Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

- Advertisement -
- Advertisement -

ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದರು.

ವೈದ್ಯಕೀಯ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಪದವಿಯನ್ನು ಕಾಲೇಜು ರದ್ದುಗೊಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರತಿಪಾದಿಸಿದ್ದಾರೆ. ಪೂಜಾ ಹಿಂದು ಸನಾತನಿ ಬೇಟಿ ಎಂಬ  ಟ್ವಿಟರ್‌ ಬಳಕೆದಾರರು, ಬುರ್ಕಾಧಾರಿ ಹೆಣ್ಣುಮಕ್ಕಳ ಫೋಟೋವನ್ನು ಇದೇ ಒಕ್ಕಣೆಯೊಂದಿಗೆ ಹಂಚಿಕೊಂಡಿದ್ದಾರೆ. ಆಲ್ಟ್‌ ನ್ಯೂಸ್ ಫ್ಯಾಕ್ಟ್‌ ಚೆಕ್‌ ಮಾಡುವವರೆಗೆ ಈ ಫೋಟೋ 1740ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿತ್ತು. (ಟ್ವೀಟ್‌ನ ಅರ್ಕ್ವೈವ್‌ ಲಿಂಕ್‌ ಕ್ಲಿಕ್‌ ಮಾಡಿ)

ಸಂಭ್ರಮಾಚರಣೆಯ ಸುದ್ದಿಯನ್ನು ‘ನ್ಯೂಸ್ 18’ ಮಾಧ್ಯಮವು ವಿಡಿಯೊ ಬಿತ್ತರಿಸಿದ್ದು, ವಿದ್ಯಾರ್ಥಿಗಳ ಪದವಿಯನ್ನು ರದ್ದು ಮಾಡಿರುವ ಯಾವುದೇ ಮಾಹಿತಿಯನ್ನು ನ್ಯೂಸ್‌ 18 ಉಲ್ಲೇಖಿಸಿಲ್ಲ. ಕಾರ್ಯಕ್ರಮದ ಸಮಯದಲ್ಲಿ ಕಂಡುಬರುವ ಕೆಲವು ಸುದ್ದಿ ಟಿಕ್ಕರ್‌ಗಳೆಂದರೆ – “ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ಹುಡುಗಿಯರು”, “ಭಾರತದ ಸೋಲನ್ನು ಆಚರಿಸುತ್ತಿರುವ ಬಾಲಕಿಯರ ಹಾಸ್ಟೆಲ್” ಮತ್ತು “ಪಾಕಿಸ್ತಾನ ಪರ ಘೋಷಣೆಗಳು” ಎಂಬುವಾಗಿವೆ. ಇದಲ್ಲದೆ, “ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದವರ ಮೇಲೆ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ” ಎಂದು ನಿರೂಪಕ ಹೇಳುತ್ತಾರೆ.

ಆದರೆ ಪದವಿ ರದ್ದು ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆಪ್‌ನಲ್ಲಿ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ಈ ಕುರಿತು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, “ಈ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ಸುದ್ದಿ ಲಭ್ಯವಾಗಿಲ್ಲ” ಎಂದಿದೆ.

“ಕೋರ್ಸ್ ಮುಗಿದ ನಂತರ ಪದವಿಗಳನ್ನು ನೀಡಲಾಗುತ್ತದೆ ಎಂಬುದನ್ನು ಗಮನಿಸಬೇಕು. ಪಾಕಿಸ್ತಾನದ ಗೆಲುವನ್ನು ವಿದ್ಯಾರ್ಥಿಗಳು ಸಂಭ್ರಮಿಸಿದರು ಎಂದು ಇಲ್ಲಿನ ಪ್ರತಿಪಾದನೆ ಹೇಳುತ್ತದೆ. ಅವರು ಇನ್ನೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪದವಿಯನ್ನು ರದ್ದು ಮಾಡಲು ಹೇಗೆ ಸಾಧ್ಯ?” ಎಂದು ಆಲ್ಟ್‌ ನ್ಯೂಸ್ ಪ್ರಶ್ನಿಸಿದೆ.

ಟಿ-20 ಪಂದ್ಯದ ನಂತರ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಶ್ರೀನಗರದ ಎರಡು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ. ಜತೆಗೆ ಕಾಲೇಜು ಆಡಳಿತದ ಮೇಲೂ ಈ ಕಾನೂನಿನಡಿ ಆರೋಪ ಹೊರಿಸಲಾಗಿತ್ತು.

“ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಶ್ರೀನಗರದ ಕರ್ಣನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೇರ್-ಎ-ಕಾಶ್ಮೀರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SKIMS) ಸೌರಾದ ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾಲೇಜು ಆಡಳಿತ ಮತ್ತು ಹಾಸ್ಟೆಲ್ ವಾರ್ಡನ್‌ಗಳನ್ನು ಪ್ರಕರಣದಲ್ಲಿ ಒಳಗೊಳ್ಳಲಾಗಿದೆ” ಎಂದು ಜನ್‌‌ಸತ್ತಾ ವರದಿ ಹೇಳುತ್ತದೆ.

ವೈರಲ್‌ ಫೋಟೋದ ಅಸಲಿ ಕಥೆ ಏನು?

ಬುರ್ಕಾ ಧರಿಸಿರುವ ಫೋಟೋದ ಅಸಲಿಯತ್ತನ್ನು ಆಲ್ಟ್‌ ನ್ಯೂಸ್ ಪತ್ತೆ ಹಚ್ಚಿದೆ. “ರಿವರ್ಸ್ ಇಮೇಜ್ ಹುಡುಕಾಟವನ್ನು ಆಲ್ಟ್‌ ನ್ಯೂಸ್‌ ನಡೆಸಿತು. 2017ರ ಬ್ಲಾಗ್ ಪೋಸ್ಟ್‌ನಲ್ಲಿ ಮೂಲ ಫೋಟೋವನ್ನು ಕಂಡೆವು. India New England News  (ಇಂಡಿಯಾ ನ್ಯೂ ಇಂಗ್ಲೆಂಡ್ ನ್ಯೂಸ್) ಹೆಸರಿನ ವೆಬ್‌ಸೈಟ್‌ನಲ್ಲಿ ನವೆಂಬರ್ 12, 2017ರಂದು ಈ ಫೋಟೋ ಪ್ರಕಟವಾಗಿದೆ. ಮತ್ತೊಂದು ಪೋರ್ಟಲ್‌ನಲ್ಲಿ 2017ರ ನವೆಂಬರ್‌‌ನಲ್ಲಿ ಇದೇ ಫೋಟೋವನ್ನು ಪ್ರಕಟಿಸಿದ್ದು, ಉತ್ತರಪ್ರದೇಶದ ವಿದ್ಯಾರ್ಥಿನಿಯರೆಂದು ಕ್ಯಾಪ್ಶನ್‌ ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, “ಟಿ-20 ಪಂದ್ಯದಲ್ಲಿ ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿ ವೈದ್ಯಕೀಯ ಕಾಲೇಜಿನ 100 ವಿದ್ಯಾರ್ಥಿನಿಯರ ಪದವಿಗಳನ್ನು ರದ್ದುಗೊಳಿಸಲಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಪ್ಪಾಗಿ ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...