Homeಅಂಕಣಗಳುಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

- Advertisement -
- Advertisement -

ಬೆಂಗಳೂರಿನ ಟಿವಿ ಚಾನೆಲ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಬಂದ ಕಾರಣಕ್ಕೆ ಹಲವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆಗ ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ ಎಂದು ನಾವೂ ಮನವಿ ಮಾಡಿಕೊಂಡಿದ್ದೆವು. ಏಕೆಂದರೆ ಅದಕ್ಕೆ ಮುಂಚೆ ಕೊರೊನಾ ವೈರಸ್‍ಅನ್ನು ಅಮೆರಿಕಾದವರು ಚೀನೀ ವೈರಸ್ ಎಂದು ಕರೆದಂತೆ, ಇಲ್ಲಿನ ಮಾಧ್ಯಮಗಳು ತಬ್ಲಿಘಿ ವೈರಸ್ ಎಂದು ಕರೆಯಲಾರಂಭಿಸಿದ್ದರು. ವೈರಸ್‍ಗೂ ಇಲ್ಲದ ಕೊಳಕು ಮನಸ್ಥಿತಿಯನ್ನು ಟಿವಿ ಚಾನೆಲ್‍ಗಳು ತೋರಿದೆವೆಂದು, ಅದೇ ತಪ್ಪನ್ನು ಎಲ್ಲರೂ ಮಾಡಬಾರದೆಂಬುದು ನಮ್ಮ ಕಾಳಜಿಯಾಗಿತ್ತು. ಮೀಡಿಯಾಗಳನ್ನು ಟ್ರೋಲ್ ಮಾಡಲು ಹೋಗಿ, ವೈರಸ್‍ಅನ್ನು ಯಾವುದಾದರೂ ಸಮುದಾಯಕ್ಕೆ ತಳಕು ಹಾಕುವ ಮನೋಭಾವಕ್ಕೆ ಪುಷ್ಟಿ ಕೊಡುವ ಕೆಲಸವನ್ನು ಯಾರೂ ಮಾಡಬಾರದೆಂಬುದು ಅದರ ಹಿಂದಿನ ಉದ್ದೇಶವಾಗಿತ್ತು.

ಆದರೆ ಮೀಡಿಯಾಗೆ ಹತ್ತಿದ್ದ ವೈರಸ್ ಅಷ್ಟು ಬೇಗ ಇಳಿಯಲಿಲ್ಲ. ಅವರು ಬಿಹಾರದ ಕಾರ್ಮಿಕರೊಬ್ಬರಿಗೆ ಸೋಂಕು ಬಂದಿತೆಂಬ ಸುದ್ದಿಯನ್ನು ಹಿಡಿದು ‘ಬಿಹಾರಿ ಬಾಂಬು’ ಎಂದು ಕರೆದರು. ಹಾಗೆಯೇ ಮುಂದುವರೆದು 11ನೇ ಕ್ರಾಸ್ ವೈರಸ್ ಇತ್ಯಾದಿ ಇತ್ಯಾದಿಗಳನ್ನು ಸೃಷ್ಟಿಸುತ್ತಾ, ಇತ್ತೀಚೆಗೆ ಗರ್ಭಿಣಿ ಬಾಂಬ್ ಎಂತಲೂ ಕರೆದರು. ಮುಸ್ಲಿಮರನ್ನು ಗುರಿ ಮಾಡುವ ಅವರ ದುರುದ್ದೇಶದ ಈಡೇರಿಕೆಗಾಗಿ ಕೊರೊನಾ ಸೋಂಕಿನ (ಕ್ರಿಮಿನಲೈಸೇಷನ್) ಅಪರಾಧೀಕರಣವನ್ನು ವ್ಯವಸ್ಥಿತವಾಗಿ ಮಾಡಿದರು. ಈ ಕೆಲಸದಲ್ಲಿ ಅತ್ಯುಗ್ರವಾಗಿ ತೊಡಗಿಕೊಂಡಿದ್ದ ಇನ್ನೊಂದು ಟಿವಿ ಚಾನೆಲ್ ಝೀ ಸಂಸ್ಥೆಗೂ ಕೊರೊನಾ ಬಾಧಿಸಿದೆ. ಕೊರೊನಾ ಸೋಂಕಿತರೆಲ್ಲರೂ ಇಲ್ಲಿಯವರೆಗೂ ಜಿಹಾದಿಗಳಾಗಿದ್ದರೆ, ಈಗ ಇದ್ದಕ್ಕಿದ್ದಂತೆ ಅವರುಗಳು ವಾರಿಯರ್ಸ್‍ಗಳಾಗಿಬಿಟ್ಟಿದ್ದಾರೆ.

ಇದೇ ಹೊತ್ತಿನಲ್ಲಿ ಕರ್ನಾಟಕದ ಒಂದು ಮನುಷ್ಯ ವಿರೋಧಿ ಟಿವಿ ಚಾನೆಲ್ ಮುಸ್ಲಿಮರ ವಿರುದ್ಧ ಇನ್ನೊಂದು ಫೇಕ್‍ನ್ಯೂಸ್ ಕುರಿತು ಚರ್ಚಿಸಲು ಶುರುಮಾಡಿದೆ. ದಾವಣಗೆರೆ ಜಿಲ್ಲೆಯಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂ ಬಟ್ಟೆ ವ್ಯಾಪಾರಿಗಳಿಂದ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಹೆಣ್ಣುಮಕ್ಕಳನ್ನು ಕೆಲವು ಮುಸ್ಲಿಮರು ಬಲವಂತಪಡಿಸಿದ್ದಾರೆಂಬುದು ಅವರು ಚರ್ಚಿಸುತ್ತಿರುವ ಸುದ್ದಿ. ಈ ಸುದ್ದಿ ಇಲ್ಲಿ ಪ್ರಸಾರವಾಗುವ ಮುಂಚೆಯೇ ದಾವಣಗೆರೆಯಲ್ಲಿ ಯಾವ ಧಾರ್ಮಿಕ ಮುಖಂಡರು ಈ ರೀತಿ ಕರೆ ಕೊಟ್ಟಿದ್ದಾರೆಂದು ಹೇಳಲಾಗಿತ್ತೋ ಅವರು ಪತ್ರಿಕಾಗೋಷ್ಠಿಯನ್ನೂ ಮಾಡಿದ್ದರು.

ಈ ಸಾರಿಯ ರಂಜಾನ್‍ನ ಸಂದರ್ಭದಲ್ಲಿ ಯಾರೂ ದುಂದುವೆಚ್ಚ ಮಾಡಬಾರದು, ಬದಲಿಗೆ ಹಾಗೇನಾದರೂ ಖರ್ಚು ಮಾಡುವುದಿದ್ದಲ್ಲಿ ಅದನ್ನು ಲಾಕ್‍ಡೌನ್‍ನಿಂದ ಸಂತ್ರಸ್ತರಾದ ಬಡವರಿಗೆ ಕೊಡಬೇಕೆಂದು ರಂಜಾನ್ ಶುರುವಾಗುವ ಮುಂಚೆಯೇ ಆ ಸಮುದಾಯದೊಳಗೆ ಚಾಲ್ತಿಯಲ್ಲಿದ್ದ ಸಂದೇಶ. ಅದನ್ನೇ ಅವರು ಅಲ್ಲಿಯೂ ನೀಡಿದ್ದರು. ರಂಜಾನ್ ಸಂದರ್ಭದಲ್ಲಿ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಜಕಾತ್‍ಅನ್ನು ದಾನ ಮಾಡುವುದು ಕಡ್ಡಾಯವಾಗಿದ್ದು ಈ ಸಾರಿ ಅದನ್ನು ಹೆಚ್ಚಿಸುವ ಧರ್ಮದ ಕಾರ್ಯ ಅದಾಗಿತ್ತು. ಇದನ್ನು ಅತಿರೇಕಕ್ಕೆ ಒಯ್ದ ಕೆಲವು ಮುಸ್ಲಿಮರು ಕೆಲವೆಡೆ ಅಂಗಡಿಗಳಿಗೆ ಹೋಗಿದ್ದ ಮುಸ್ಲಿಂ ಹೆಣ್ಣುಮಕ್ಕಳನ್ನು ಬಲವಂತದಿಂದ ತಡೆದದ್ದು ಸುದ್ದಿಯಾಗಿತ್ತಲ್ಲದೇ, ಯಥಾಪ್ರಕಾರ ವಿಡಿಯೋಗಳೂ ಚಾಲನೆಯಲ್ಲಿದ್ದವು. ಇನ್ನೊಬ್ಬರ ಇಷ್ಟಾನಿಷ್ಟಗಳನ್ನು ಸರಿಯಾದ ಕಾರಣಗಳಿಗಾಗಿಯೇ ಬದಲಿಸಬಯಸುವವರೂ ಯಾರನ್ನೂ ಬಲವಂತ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ; ಅದು ಯಾರನ್ನೋ ತಡೆಯುವ ಮಟ್ಟಕ್ಕೆ ಹೋದರೆ ಅದು ಶಿಕ್ಷಾರ್ಹವೂ ಆಗಬೇಕು.

ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾದ್ದೆಂದರೆ, ಇವೆಲ್ಲಾ ನಡೆಯೋಕೆ ಮುಂಚೆಯೇ ಮುಸ್ಲಿಂ ವ್ಯಾಪಾರಿಗಳು ಜಾತ್ರೆಗೆ ಬರಬಾರದು ಅಥವಾ ಮುಸ್ಲಿಂ ವ್ಯಾಪಾರಿಗಳಿಂದ ಕೊಳ್ಳಬಾರದು ಎಂಬ ಘೋಷಣೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಹಿರಂಗವಾಗಿ ಚಾಲ್ತಿಗೆ ಬಂದಿತ್ತು. ಅದಕ್ಕೂ ನಾಲು ವರ್ಷಗಳ ಮುಂಚೆಯೇ ಇಂತಹ ಭಾವನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕವಾಗಿ ಇದ್ದುದು ಖುದ್ದು ನನಗೇ ಅನುಭವಕ್ಕೆ ಬಂದ ಘಟನೆ ನೆನಪಿನಿಂದ ಎಂದೂ ಮಾಸುವುದಿಲ್ಲ. ಆದರೆ ಇದ್ಯಾವುದೂ ಈ ಜೀವವಿರೋಧಿ ಚಾನೆಲ್‍ಗಳಲ್ಲಿ ಸುದ್ದಿ, ಸದ್ದು, ಚರ್ಚೆಗೆ ಕಾರಣವಾಗುವುದಿಲ್ಲ. ಏಕೆಂದರೆ ಅವರ ಅಜೆಂಡಾವೇ ಬೇರೆ. ಜೊತೆಗೆ ಅವರುಗಳು ಈಗ ಮನುಷ್ಯರಾಗಿಯೂ ಉಳಿದಿಲ್ಲ. ಧರ್ಮವಂತರಂತೂ ಅಲ್ಲವೇ ಅಲ್ಲ.

ಇತ್ತ ಮನುಷ್ಯವಿರೋಧಿಗಳಲ್ಲದವರೂ ಚರ್ಚೆಯನ್ನು ‘ಆ ಮುಸ್ಲಿಂ ಹುಡುಗರು ಬಟ್ಟೆ ತೆಗೆದುಕೊಳ್ಳದಂತೆ ಒತ್ತಾಯಿಸುವುದು ಸರಿಯೇ’ ಎಂಬುದರ ಸುತ್ತ ಕೇಂದ್ರೀಕರಿಸುವಂತೆ ಆಗುತ್ತದೆ. ಏಕೆಂದರೆ ಯಾರೋ ಒಬ್ಬರು ‘ಎಲ್ಲಾ ಸರಿ, ನೀವುಗಳು ಆ ಮುಸ್ಲಿಂ ಹುಡುಗರನ್ನೇಕೆ ಸಮರ್ಥಿಸುತ್ತಿದ್ದೀರಿ?’ ಎಂದು ಹೇಳಿರುತ್ತಾರೆ. ‘ಹೌದಲ್ಲವೇ, ನಾವು ಮೊದಲು ಅದನ್ನು ಖಂಡಿಸಬೇಕು ತಾನೇ?’, ‘ಹಿಂದೂ ಅಂಗಡಿಗಳಿಗೆ ಹೋಗಬಾರದೆಂದು ಹೇಳಿಲ್ಲದೇ ಇರಬಹುದು, ಆದರೆ ಹಬ್ಬವನ್ನು ಸರಳವಾಗಿಯೇ ಆಚರಿಸಬೇಕೆಂದು ಬಲವಂತ ಪಡಿಸುವುದು ತಪ್ಪಲ್ಲವೇ?’, ‘ನಾವು ಯಾವ ಮೂಲಭೂತವಾದವನ್ನೂ ಸಮರ್ಥಿಸುವುದಿಲ್ಲ’, ‘ಇವರೂ ಹಾಗೇ ಮಾಡುತ್ತಾರೆ’ ಇತ್ಯಾದಿ ಟ್ರ್ಯಾಪ್‍ಗಳಲ್ಲಿ ಬೀಳಲು ಕೆಲವರು ಉತ್ಸುಕರಾಗಿರುತ್ತಾರೆ. ಏಕೆಂದರೆ ಮನುಷ್ಯವಿರೋಧಿಗಳು ಸೃಷ್ಟಿಸುವ ಅಜೆಂಡಾವನ್ನು ಕೌಂಟರ್ ಮಾಡುವ ಸರಿಯಾದ ದಾರಿಯನ್ನು ಇವರಿನ್ನೂ ಹುಡುಕಿಕೊಂಡಿಲ್ಲ.

ಸತ್ಯ, ಸೌಹಾರ್ದತೆ, ಮನುಷ್ಯ ಪ್ರೀತಿಯ ಪರವಾಗಿರಬೇಕಿದ್ದ ಮಾಧ್ಯಮಗಳು ಮೆದುಳಿಗೆ ಸೋಂಕನ್ನು ಹಬ್ಬಿಸಿಕೊಂಡುಬಿಟ್ಟಿವೆ. ಅದನ್ನು ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದುಬಿಟ್ಟಿದೆ. ಸೋಂಕಿನ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು, ಕೆಲವೊಮ್ಮೆ ಲಾಕ್‍ಡೌನ್ ಮತ್ತು ಚಿಕಿತ್ಸೆಯ ಅಗತ್ಯ ಬೀಳುತ್ತದೆ. ಕರ್ನಾಟಕದ ಜಾಣಜಾಣೆಯರು ಅದಕ್ಕೆ ‘ಸಂಪೂರ್ಣವಾಗಿ ಫೀಲ್ಡಿಗಿಳಿಯಬೇಕು’ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...