Homeಮುಖಪುಟತಾಲಿಬಾನ್‌ ಬಂಡುಕೋರ ಐಸ್‌ಕ್ರಿಮ್‌ ಸವಿದನೆ? ವೈರಲ್ ಪೋಟೋದ ನಿಜವೇನು?

ತಾಲಿಬಾನ್‌ ಬಂಡುಕೋರ ಐಸ್‌ಕ್ರಿಮ್‌ ಸವಿದನೆ? ವೈರಲ್ ಪೋಟೋದ ನಿಜವೇನು?

- Advertisement -
- Advertisement -

ತಾಲಿಬಾನ್‌ ಬಂಡುಕೋರ ಐಸ್‌ಕ್ರೀಮ್‌ ಸವಿಯುತ್ತಿರುವ ಪೊಟೋ ನೋಡಿ ಎಂದು ಅಮಾಯಕ ವ್ಯಕ್ತಿಯನ್ನು ಉಗ್ರನೆಂದು ಬಿಂಬಿಸಿ, ವಿಕೃತವಾಗಿ ಟ್ರೋಲ್ ಮಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡು ಬಂದಿದೆ.
“ಬಹಳ ಸಂತೋಷದಿಂದ ತಾಲಿಬಾನ್ ಉಗ್ರ ಐಸ್‌ಕ್ರೀಮ್‌ ಸವಿಯುತ್ತಿರುವುದನ್ನು ನೋಡಿ” ಎಂಬ ಒಕ್ಕಣೆಯೊಂದಿಗೆ ವ್ಯಕ್ತಿಯೊಬ್ಬನ ಪೋಟೊವನ್ನು ಹರಿಬಿಡಲಾಗಿದೆ. ಈ ಪೊಟೋದ ಸತ್ಯಾಸತ್ಯತೆಯನ್ನು ಫ್ಯಾಕ್ಟಿ ಡಾಟ್‌ ಇನ್ ಜಾಲತಾಣ ಪರಿಶೀಲಿಸಿದೆ.
ಸ್ಟೀವ್‌ ಮೆಕ್ರರಿ ಎಂಬ ಅಮೆರಿಕನ್ ಪೋಟೋಗ್ರಾಫರ್ 2002ರಲ್ಲಿ ಕ್ಲಿಕ್ಕಿಸಿದ ಪೊಟೋ ಇದಾಗಿದೆ. ತನ್ನ ಮಕ್ಕಳಿಗೆ ಅಫಘಾನಿನ ವ್ಯಕ್ತಿಯೊಬ್ಬ ಅಫಘಾನಿಸ್ತಾನದ ಪೋಲ್‌ಇಕೊಮ್‌ರಿ ಎಂಬ ಸ್ಥಳದಲ್ಲಿ ಐಸ್‌ಕ್ರೀಮ್ ಖರೀದಿಸುತ್ತಿರುವ ಪೊಟೋವನ್ನು ಸ್ಟೀವ್‌ ಕ್ಲಿಕ್ಕಿಸಿದ್ದರು. ಈ ಪೋಟೋಕ್ಕೂ ತಾಲಿಬಾನಿಗೂ ಯಾವುದೇ ಸಂಬಂಧವಿಲ್ಲ.
ಇದೇ ಪೋಟೋವನ್ನು ಇಮ್ಗುರ್‌ ವೆಬ್‌ಸೈಟ್‌ ನಲ್ಲಿ 2016ರಲ್ಲಿ ಪ್ರಕಟಿಸಲಾಗಿತ್ತು. ಇತರ ವೆಬ್‌ಸೈಟ್‌ಗಳು ಕೂಡ ಈ ಪೋಟೋವನ್ನು ಪ್ರಕಟಿಸಿ, ಸ್ಟೀವ್‌ ಅವರಿಗೆ ಪೋಟೋ ಕ್ರೆಡಿಟ್ ನೀಡಿವೆ. ಬಹುತೇಕರು ಪೋಟೋವನ್ನು ತಿರುಚಿದ ಒಕ್ಕಣೆಯೊಂದಿಗೆ ಹಂಚಿಕೊಂಡ ಬಳಿಕ ಫ್ಯಾಕ್ಟಿ ಡಾಟ್‌ ಇನ್ ಜಾಲತಾಣ ಸರ್ಚ್ ಮಾಡಿದ್ದು, ಸ್ಟೀವ್ ಅವರ ಅಧಿಕೃತ ಇನ್‌ಸ್ಟಾ ಖಾತೆಯಲ್ಲಿಯೂ ಪೋಟೋ ಇರುವುದನ್ನು ಪತ್ತೆ ಹಚ್ಚಿದೆ. ಜೊತೆಗೆ ಸ್ಟೀವ್‌ ಪೋಟೋ ಯಾವಾಗ ತೆಗೆದಿದ್ದು, ಎಲ್ಲಿ ತೆಗೆದದ್ದು ಎಂಬ ಕುರಿತು ವಿವರಣೆಯನ್ನೂ ನೀಡಿದ್ದಾರೆ.

ಅಪಘಾನಿಸ್ತಾನದ ರಾಜಧಾನಿ ಕಾಬೂಲ್‌ ಅನ್ನು ತಾಲಿಬಾನ್‌ ಸಂರ್ಪೂರ್ಣ ವಶಕ್ಕೆ ಪಡೆದ ಬಳಿಕ ತಾಲಿಬಾನಿಗಳು ಐಸ್‌ಕ್ರೀಮ್‌ ಸವಿಯುವಂತಹ ಹಲವು ವಿಶ್ರಾಂತಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ಐಸ್‌ಕ್ರೀಮ್‌ನೊಂದಿಗಿನ ಫೋಟೋಗಳು ಹರಿದಾಡಿದ್ದವು. ಫೋಟೋಗಳು ಹಾಗೂ ವಿಡಿಯೋಗಳನ್ನು ಆಧರಿಸಿ ಹಲವು ಸುದ್ದಿ ಜಾಲತಾಣಗಳಲ್ಲಿ ವರದಿಗಳೂ ಪ್ರಕಟವಾಗಿದ್ದವು. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ ಇಲ್ಲಿ ಶೇರ್‌ ಆಗಿರುವ ಪೋಸ್ಟ್‌ನಲ್ಲಿನ ಪೋಟೋ ಹಳೆಯದಾಗಿದೆ. ಅಫಘಾನಿಸ್ತಾನದಲ್ಲಿ ಈಗ ನಡೆಯುತ್ತಿರುವ ವಿದ್ಯಮಾನಗಳಿಗೂ ಈ ಫೋಟೋಕ್ಕೋ ಯಾವುದೇ ಸಂಬಂಧವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...