Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

- Advertisement -
- Advertisement -

ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದರು.

ವೈದ್ಯಕೀಯ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಪದವಿಯನ್ನು ಕಾಲೇಜು ರದ್ದುಗೊಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರತಿಪಾದಿಸಿದ್ದಾರೆ. ಪೂಜಾ ಹಿಂದು ಸನಾತನಿ ಬೇಟಿ ಎಂಬ  ಟ್ವಿಟರ್‌ ಬಳಕೆದಾರರು, ಬುರ್ಕಾಧಾರಿ ಹೆಣ್ಣುಮಕ್ಕಳ ಫೋಟೋವನ್ನು ಇದೇ ಒಕ್ಕಣೆಯೊಂದಿಗೆ ಹಂಚಿಕೊಂಡಿದ್ದಾರೆ. ಆಲ್ಟ್‌ ನ್ಯೂಸ್ ಫ್ಯಾಕ್ಟ್‌ ಚೆಕ್‌ ಮಾಡುವವರೆಗೆ ಈ ಫೋಟೋ 1740ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿತ್ತು. (ಟ್ವೀಟ್‌ನ ಅರ್ಕ್ವೈವ್‌ ಲಿಂಕ್‌ ಕ್ಲಿಕ್‌ ಮಾಡಿ)

ಸಂಭ್ರಮಾಚರಣೆಯ ಸುದ್ದಿಯನ್ನು ‘ನ್ಯೂಸ್ 18’ ಮಾಧ್ಯಮವು ವಿಡಿಯೊ ಬಿತ್ತರಿಸಿದ್ದು, ವಿದ್ಯಾರ್ಥಿಗಳ ಪದವಿಯನ್ನು ರದ್ದು ಮಾಡಿರುವ ಯಾವುದೇ ಮಾಹಿತಿಯನ್ನು ನ್ಯೂಸ್‌ 18 ಉಲ್ಲೇಖಿಸಿಲ್ಲ. ಕಾರ್ಯಕ್ರಮದ ಸಮಯದಲ್ಲಿ ಕಂಡುಬರುವ ಕೆಲವು ಸುದ್ದಿ ಟಿಕ್ಕರ್‌ಗಳೆಂದರೆ – “ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ಹುಡುಗಿಯರು”, “ಭಾರತದ ಸೋಲನ್ನು ಆಚರಿಸುತ್ತಿರುವ ಬಾಲಕಿಯರ ಹಾಸ್ಟೆಲ್” ಮತ್ತು “ಪಾಕಿಸ್ತಾನ ಪರ ಘೋಷಣೆಗಳು” ಎಂಬುವಾಗಿವೆ. ಇದಲ್ಲದೆ, “ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದವರ ಮೇಲೆ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ” ಎಂದು ನಿರೂಪಕ ಹೇಳುತ್ತಾರೆ.

ಆದರೆ ಪದವಿ ರದ್ದು ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆಪ್‌ನಲ್ಲಿ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ಈ ಕುರಿತು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, “ಈ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ಸುದ್ದಿ ಲಭ್ಯವಾಗಿಲ್ಲ” ಎಂದಿದೆ.

“ಕೋರ್ಸ್ ಮುಗಿದ ನಂತರ ಪದವಿಗಳನ್ನು ನೀಡಲಾಗುತ್ತದೆ ಎಂಬುದನ್ನು ಗಮನಿಸಬೇಕು. ಪಾಕಿಸ್ತಾನದ ಗೆಲುವನ್ನು ವಿದ್ಯಾರ್ಥಿಗಳು ಸಂಭ್ರಮಿಸಿದರು ಎಂದು ಇಲ್ಲಿನ ಪ್ರತಿಪಾದನೆ ಹೇಳುತ್ತದೆ. ಅವರು ಇನ್ನೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪದವಿಯನ್ನು ರದ್ದು ಮಾಡಲು ಹೇಗೆ ಸಾಧ್ಯ?” ಎಂದು ಆಲ್ಟ್‌ ನ್ಯೂಸ್ ಪ್ರಶ್ನಿಸಿದೆ.

ಟಿ-20 ಪಂದ್ಯದ ನಂತರ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಶ್ರೀನಗರದ ಎರಡು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ. ಜತೆಗೆ ಕಾಲೇಜು ಆಡಳಿತದ ಮೇಲೂ ಈ ಕಾನೂನಿನಡಿ ಆರೋಪ ಹೊರಿಸಲಾಗಿತ್ತು.

“ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಶ್ರೀನಗರದ ಕರ್ಣನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೇರ್-ಎ-ಕಾಶ್ಮೀರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SKIMS) ಸೌರಾದ ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾಲೇಜು ಆಡಳಿತ ಮತ್ತು ಹಾಸ್ಟೆಲ್ ವಾರ್ಡನ್‌ಗಳನ್ನು ಪ್ರಕರಣದಲ್ಲಿ ಒಳಗೊಳ್ಳಲಾಗಿದೆ” ಎಂದು ಜನ್‌‌ಸತ್ತಾ ವರದಿ ಹೇಳುತ್ತದೆ.

ವೈರಲ್‌ ಫೋಟೋದ ಅಸಲಿ ಕಥೆ ಏನು?

ಬುರ್ಕಾ ಧರಿಸಿರುವ ಫೋಟೋದ ಅಸಲಿಯತ್ತನ್ನು ಆಲ್ಟ್‌ ನ್ಯೂಸ್ ಪತ್ತೆ ಹಚ್ಚಿದೆ. “ರಿವರ್ಸ್ ಇಮೇಜ್ ಹುಡುಕಾಟವನ್ನು ಆಲ್ಟ್‌ ನ್ಯೂಸ್‌ ನಡೆಸಿತು. 2017ರ ಬ್ಲಾಗ್ ಪೋಸ್ಟ್‌ನಲ್ಲಿ ಮೂಲ ಫೋಟೋವನ್ನು ಕಂಡೆವು. India New England News  (ಇಂಡಿಯಾ ನ್ಯೂ ಇಂಗ್ಲೆಂಡ್ ನ್ಯೂಸ್) ಹೆಸರಿನ ವೆಬ್‌ಸೈಟ್‌ನಲ್ಲಿ ನವೆಂಬರ್ 12, 2017ರಂದು ಈ ಫೋಟೋ ಪ್ರಕಟವಾಗಿದೆ. ಮತ್ತೊಂದು ಪೋರ್ಟಲ್‌ನಲ್ಲಿ 2017ರ ನವೆಂಬರ್‌‌ನಲ್ಲಿ ಇದೇ ಫೋಟೋವನ್ನು ಪ್ರಕಟಿಸಿದ್ದು, ಉತ್ತರಪ್ರದೇಶದ ವಿದ್ಯಾರ್ಥಿನಿಯರೆಂದು ಕ್ಯಾಪ್ಶನ್‌ ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, “ಟಿ-20 ಪಂದ್ಯದಲ್ಲಿ ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿ ವೈದ್ಯಕೀಯ ಕಾಲೇಜಿನ 100 ವಿದ್ಯಾರ್ಥಿನಿಯರ ಪದವಿಗಳನ್ನು ರದ್ದುಗೊಳಿಸಲಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಪ್ಪಾಗಿ ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...