Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

- Advertisement -
- Advertisement -

ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದರು.

ವೈದ್ಯಕೀಯ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಪದವಿಯನ್ನು ಕಾಲೇಜು ರದ್ದುಗೊಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರತಿಪಾದಿಸಿದ್ದಾರೆ. ಪೂಜಾ ಹಿಂದು ಸನಾತನಿ ಬೇಟಿ ಎಂಬ  ಟ್ವಿಟರ್‌ ಬಳಕೆದಾರರು, ಬುರ್ಕಾಧಾರಿ ಹೆಣ್ಣುಮಕ್ಕಳ ಫೋಟೋವನ್ನು ಇದೇ ಒಕ್ಕಣೆಯೊಂದಿಗೆ ಹಂಚಿಕೊಂಡಿದ್ದಾರೆ. ಆಲ್ಟ್‌ ನ್ಯೂಸ್ ಫ್ಯಾಕ್ಟ್‌ ಚೆಕ್‌ ಮಾಡುವವರೆಗೆ ಈ ಫೋಟೋ 1740ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿತ್ತು. (ಟ್ವೀಟ್‌ನ ಅರ್ಕ್ವೈವ್‌ ಲಿಂಕ್‌ ಕ್ಲಿಕ್‌ ಮಾಡಿ)

ಸಂಭ್ರಮಾಚರಣೆಯ ಸುದ್ದಿಯನ್ನು ‘ನ್ಯೂಸ್ 18’ ಮಾಧ್ಯಮವು ವಿಡಿಯೊ ಬಿತ್ತರಿಸಿದ್ದು, ವಿದ್ಯಾರ್ಥಿಗಳ ಪದವಿಯನ್ನು ರದ್ದು ಮಾಡಿರುವ ಯಾವುದೇ ಮಾಹಿತಿಯನ್ನು ನ್ಯೂಸ್‌ 18 ಉಲ್ಲೇಖಿಸಿಲ್ಲ. ಕಾರ್ಯಕ್ರಮದ ಸಮಯದಲ್ಲಿ ಕಂಡುಬರುವ ಕೆಲವು ಸುದ್ದಿ ಟಿಕ್ಕರ್‌ಗಳೆಂದರೆ – “ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ಹುಡುಗಿಯರು”, “ಭಾರತದ ಸೋಲನ್ನು ಆಚರಿಸುತ್ತಿರುವ ಬಾಲಕಿಯರ ಹಾಸ್ಟೆಲ್” ಮತ್ತು “ಪಾಕಿಸ್ತಾನ ಪರ ಘೋಷಣೆಗಳು” ಎಂಬುವಾಗಿವೆ. ಇದಲ್ಲದೆ, “ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದವರ ಮೇಲೆ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ” ಎಂದು ನಿರೂಪಕ ಹೇಳುತ್ತಾರೆ.

ಆದರೆ ಪದವಿ ರದ್ದು ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆಪ್‌ನಲ್ಲಿ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ಈ ಕುರಿತು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, “ಈ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ಸುದ್ದಿ ಲಭ್ಯವಾಗಿಲ್ಲ” ಎಂದಿದೆ.

“ಕೋರ್ಸ್ ಮುಗಿದ ನಂತರ ಪದವಿಗಳನ್ನು ನೀಡಲಾಗುತ್ತದೆ ಎಂಬುದನ್ನು ಗಮನಿಸಬೇಕು. ಪಾಕಿಸ್ತಾನದ ಗೆಲುವನ್ನು ವಿದ್ಯಾರ್ಥಿಗಳು ಸಂಭ್ರಮಿಸಿದರು ಎಂದು ಇಲ್ಲಿನ ಪ್ರತಿಪಾದನೆ ಹೇಳುತ್ತದೆ. ಅವರು ಇನ್ನೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪದವಿಯನ್ನು ರದ್ದು ಮಾಡಲು ಹೇಗೆ ಸಾಧ್ಯ?” ಎಂದು ಆಲ್ಟ್‌ ನ್ಯೂಸ್ ಪ್ರಶ್ನಿಸಿದೆ.

ಟಿ-20 ಪಂದ್ಯದ ನಂತರ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಶ್ರೀನಗರದ ಎರಡು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ. ಜತೆಗೆ ಕಾಲೇಜು ಆಡಳಿತದ ಮೇಲೂ ಈ ಕಾನೂನಿನಡಿ ಆರೋಪ ಹೊರಿಸಲಾಗಿತ್ತು.

“ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಶ್ರೀನಗರದ ಕರ್ಣನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೇರ್-ಎ-ಕಾಶ್ಮೀರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SKIMS) ಸೌರಾದ ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾಲೇಜು ಆಡಳಿತ ಮತ್ತು ಹಾಸ್ಟೆಲ್ ವಾರ್ಡನ್‌ಗಳನ್ನು ಪ್ರಕರಣದಲ್ಲಿ ಒಳಗೊಳ್ಳಲಾಗಿದೆ” ಎಂದು ಜನ್‌‌ಸತ್ತಾ ವರದಿ ಹೇಳುತ್ತದೆ.

ವೈರಲ್‌ ಫೋಟೋದ ಅಸಲಿ ಕಥೆ ಏನು?

ಬುರ್ಕಾ ಧರಿಸಿರುವ ಫೋಟೋದ ಅಸಲಿಯತ್ತನ್ನು ಆಲ್ಟ್‌ ನ್ಯೂಸ್ ಪತ್ತೆ ಹಚ್ಚಿದೆ. “ರಿವರ್ಸ್ ಇಮೇಜ್ ಹುಡುಕಾಟವನ್ನು ಆಲ್ಟ್‌ ನ್ಯೂಸ್‌ ನಡೆಸಿತು. 2017ರ ಬ್ಲಾಗ್ ಪೋಸ್ಟ್‌ನಲ್ಲಿ ಮೂಲ ಫೋಟೋವನ್ನು ಕಂಡೆವು. India New England News  (ಇಂಡಿಯಾ ನ್ಯೂ ಇಂಗ್ಲೆಂಡ್ ನ್ಯೂಸ್) ಹೆಸರಿನ ವೆಬ್‌ಸೈಟ್‌ನಲ್ಲಿ ನವೆಂಬರ್ 12, 2017ರಂದು ಈ ಫೋಟೋ ಪ್ರಕಟವಾಗಿದೆ. ಮತ್ತೊಂದು ಪೋರ್ಟಲ್‌ನಲ್ಲಿ 2017ರ ನವೆಂಬರ್‌‌ನಲ್ಲಿ ಇದೇ ಫೋಟೋವನ್ನು ಪ್ರಕಟಿಸಿದ್ದು, ಉತ್ತರಪ್ರದೇಶದ ವಿದ್ಯಾರ್ಥಿನಿಯರೆಂದು ಕ್ಯಾಪ್ಶನ್‌ ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, “ಟಿ-20 ಪಂದ್ಯದಲ್ಲಿ ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿ ವೈದ್ಯಕೀಯ ಕಾಲೇಜಿನ 100 ವಿದ್ಯಾರ್ಥಿನಿಯರ ಪದವಿಗಳನ್ನು ರದ್ದುಗೊಳಿಸಲಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಪ್ಪಾಗಿ ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...