Homeಮುಖಪುಟತಾಲಿಬಾನ್‌ ಬಂಡುಕೋರ ಐಸ್‌ಕ್ರಿಮ್‌ ಸವಿದನೆ? ವೈರಲ್ ಪೋಟೋದ ನಿಜವೇನು?

ತಾಲಿಬಾನ್‌ ಬಂಡುಕೋರ ಐಸ್‌ಕ್ರಿಮ್‌ ಸವಿದನೆ? ವೈರಲ್ ಪೋಟೋದ ನಿಜವೇನು?

- Advertisement -
- Advertisement -

ತಾಲಿಬಾನ್‌ ಬಂಡುಕೋರ ಐಸ್‌ಕ್ರೀಮ್‌ ಸವಿಯುತ್ತಿರುವ ಪೊಟೋ ನೋಡಿ ಎಂದು ಅಮಾಯಕ ವ್ಯಕ್ತಿಯನ್ನು ಉಗ್ರನೆಂದು ಬಿಂಬಿಸಿ, ವಿಕೃತವಾಗಿ ಟ್ರೋಲ್ ಮಾಡುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡು ಬಂದಿದೆ.
“ಬಹಳ ಸಂತೋಷದಿಂದ ತಾಲಿಬಾನ್ ಉಗ್ರ ಐಸ್‌ಕ್ರೀಮ್‌ ಸವಿಯುತ್ತಿರುವುದನ್ನು ನೋಡಿ” ಎಂಬ ಒಕ್ಕಣೆಯೊಂದಿಗೆ ವ್ಯಕ್ತಿಯೊಬ್ಬನ ಪೋಟೊವನ್ನು ಹರಿಬಿಡಲಾಗಿದೆ. ಈ ಪೊಟೋದ ಸತ್ಯಾಸತ್ಯತೆಯನ್ನು ಫ್ಯಾಕ್ಟಿ ಡಾಟ್‌ ಇನ್ ಜಾಲತಾಣ ಪರಿಶೀಲಿಸಿದೆ.
ಸ್ಟೀವ್‌ ಮೆಕ್ರರಿ ಎಂಬ ಅಮೆರಿಕನ್ ಪೋಟೋಗ್ರಾಫರ್ 2002ರಲ್ಲಿ ಕ್ಲಿಕ್ಕಿಸಿದ ಪೊಟೋ ಇದಾಗಿದೆ. ತನ್ನ ಮಕ್ಕಳಿಗೆ ಅಫಘಾನಿನ ವ್ಯಕ್ತಿಯೊಬ್ಬ ಅಫಘಾನಿಸ್ತಾನದ ಪೋಲ್‌ಇಕೊಮ್‌ರಿ ಎಂಬ ಸ್ಥಳದಲ್ಲಿ ಐಸ್‌ಕ್ರೀಮ್ ಖರೀದಿಸುತ್ತಿರುವ ಪೊಟೋವನ್ನು ಸ್ಟೀವ್‌ ಕ್ಲಿಕ್ಕಿಸಿದ್ದರು. ಈ ಪೋಟೋಕ್ಕೂ ತಾಲಿಬಾನಿಗೂ ಯಾವುದೇ ಸಂಬಂಧವಿಲ್ಲ.
ಇದೇ ಪೋಟೋವನ್ನು ಇಮ್ಗುರ್‌ ವೆಬ್‌ಸೈಟ್‌ ನಲ್ಲಿ 2016ರಲ್ಲಿ ಪ್ರಕಟಿಸಲಾಗಿತ್ತು. ಇತರ ವೆಬ್‌ಸೈಟ್‌ಗಳು ಕೂಡ ಈ ಪೋಟೋವನ್ನು ಪ್ರಕಟಿಸಿ, ಸ್ಟೀವ್‌ ಅವರಿಗೆ ಪೋಟೋ ಕ್ರೆಡಿಟ್ ನೀಡಿವೆ. ಬಹುತೇಕರು ಪೋಟೋವನ್ನು ತಿರುಚಿದ ಒಕ್ಕಣೆಯೊಂದಿಗೆ ಹಂಚಿಕೊಂಡ ಬಳಿಕ ಫ್ಯಾಕ್ಟಿ ಡಾಟ್‌ ಇನ್ ಜಾಲತಾಣ ಸರ್ಚ್ ಮಾಡಿದ್ದು, ಸ್ಟೀವ್ ಅವರ ಅಧಿಕೃತ ಇನ್‌ಸ್ಟಾ ಖಾತೆಯಲ್ಲಿಯೂ ಪೋಟೋ ಇರುವುದನ್ನು ಪತ್ತೆ ಹಚ್ಚಿದೆ. ಜೊತೆಗೆ ಸ್ಟೀವ್‌ ಪೋಟೋ ಯಾವಾಗ ತೆಗೆದಿದ್ದು, ಎಲ್ಲಿ ತೆಗೆದದ್ದು ಎಂಬ ಕುರಿತು ವಿವರಣೆಯನ್ನೂ ನೀಡಿದ್ದಾರೆ.

ಅಪಘಾನಿಸ್ತಾನದ ರಾಜಧಾನಿ ಕಾಬೂಲ್‌ ಅನ್ನು ತಾಲಿಬಾನ್‌ ಸಂರ್ಪೂರ್ಣ ವಶಕ್ಕೆ ಪಡೆದ ಬಳಿಕ ತಾಲಿಬಾನಿಗಳು ಐಸ್‌ಕ್ರೀಮ್‌ ಸವಿಯುವಂತಹ ಹಲವು ವಿಶ್ರಾಂತಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ಐಸ್‌ಕ್ರೀಮ್‌ನೊಂದಿಗಿನ ಫೋಟೋಗಳು ಹರಿದಾಡಿದ್ದವು. ಫೋಟೋಗಳು ಹಾಗೂ ವಿಡಿಯೋಗಳನ್ನು ಆಧರಿಸಿ ಹಲವು ಸುದ್ದಿ ಜಾಲತಾಣಗಳಲ್ಲಿ ವರದಿಗಳೂ ಪ್ರಕಟವಾಗಿದ್ದವು. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ ಇಲ್ಲಿ ಶೇರ್‌ ಆಗಿರುವ ಪೋಸ್ಟ್‌ನಲ್ಲಿನ ಪೋಟೋ ಹಳೆಯದಾಗಿದೆ. ಅಫಘಾನಿಸ್ತಾನದಲ್ಲಿ ಈಗ ನಡೆಯುತ್ತಿರುವ ವಿದ್ಯಮಾನಗಳಿಗೂ ಈ ಫೋಟೋಕ್ಕೋ ಯಾವುದೇ ಸಂಬಂಧವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...