Homeಅಂಕಣಗಳುಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

- Advertisement -
- Advertisement -

ಬೆಂಗಳೂರಿನ ಟಿವಿ ಚಾನೆಲ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಬಂದ ಕಾರಣಕ್ಕೆ ಹಲವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆಗ ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ ಎಂದು ನಾವೂ ಮನವಿ ಮಾಡಿಕೊಂಡಿದ್ದೆವು. ಏಕೆಂದರೆ ಅದಕ್ಕೆ ಮುಂಚೆ ಕೊರೊನಾ ವೈರಸ್‍ಅನ್ನು ಅಮೆರಿಕಾದವರು ಚೀನೀ ವೈರಸ್ ಎಂದು ಕರೆದಂತೆ, ಇಲ್ಲಿನ ಮಾಧ್ಯಮಗಳು ತಬ್ಲಿಘಿ ವೈರಸ್ ಎಂದು ಕರೆಯಲಾರಂಭಿಸಿದ್ದರು. ವೈರಸ್‍ಗೂ ಇಲ್ಲದ ಕೊಳಕು ಮನಸ್ಥಿತಿಯನ್ನು ಟಿವಿ ಚಾನೆಲ್‍ಗಳು ತೋರಿದೆವೆಂದು, ಅದೇ ತಪ್ಪನ್ನು ಎಲ್ಲರೂ ಮಾಡಬಾರದೆಂಬುದು ನಮ್ಮ ಕಾಳಜಿಯಾಗಿತ್ತು. ಮೀಡಿಯಾಗಳನ್ನು ಟ್ರೋಲ್ ಮಾಡಲು ಹೋಗಿ, ವೈರಸ್‍ಅನ್ನು ಯಾವುದಾದರೂ ಸಮುದಾಯಕ್ಕೆ ತಳಕು ಹಾಕುವ ಮನೋಭಾವಕ್ಕೆ ಪುಷ್ಟಿ ಕೊಡುವ ಕೆಲಸವನ್ನು ಯಾರೂ ಮಾಡಬಾರದೆಂಬುದು ಅದರ ಹಿಂದಿನ ಉದ್ದೇಶವಾಗಿತ್ತು.

ಆದರೆ ಮೀಡಿಯಾಗೆ ಹತ್ತಿದ್ದ ವೈರಸ್ ಅಷ್ಟು ಬೇಗ ಇಳಿಯಲಿಲ್ಲ. ಅವರು ಬಿಹಾರದ ಕಾರ್ಮಿಕರೊಬ್ಬರಿಗೆ ಸೋಂಕು ಬಂದಿತೆಂಬ ಸುದ್ದಿಯನ್ನು ಹಿಡಿದು ‘ಬಿಹಾರಿ ಬಾಂಬು’ ಎಂದು ಕರೆದರು. ಹಾಗೆಯೇ ಮುಂದುವರೆದು 11ನೇ ಕ್ರಾಸ್ ವೈರಸ್ ಇತ್ಯಾದಿ ಇತ್ಯಾದಿಗಳನ್ನು ಸೃಷ್ಟಿಸುತ್ತಾ, ಇತ್ತೀಚೆಗೆ ಗರ್ಭಿಣಿ ಬಾಂಬ್ ಎಂತಲೂ ಕರೆದರು. ಮುಸ್ಲಿಮರನ್ನು ಗುರಿ ಮಾಡುವ ಅವರ ದುರುದ್ದೇಶದ ಈಡೇರಿಕೆಗಾಗಿ ಕೊರೊನಾ ಸೋಂಕಿನ (ಕ್ರಿಮಿನಲೈಸೇಷನ್) ಅಪರಾಧೀಕರಣವನ್ನು ವ್ಯವಸ್ಥಿತವಾಗಿ ಮಾಡಿದರು. ಈ ಕೆಲಸದಲ್ಲಿ ಅತ್ಯುಗ್ರವಾಗಿ ತೊಡಗಿಕೊಂಡಿದ್ದ ಇನ್ನೊಂದು ಟಿವಿ ಚಾನೆಲ್ ಝೀ ಸಂಸ್ಥೆಗೂ ಕೊರೊನಾ ಬಾಧಿಸಿದೆ. ಕೊರೊನಾ ಸೋಂಕಿತರೆಲ್ಲರೂ ಇಲ್ಲಿಯವರೆಗೂ ಜಿಹಾದಿಗಳಾಗಿದ್ದರೆ, ಈಗ ಇದ್ದಕ್ಕಿದ್ದಂತೆ ಅವರುಗಳು ವಾರಿಯರ್ಸ್‍ಗಳಾಗಿಬಿಟ್ಟಿದ್ದಾರೆ.

ಇದೇ ಹೊತ್ತಿನಲ್ಲಿ ಕರ್ನಾಟಕದ ಒಂದು ಮನುಷ್ಯ ವಿರೋಧಿ ಟಿವಿ ಚಾನೆಲ್ ಮುಸ್ಲಿಮರ ವಿರುದ್ಧ ಇನ್ನೊಂದು ಫೇಕ್‍ನ್ಯೂಸ್ ಕುರಿತು ಚರ್ಚಿಸಲು ಶುರುಮಾಡಿದೆ. ದಾವಣಗೆರೆ ಜಿಲ್ಲೆಯಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂ ಬಟ್ಟೆ ವ್ಯಾಪಾರಿಗಳಿಂದ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಹೆಣ್ಣುಮಕ್ಕಳನ್ನು ಕೆಲವು ಮುಸ್ಲಿಮರು ಬಲವಂತಪಡಿಸಿದ್ದಾರೆಂಬುದು ಅವರು ಚರ್ಚಿಸುತ್ತಿರುವ ಸುದ್ದಿ. ಈ ಸುದ್ದಿ ಇಲ್ಲಿ ಪ್ರಸಾರವಾಗುವ ಮುಂಚೆಯೇ ದಾವಣಗೆರೆಯಲ್ಲಿ ಯಾವ ಧಾರ್ಮಿಕ ಮುಖಂಡರು ಈ ರೀತಿ ಕರೆ ಕೊಟ್ಟಿದ್ದಾರೆಂದು ಹೇಳಲಾಗಿತ್ತೋ ಅವರು ಪತ್ರಿಕಾಗೋಷ್ಠಿಯನ್ನೂ ಮಾಡಿದ್ದರು.

ಈ ಸಾರಿಯ ರಂಜಾನ್‍ನ ಸಂದರ್ಭದಲ್ಲಿ ಯಾರೂ ದುಂದುವೆಚ್ಚ ಮಾಡಬಾರದು, ಬದಲಿಗೆ ಹಾಗೇನಾದರೂ ಖರ್ಚು ಮಾಡುವುದಿದ್ದಲ್ಲಿ ಅದನ್ನು ಲಾಕ್‍ಡೌನ್‍ನಿಂದ ಸಂತ್ರಸ್ತರಾದ ಬಡವರಿಗೆ ಕೊಡಬೇಕೆಂದು ರಂಜಾನ್ ಶುರುವಾಗುವ ಮುಂಚೆಯೇ ಆ ಸಮುದಾಯದೊಳಗೆ ಚಾಲ್ತಿಯಲ್ಲಿದ್ದ ಸಂದೇಶ. ಅದನ್ನೇ ಅವರು ಅಲ್ಲಿಯೂ ನೀಡಿದ್ದರು. ರಂಜಾನ್ ಸಂದರ್ಭದಲ್ಲಿ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಜಕಾತ್‍ಅನ್ನು ದಾನ ಮಾಡುವುದು ಕಡ್ಡಾಯವಾಗಿದ್ದು ಈ ಸಾರಿ ಅದನ್ನು ಹೆಚ್ಚಿಸುವ ಧರ್ಮದ ಕಾರ್ಯ ಅದಾಗಿತ್ತು. ಇದನ್ನು ಅತಿರೇಕಕ್ಕೆ ಒಯ್ದ ಕೆಲವು ಮುಸ್ಲಿಮರು ಕೆಲವೆಡೆ ಅಂಗಡಿಗಳಿಗೆ ಹೋಗಿದ್ದ ಮುಸ್ಲಿಂ ಹೆಣ್ಣುಮಕ್ಕಳನ್ನು ಬಲವಂತದಿಂದ ತಡೆದದ್ದು ಸುದ್ದಿಯಾಗಿತ್ತಲ್ಲದೇ, ಯಥಾಪ್ರಕಾರ ವಿಡಿಯೋಗಳೂ ಚಾಲನೆಯಲ್ಲಿದ್ದವು. ಇನ್ನೊಬ್ಬರ ಇಷ್ಟಾನಿಷ್ಟಗಳನ್ನು ಸರಿಯಾದ ಕಾರಣಗಳಿಗಾಗಿಯೇ ಬದಲಿಸಬಯಸುವವರೂ ಯಾರನ್ನೂ ಬಲವಂತ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ; ಅದು ಯಾರನ್ನೋ ತಡೆಯುವ ಮಟ್ಟಕ್ಕೆ ಹೋದರೆ ಅದು ಶಿಕ್ಷಾರ್ಹವೂ ಆಗಬೇಕು.

ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾದ್ದೆಂದರೆ, ಇವೆಲ್ಲಾ ನಡೆಯೋಕೆ ಮುಂಚೆಯೇ ಮುಸ್ಲಿಂ ವ್ಯಾಪಾರಿಗಳು ಜಾತ್ರೆಗೆ ಬರಬಾರದು ಅಥವಾ ಮುಸ್ಲಿಂ ವ್ಯಾಪಾರಿಗಳಿಂದ ಕೊಳ್ಳಬಾರದು ಎಂಬ ಘೋಷಣೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಹಿರಂಗವಾಗಿ ಚಾಲ್ತಿಗೆ ಬಂದಿತ್ತು. ಅದಕ್ಕೂ ನಾಲು ವರ್ಷಗಳ ಮುಂಚೆಯೇ ಇಂತಹ ಭಾವನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕವಾಗಿ ಇದ್ದುದು ಖುದ್ದು ನನಗೇ ಅನುಭವಕ್ಕೆ ಬಂದ ಘಟನೆ ನೆನಪಿನಿಂದ ಎಂದೂ ಮಾಸುವುದಿಲ್ಲ. ಆದರೆ ಇದ್ಯಾವುದೂ ಈ ಜೀವವಿರೋಧಿ ಚಾನೆಲ್‍ಗಳಲ್ಲಿ ಸುದ್ದಿ, ಸದ್ದು, ಚರ್ಚೆಗೆ ಕಾರಣವಾಗುವುದಿಲ್ಲ. ಏಕೆಂದರೆ ಅವರ ಅಜೆಂಡಾವೇ ಬೇರೆ. ಜೊತೆಗೆ ಅವರುಗಳು ಈಗ ಮನುಷ್ಯರಾಗಿಯೂ ಉಳಿದಿಲ್ಲ. ಧರ್ಮವಂತರಂತೂ ಅಲ್ಲವೇ ಅಲ್ಲ.

ಇತ್ತ ಮನುಷ್ಯವಿರೋಧಿಗಳಲ್ಲದವರೂ ಚರ್ಚೆಯನ್ನು ‘ಆ ಮುಸ್ಲಿಂ ಹುಡುಗರು ಬಟ್ಟೆ ತೆಗೆದುಕೊಳ್ಳದಂತೆ ಒತ್ತಾಯಿಸುವುದು ಸರಿಯೇ’ ಎಂಬುದರ ಸುತ್ತ ಕೇಂದ್ರೀಕರಿಸುವಂತೆ ಆಗುತ್ತದೆ. ಏಕೆಂದರೆ ಯಾರೋ ಒಬ್ಬರು ‘ಎಲ್ಲಾ ಸರಿ, ನೀವುಗಳು ಆ ಮುಸ್ಲಿಂ ಹುಡುಗರನ್ನೇಕೆ ಸಮರ್ಥಿಸುತ್ತಿದ್ದೀರಿ?’ ಎಂದು ಹೇಳಿರುತ್ತಾರೆ. ‘ಹೌದಲ್ಲವೇ, ನಾವು ಮೊದಲು ಅದನ್ನು ಖಂಡಿಸಬೇಕು ತಾನೇ?’, ‘ಹಿಂದೂ ಅಂಗಡಿಗಳಿಗೆ ಹೋಗಬಾರದೆಂದು ಹೇಳಿಲ್ಲದೇ ಇರಬಹುದು, ಆದರೆ ಹಬ್ಬವನ್ನು ಸರಳವಾಗಿಯೇ ಆಚರಿಸಬೇಕೆಂದು ಬಲವಂತ ಪಡಿಸುವುದು ತಪ್ಪಲ್ಲವೇ?’, ‘ನಾವು ಯಾವ ಮೂಲಭೂತವಾದವನ್ನೂ ಸಮರ್ಥಿಸುವುದಿಲ್ಲ’, ‘ಇವರೂ ಹಾಗೇ ಮಾಡುತ್ತಾರೆ’ ಇತ್ಯಾದಿ ಟ್ರ್ಯಾಪ್‍ಗಳಲ್ಲಿ ಬೀಳಲು ಕೆಲವರು ಉತ್ಸುಕರಾಗಿರುತ್ತಾರೆ. ಏಕೆಂದರೆ ಮನುಷ್ಯವಿರೋಧಿಗಳು ಸೃಷ್ಟಿಸುವ ಅಜೆಂಡಾವನ್ನು ಕೌಂಟರ್ ಮಾಡುವ ಸರಿಯಾದ ದಾರಿಯನ್ನು ಇವರಿನ್ನೂ ಹುಡುಕಿಕೊಂಡಿಲ್ಲ.

ಸತ್ಯ, ಸೌಹಾರ್ದತೆ, ಮನುಷ್ಯ ಪ್ರೀತಿಯ ಪರವಾಗಿರಬೇಕಿದ್ದ ಮಾಧ್ಯಮಗಳು ಮೆದುಳಿಗೆ ಸೋಂಕನ್ನು ಹಬ್ಬಿಸಿಕೊಂಡುಬಿಟ್ಟಿವೆ. ಅದನ್ನು ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದುಬಿಟ್ಟಿದೆ. ಸೋಂಕಿನ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು, ಕೆಲವೊಮ್ಮೆ ಲಾಕ್‍ಡೌನ್ ಮತ್ತು ಚಿಕಿತ್ಸೆಯ ಅಗತ್ಯ ಬೀಳುತ್ತದೆ. ಕರ್ನಾಟಕದ ಜಾಣಜಾಣೆಯರು ಅದಕ್ಕೆ ‘ಸಂಪೂರ್ಣವಾಗಿ ಫೀಲ್ಡಿಗಿಳಿಯಬೇಕು’ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....