Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

- Advertisement -
- Advertisement -

ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದರು.

ವೈದ್ಯಕೀಯ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಪದವಿಯನ್ನು ಕಾಲೇಜು ರದ್ದುಗೊಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರತಿಪಾದಿಸಿದ್ದಾರೆ. ಪೂಜಾ ಹಿಂದು ಸನಾತನಿ ಬೇಟಿ ಎಂಬ  ಟ್ವಿಟರ್‌ ಬಳಕೆದಾರರು, ಬುರ್ಕಾಧಾರಿ ಹೆಣ್ಣುಮಕ್ಕಳ ಫೋಟೋವನ್ನು ಇದೇ ಒಕ್ಕಣೆಯೊಂದಿಗೆ ಹಂಚಿಕೊಂಡಿದ್ದಾರೆ. ಆಲ್ಟ್‌ ನ್ಯೂಸ್ ಫ್ಯಾಕ್ಟ್‌ ಚೆಕ್‌ ಮಾಡುವವರೆಗೆ ಈ ಫೋಟೋ 1740ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿತ್ತು. (ಟ್ವೀಟ್‌ನ ಅರ್ಕ್ವೈವ್‌ ಲಿಂಕ್‌ ಕ್ಲಿಕ್‌ ಮಾಡಿ)

ಸಂಭ್ರಮಾಚರಣೆಯ ಸುದ್ದಿಯನ್ನು ‘ನ್ಯೂಸ್ 18’ ಮಾಧ್ಯಮವು ವಿಡಿಯೊ ಬಿತ್ತರಿಸಿದ್ದು, ವಿದ್ಯಾರ್ಥಿಗಳ ಪದವಿಯನ್ನು ರದ್ದು ಮಾಡಿರುವ ಯಾವುದೇ ಮಾಹಿತಿಯನ್ನು ನ್ಯೂಸ್‌ 18 ಉಲ್ಲೇಖಿಸಿಲ್ಲ. ಕಾರ್ಯಕ್ರಮದ ಸಮಯದಲ್ಲಿ ಕಂಡುಬರುವ ಕೆಲವು ಸುದ್ದಿ ಟಿಕ್ಕರ್‌ಗಳೆಂದರೆ – “ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ಹುಡುಗಿಯರು”, “ಭಾರತದ ಸೋಲನ್ನು ಆಚರಿಸುತ್ತಿರುವ ಬಾಲಕಿಯರ ಹಾಸ್ಟೆಲ್” ಮತ್ತು “ಪಾಕಿಸ್ತಾನ ಪರ ಘೋಷಣೆಗಳು” ಎಂಬುವಾಗಿವೆ. ಇದಲ್ಲದೆ, “ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದವರ ಮೇಲೆ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ” ಎಂದು ನಿರೂಪಕ ಹೇಳುತ್ತಾರೆ.

ಆದರೆ ಪದವಿ ರದ್ದು ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆಪ್‌ನಲ್ಲಿ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ಈ ಕುರಿತು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, “ಈ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ಸುದ್ದಿ ಲಭ್ಯವಾಗಿಲ್ಲ” ಎಂದಿದೆ.

“ಕೋರ್ಸ್ ಮುಗಿದ ನಂತರ ಪದವಿಗಳನ್ನು ನೀಡಲಾಗುತ್ತದೆ ಎಂಬುದನ್ನು ಗಮನಿಸಬೇಕು. ಪಾಕಿಸ್ತಾನದ ಗೆಲುವನ್ನು ವಿದ್ಯಾರ್ಥಿಗಳು ಸಂಭ್ರಮಿಸಿದರು ಎಂದು ಇಲ್ಲಿನ ಪ್ರತಿಪಾದನೆ ಹೇಳುತ್ತದೆ. ಅವರು ಇನ್ನೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪದವಿಯನ್ನು ರದ್ದು ಮಾಡಲು ಹೇಗೆ ಸಾಧ್ಯ?” ಎಂದು ಆಲ್ಟ್‌ ನ್ಯೂಸ್ ಪ್ರಶ್ನಿಸಿದೆ.

ಟಿ-20 ಪಂದ್ಯದ ನಂತರ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಶ್ರೀನಗರದ ಎರಡು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ. ಜತೆಗೆ ಕಾಲೇಜು ಆಡಳಿತದ ಮೇಲೂ ಈ ಕಾನೂನಿನಡಿ ಆರೋಪ ಹೊರಿಸಲಾಗಿತ್ತು.

“ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಶ್ರೀನಗರದ ಕರ್ಣನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೇರ್-ಎ-ಕಾಶ್ಮೀರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SKIMS) ಸೌರಾದ ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾಲೇಜು ಆಡಳಿತ ಮತ್ತು ಹಾಸ್ಟೆಲ್ ವಾರ್ಡನ್‌ಗಳನ್ನು ಪ್ರಕರಣದಲ್ಲಿ ಒಳಗೊಳ್ಳಲಾಗಿದೆ” ಎಂದು ಜನ್‌‌ಸತ್ತಾ ವರದಿ ಹೇಳುತ್ತದೆ.

ವೈರಲ್‌ ಫೋಟೋದ ಅಸಲಿ ಕಥೆ ಏನು?

ಬುರ್ಕಾ ಧರಿಸಿರುವ ಫೋಟೋದ ಅಸಲಿಯತ್ತನ್ನು ಆಲ್ಟ್‌ ನ್ಯೂಸ್ ಪತ್ತೆ ಹಚ್ಚಿದೆ. “ರಿವರ್ಸ್ ಇಮೇಜ್ ಹುಡುಕಾಟವನ್ನು ಆಲ್ಟ್‌ ನ್ಯೂಸ್‌ ನಡೆಸಿತು. 2017ರ ಬ್ಲಾಗ್ ಪೋಸ್ಟ್‌ನಲ್ಲಿ ಮೂಲ ಫೋಟೋವನ್ನು ಕಂಡೆವು. India New England News  (ಇಂಡಿಯಾ ನ್ಯೂ ಇಂಗ್ಲೆಂಡ್ ನ್ಯೂಸ್) ಹೆಸರಿನ ವೆಬ್‌ಸೈಟ್‌ನಲ್ಲಿ ನವೆಂಬರ್ 12, 2017ರಂದು ಈ ಫೋಟೋ ಪ್ರಕಟವಾಗಿದೆ. ಮತ್ತೊಂದು ಪೋರ್ಟಲ್‌ನಲ್ಲಿ 2017ರ ನವೆಂಬರ್‌‌ನಲ್ಲಿ ಇದೇ ಫೋಟೋವನ್ನು ಪ್ರಕಟಿಸಿದ್ದು, ಉತ್ತರಪ್ರದೇಶದ ವಿದ್ಯಾರ್ಥಿನಿಯರೆಂದು ಕ್ಯಾಪ್ಶನ್‌ ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, “ಟಿ-20 ಪಂದ್ಯದಲ್ಲಿ ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿ ವೈದ್ಯಕೀಯ ಕಾಲೇಜಿನ 100 ವಿದ್ಯಾರ್ಥಿನಿಯರ ಪದವಿಗಳನ್ನು ರದ್ದುಗೊಳಿಸಲಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಪ್ಪಾಗಿ ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...