋರಾಗಿಯೇ ಇದೆ.

ಈ ಹಿನ್ನೆಲೆಯಲ್ಲಿ ಭಾರತದ ಮೂಲ ಭಾಷೆ ಯಾವುದು? ಸಂಸ್ಕೃತಕ್ಕೂ ಭಾರತಕ್ಕೂ ಇರುವ ಸಂಬಂಧವೇನು? ಸಂಸ್ಕೃತ ನಿಜಕ್ಕೂ ಭಾರತದ ಮೂಲ ಭಾಷೆಯ-ದೇವ ಭಾಷೆಯಾ? ಇಷ್ಟಕ್ಕೂ ಸಂಸ್ಕೃತ ಇದೀಗ ಸತ್ತ ಭಾಷೆಯಾಗಿರುವುದು ಏಕೆ? ಎಂಬ ಅಸಲಿ ವಿಚಾರಗಳ ಕಡೆಗೆ ಗಮನ ಹರಿಸಬೇಕಾದ ತುರ್ತು ಎದುರಾಗಿದೆ.

ಸಂಸ್ಕೃತದ ಮೂಲ ಯಾವುದು?

ಜಗತ್ತಿನಲ್ಲಿ ಅತಿದೊಡ್ಡ ನುಡಿ ಕುಟುಂಬ ಇಂಡೋ ಯುರೋಪಿಯನ್ ಕುಟುಂಬ. ಲಿತುವೇನಿಯಾದ ಪುರಾತತ್ವ ತಜ್ಞೆ ಮಾರಿಜಾ ಗಿಂಬುಟಾಸ್ ಎನ್ನುವವರು ಪ್ರತಿಪಾದಿಸಿದ್ದ ಕುರ್ಗಾನ್ ಹಯ್ಪಾತಿಸಿಸ್ (Kurgan hypothesis) ಪ್ರಕಾರ ಇಂಡೋ ಯೂರೋಪಿಯನ್ನರ ತಾಯ್ನೆಲ ಇರುವುದು ಪಾಂಟಿಕ್ ಸ್ಟೆಪ್ (Pontic Steppe) ಜಾಗದಲ್ಲಿ. ಇದು ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರಗಳ ನಡುವಿನ ಜಾಗ. ಈಗ್ಗೆ 5000 ವರ್ಷಗಳ ಹಿಂದೆ ಅಲ್ಲಿದ್ದ ಆದಿ ಇಂಡೊ ಯೂರೋಪಿಯನ್ ನುಡಿಗರು ಯೂರೋಪ್ ಮತ್ತು ದಕ್ಶಿಣ ಏಶಿಯಾ ಕಡೆಗೆ ಎರಡು ಕವಲುಗಳಾಗಿ ವಲಸೆ ಹೋದರು. ಈ ಮೂನಲಕ ಜಗತ್ತಿನ ಎಲ್ಲಾ ಕಡೆ ಇಂಡೋ ಯೂರೋಪಿಯನ್ ಕುಟುಂಬದ ನುಡಿಗಳನ್ನು ಹಬ್ಬಿಸಿದರು. ಈ ಕುರ್ಗPನ್ ಹಯ್ಪಾತಿಸೀಸ್ ನ್ನು ಇತ್ತೀಚಿನ DNA ಸಂಶೋದನೆಗಳು ಸಹ ಗಟ್ಟಿಗೊಳಿಸಿವೆ.

ಈ ಇಂಡೋ ಯೂರೋಪಿಯನ್ ನುಡಿ ಕುಟುಂಬದ ಎರಡು ಕವಲುಗಳು ಇಂಡೋ ಆರ್ಯನ್ ಕವಲು ಮತ್ತು ಇರಾನಿಯನ್ ಕವಲು. ಸಂಸ್ಕೃತ ನುಡಿಯು ಇಂಡೋ ಕುಟುಂಬ ಕವಲಿನ ನುಡಿಯಾದರೆ ಅವೆಸ್ತ ಮತ್ತು ಪರ್ಸಿಯನ್ ಇರಾನಿಯನ್ ಕವಲಿನ ನುಡಿಗಳು. ಬಹಳ ಹಳೆಯದಾದ ಋಗ್ವೇದ ಸಂಸ್ಕೃತದಲ್ಲಿ ಇದ್ದರೆ ಜೊರಾಸ್ಟ್ರಿಯನ್ನರ ಜಂಡ್ ಅವೆಸ್ತಾ ಗ್ರಂಥವು ಅವೆಸ್ತಾ ನುಡಿಯಲ್ಲಿದೆ. ಈ ಎರಡೂ ಪ್ರಾಚೀನ ಗ್ರಂಥಗಳ ನಡುವೆ ಬಹಳ ಸಾಮ್ಯತೆ ಇರುವುದು ಸಹ ಕಂಡುಬಂದಿದೆ.

ಸಂಸ್ಕೃತ ನುಡಿಯ ಮೂಲಕ ಇಂಡೋ ಯೂರೋಪಿಯನ್ ಕುಟುಂಬದ ನುಡಿ ಬಾರತಕ್ಕೆ ಬಂದದ್ದು ಇಂದಿಗೆ 3,500 ವರ್ಷಗಳ ಹಿಂದೆ. ಈ ಹೊತ್ತಿಗೆ ಭಾರತದಲ್ಲಿ ದ್ರಾವಿಡ ನುಡಿ ಬಹಳ ಕುಟುಂಬ ದೊಡ್ಡ ನುಡಿ ಕುಟುಂಬವಾಗಿ ಬಾರತದ ಜನರಲ್ಲಿ ಚಾಲ್ತಿಯಲ್ಲಿತ್ತು. ಸಿಂದೂ ಬಯಲಿನ ನಾಗರೀಕತೆಯೂ ದ್ರಾವಿಡ ನುಡಿಗಳ ಮೂಲಕವೇ ಕಟ್ಟಲ್ಪಟ್ಟಿತ್ತು.

ಜೊತೆಗೇ ಮತ್ತೊಂದು ನುಡಿ ಕುಟುಂಬದ ಕೋಲಾ ಮುಂಡಾ ನುಡಿಯೂ ಭಾರತದಲ್ಲಿ ಬೇರು ಬಿಟ್ಟು ಬೆಳೆದಿತ್ತು. ಈ ಭಾಷೆಗಳಲ್ಲಿ ಭಾರತದ ಮಣ್ಣಿನ ಸೊಗಡಿತ್ತು. ಅಷ್ಟರಲ್ಲಾಗಲೇ ದ್ರಾವಿಡ ಬಾಷೆಗಳಲ್ಲಿ ಸಾಹಿತ್ಯಗಳನ್ನೇ ರಚಿಸಲಾಗಿತ್ತು. ಆದರೆ, ತದನಂತರದ ಕಾಲದಲ್ಲಿ ಭಾರತಕ್ಕೆ ವಲಸೆ ಬಂದ ಸಂಸ್ಕೃತ ಹೇಗೆ ಭಾರತದ ಮೂಲ ಮಾತೃ ಭಾಷೆಯಾಯಿತು? ಎಂದು ಪ್ರಶ್ನೆ ಮಾಡುತ್ತಾರೆ ಸಾಮಾಜಿಕ ಹೋರಾಟಗಾರ, ಎಲ್ಲರ ಕನ್ನಡ ಚಳವಳಿಯ ಪ್ರಮುಖರಲ್ಲೊಬ್ಬರಾದ ಹರ್ಷಕುಮಾರ ಕುಗ್ವೆ.

ಪ್ರಖ್ಯಾತ ಸಂಶೋಧಕರಾದ ಷಾ ಶೆಟ್ಟರ್, ಸಂಗಮೇಶ್ ಬದರಿಮಠ್ ರಂತಹ ಸಂಶೋಧಕರೂ ಸಹ ದ್ರಾವಿಡ ಭಾಷೆಯ ಭಾರತದ ಮೂಲ ಭಾಷೆ ಎಂಬುದನ್ನು ಈಗಾಗಲೇ ತಮ್ಮ ಸಂಶೋಧನೆಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದು ಹಲವರು ಸಂಸ್ಕೃತವೇ ಭಾರತದ ಮಾತೃ ಭಾಷೆ ಎಂದು ಆಧಾರವಿಲ್ಲದೆ ವಾದಿಸುತ್ತಿರುವುದು ವಿಪರ್ಯಾಸ.

(ಮಾಹಿತಿ – ಹರ್ಷಕುಮಾರ್ ಕುಗ್ವೆ)


ಇದನ್ನೂ ಓದಿರಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...