Homeಅಂಕಣಗಳುಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

- Advertisement -
- Advertisement -

ಬೆಂಗಳೂರಿನ ಟಿವಿ ಚಾನೆಲ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಬಂದ ಕಾರಣಕ್ಕೆ ಹಲವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆಗ ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ ಎಂದು ನಾವೂ ಮನವಿ ಮಾಡಿಕೊಂಡಿದ್ದೆವು. ಏಕೆಂದರೆ ಅದಕ್ಕೆ ಮುಂಚೆ ಕೊರೊನಾ ವೈರಸ್‍ಅನ್ನು ಅಮೆರಿಕಾದವರು ಚೀನೀ ವೈರಸ್ ಎಂದು ಕರೆದಂತೆ, ಇಲ್ಲಿನ ಮಾಧ್ಯಮಗಳು ತಬ್ಲಿಘಿ ವೈರಸ್ ಎಂದು ಕರೆಯಲಾರಂಭಿಸಿದ್ದರು. ವೈರಸ್‍ಗೂ ಇಲ್ಲದ ಕೊಳಕು ಮನಸ್ಥಿತಿಯನ್ನು ಟಿವಿ ಚಾನೆಲ್‍ಗಳು ತೋರಿದೆವೆಂದು, ಅದೇ ತಪ್ಪನ್ನು ಎಲ್ಲರೂ ಮಾಡಬಾರದೆಂಬುದು ನಮ್ಮ ಕಾಳಜಿಯಾಗಿತ್ತು. ಮೀಡಿಯಾಗಳನ್ನು ಟ್ರೋಲ್ ಮಾಡಲು ಹೋಗಿ, ವೈರಸ್‍ಅನ್ನು ಯಾವುದಾದರೂ ಸಮುದಾಯಕ್ಕೆ ತಳಕು ಹಾಕುವ ಮನೋಭಾವಕ್ಕೆ ಪುಷ್ಟಿ ಕೊಡುವ ಕೆಲಸವನ್ನು ಯಾರೂ ಮಾಡಬಾರದೆಂಬುದು ಅದರ ಹಿಂದಿನ ಉದ್ದೇಶವಾಗಿತ್ತು.

ಆದರೆ ಮೀಡಿಯಾಗೆ ಹತ್ತಿದ್ದ ವೈರಸ್ ಅಷ್ಟು ಬೇಗ ಇಳಿಯಲಿಲ್ಲ. ಅವರು ಬಿಹಾರದ ಕಾರ್ಮಿಕರೊಬ್ಬರಿಗೆ ಸೋಂಕು ಬಂದಿತೆಂಬ ಸುದ್ದಿಯನ್ನು ಹಿಡಿದು ‘ಬಿಹಾರಿ ಬಾಂಬು’ ಎಂದು ಕರೆದರು. ಹಾಗೆಯೇ ಮುಂದುವರೆದು 11ನೇ ಕ್ರಾಸ್ ವೈರಸ್ ಇತ್ಯಾದಿ ಇತ್ಯಾದಿಗಳನ್ನು ಸೃಷ್ಟಿಸುತ್ತಾ, ಇತ್ತೀಚೆಗೆ ಗರ್ಭಿಣಿ ಬಾಂಬ್ ಎಂತಲೂ ಕರೆದರು. ಮುಸ್ಲಿಮರನ್ನು ಗುರಿ ಮಾಡುವ ಅವರ ದುರುದ್ದೇಶದ ಈಡೇರಿಕೆಗಾಗಿ ಕೊರೊನಾ ಸೋಂಕಿನ (ಕ್ರಿಮಿನಲೈಸೇಷನ್) ಅಪರಾಧೀಕರಣವನ್ನು ವ್ಯವಸ್ಥಿತವಾಗಿ ಮಾಡಿದರು. ಈ ಕೆಲಸದಲ್ಲಿ ಅತ್ಯುಗ್ರವಾಗಿ ತೊಡಗಿಕೊಂಡಿದ್ದ ಇನ್ನೊಂದು ಟಿವಿ ಚಾನೆಲ್ ಝೀ ಸಂಸ್ಥೆಗೂ ಕೊರೊನಾ ಬಾಧಿಸಿದೆ. ಕೊರೊನಾ ಸೋಂಕಿತರೆಲ್ಲರೂ ಇಲ್ಲಿಯವರೆಗೂ ಜಿಹಾದಿಗಳಾಗಿದ್ದರೆ, ಈಗ ಇದ್ದಕ್ಕಿದ್ದಂತೆ ಅವರುಗಳು ವಾರಿಯರ್ಸ್‍ಗಳಾಗಿಬಿಟ್ಟಿದ್ದಾರೆ.

ಇದೇ ಹೊತ್ತಿನಲ್ಲಿ ಕರ್ನಾಟಕದ ಒಂದು ಮನುಷ್ಯ ವಿರೋಧಿ ಟಿವಿ ಚಾನೆಲ್ ಮುಸ್ಲಿಮರ ವಿರುದ್ಧ ಇನ್ನೊಂದು ಫೇಕ್‍ನ್ಯೂಸ್ ಕುರಿತು ಚರ್ಚಿಸಲು ಶುರುಮಾಡಿದೆ. ದಾವಣಗೆರೆ ಜಿಲ್ಲೆಯಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂ ಬಟ್ಟೆ ವ್ಯಾಪಾರಿಗಳಿಂದ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಹೆಣ್ಣುಮಕ್ಕಳನ್ನು ಕೆಲವು ಮುಸ್ಲಿಮರು ಬಲವಂತಪಡಿಸಿದ್ದಾರೆಂಬುದು ಅವರು ಚರ್ಚಿಸುತ್ತಿರುವ ಸುದ್ದಿ. ಈ ಸುದ್ದಿ ಇಲ್ಲಿ ಪ್ರಸಾರವಾಗುವ ಮುಂಚೆಯೇ ದಾವಣಗೆರೆಯಲ್ಲಿ ಯಾವ ಧಾರ್ಮಿಕ ಮುಖಂಡರು ಈ ರೀತಿ ಕರೆ ಕೊಟ್ಟಿದ್ದಾರೆಂದು ಹೇಳಲಾಗಿತ್ತೋ ಅವರು ಪತ್ರಿಕಾಗೋಷ್ಠಿಯನ್ನೂ ಮಾಡಿದ್ದರು.

ಈ ಸಾರಿಯ ರಂಜಾನ್‍ನ ಸಂದರ್ಭದಲ್ಲಿ ಯಾರೂ ದುಂದುವೆಚ್ಚ ಮಾಡಬಾರದು, ಬದಲಿಗೆ ಹಾಗೇನಾದರೂ ಖರ್ಚು ಮಾಡುವುದಿದ್ದಲ್ಲಿ ಅದನ್ನು ಲಾಕ್‍ಡೌನ್‍ನಿಂದ ಸಂತ್ರಸ್ತರಾದ ಬಡವರಿಗೆ ಕೊಡಬೇಕೆಂದು ರಂಜಾನ್ ಶುರುವಾಗುವ ಮುಂಚೆಯೇ ಆ ಸಮುದಾಯದೊಳಗೆ ಚಾಲ್ತಿಯಲ್ಲಿದ್ದ ಸಂದೇಶ. ಅದನ್ನೇ ಅವರು ಅಲ್ಲಿಯೂ ನೀಡಿದ್ದರು. ರಂಜಾನ್ ಸಂದರ್ಭದಲ್ಲಿ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಜಕಾತ್‍ಅನ್ನು ದಾನ ಮಾಡುವುದು ಕಡ್ಡಾಯವಾಗಿದ್ದು ಈ ಸಾರಿ ಅದನ್ನು ಹೆಚ್ಚಿಸುವ ಧರ್ಮದ ಕಾರ್ಯ ಅದಾಗಿತ್ತು. ಇದನ್ನು ಅತಿರೇಕಕ್ಕೆ ಒಯ್ದ ಕೆಲವು ಮುಸ್ಲಿಮರು ಕೆಲವೆಡೆ ಅಂಗಡಿಗಳಿಗೆ ಹೋಗಿದ್ದ ಮುಸ್ಲಿಂ ಹೆಣ್ಣುಮಕ್ಕಳನ್ನು ಬಲವಂತದಿಂದ ತಡೆದದ್ದು ಸುದ್ದಿಯಾಗಿತ್ತಲ್ಲದೇ, ಯಥಾಪ್ರಕಾರ ವಿಡಿಯೋಗಳೂ ಚಾಲನೆಯಲ್ಲಿದ್ದವು. ಇನ್ನೊಬ್ಬರ ಇಷ್ಟಾನಿಷ್ಟಗಳನ್ನು ಸರಿಯಾದ ಕಾರಣಗಳಿಗಾಗಿಯೇ ಬದಲಿಸಬಯಸುವವರೂ ಯಾರನ್ನೂ ಬಲವಂತ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ; ಅದು ಯಾರನ್ನೋ ತಡೆಯುವ ಮಟ್ಟಕ್ಕೆ ಹೋದರೆ ಅದು ಶಿಕ್ಷಾರ್ಹವೂ ಆಗಬೇಕು.

ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾದ್ದೆಂದರೆ, ಇವೆಲ್ಲಾ ನಡೆಯೋಕೆ ಮುಂಚೆಯೇ ಮುಸ್ಲಿಂ ವ್ಯಾಪಾರಿಗಳು ಜಾತ್ರೆಗೆ ಬರಬಾರದು ಅಥವಾ ಮುಸ್ಲಿಂ ವ್ಯಾಪಾರಿಗಳಿಂದ ಕೊಳ್ಳಬಾರದು ಎಂಬ ಘೋಷಣೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಹಿರಂಗವಾಗಿ ಚಾಲ್ತಿಗೆ ಬಂದಿತ್ತು. ಅದಕ್ಕೂ ನಾಲು ವರ್ಷಗಳ ಮುಂಚೆಯೇ ಇಂತಹ ಭಾವನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕವಾಗಿ ಇದ್ದುದು ಖುದ್ದು ನನಗೇ ಅನುಭವಕ್ಕೆ ಬಂದ ಘಟನೆ ನೆನಪಿನಿಂದ ಎಂದೂ ಮಾಸುವುದಿಲ್ಲ. ಆದರೆ ಇದ್ಯಾವುದೂ ಈ ಜೀವವಿರೋಧಿ ಚಾನೆಲ್‍ಗಳಲ್ಲಿ ಸುದ್ದಿ, ಸದ್ದು, ಚರ್ಚೆಗೆ ಕಾರಣವಾಗುವುದಿಲ್ಲ. ಏಕೆಂದರೆ ಅವರ ಅಜೆಂಡಾವೇ ಬೇರೆ. ಜೊತೆಗೆ ಅವರುಗಳು ಈಗ ಮನುಷ್ಯರಾಗಿಯೂ ಉಳಿದಿಲ್ಲ. ಧರ್ಮವಂತರಂತೂ ಅಲ್ಲವೇ ಅಲ್ಲ.

ಇತ್ತ ಮನುಷ್ಯವಿರೋಧಿಗಳಲ್ಲದವರೂ ಚರ್ಚೆಯನ್ನು ‘ಆ ಮುಸ್ಲಿಂ ಹುಡುಗರು ಬಟ್ಟೆ ತೆಗೆದುಕೊಳ್ಳದಂತೆ ಒತ್ತಾಯಿಸುವುದು ಸರಿಯೇ’ ಎಂಬುದರ ಸುತ್ತ ಕೇಂದ್ರೀಕರಿಸುವಂತೆ ಆಗುತ್ತದೆ. ಏಕೆಂದರೆ ಯಾರೋ ಒಬ್ಬರು ‘ಎಲ್ಲಾ ಸರಿ, ನೀವುಗಳು ಆ ಮುಸ್ಲಿಂ ಹುಡುಗರನ್ನೇಕೆ ಸಮರ್ಥಿಸುತ್ತಿದ್ದೀರಿ?’ ಎಂದು ಹೇಳಿರುತ್ತಾರೆ. ‘ಹೌದಲ್ಲವೇ, ನಾವು ಮೊದಲು ಅದನ್ನು ಖಂಡಿಸಬೇಕು ತಾನೇ?’, ‘ಹಿಂದೂ ಅಂಗಡಿಗಳಿಗೆ ಹೋಗಬಾರದೆಂದು ಹೇಳಿಲ್ಲದೇ ಇರಬಹುದು, ಆದರೆ ಹಬ್ಬವನ್ನು ಸರಳವಾಗಿಯೇ ಆಚರಿಸಬೇಕೆಂದು ಬಲವಂತ ಪಡಿಸುವುದು ತಪ್ಪಲ್ಲವೇ?’, ‘ನಾವು ಯಾವ ಮೂಲಭೂತವಾದವನ್ನೂ ಸಮರ್ಥಿಸುವುದಿಲ್ಲ’, ‘ಇವರೂ ಹಾಗೇ ಮಾಡುತ್ತಾರೆ’ ಇತ್ಯಾದಿ ಟ್ರ್ಯಾಪ್‍ಗಳಲ್ಲಿ ಬೀಳಲು ಕೆಲವರು ಉತ್ಸುಕರಾಗಿರುತ್ತಾರೆ. ಏಕೆಂದರೆ ಮನುಷ್ಯವಿರೋಧಿಗಳು ಸೃಷ್ಟಿಸುವ ಅಜೆಂಡಾವನ್ನು ಕೌಂಟರ್ ಮಾಡುವ ಸರಿಯಾದ ದಾರಿಯನ್ನು ಇವರಿನ್ನೂ ಹುಡುಕಿಕೊಂಡಿಲ್ಲ.

ಸತ್ಯ, ಸೌಹಾರ್ದತೆ, ಮನುಷ್ಯ ಪ್ರೀತಿಯ ಪರವಾಗಿರಬೇಕಿದ್ದ ಮಾಧ್ಯಮಗಳು ಮೆದುಳಿಗೆ ಸೋಂಕನ್ನು ಹಬ್ಬಿಸಿಕೊಂಡುಬಿಟ್ಟಿವೆ. ಅದನ್ನು ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದುಬಿಟ್ಟಿದೆ. ಸೋಂಕಿನ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು, ಕೆಲವೊಮ್ಮೆ ಲಾಕ್‍ಡೌನ್ ಮತ್ತು ಚಿಕಿತ್ಸೆಯ ಅಗತ್ಯ ಬೀಳುತ್ತದೆ. ಕರ್ನಾಟಕದ ಜಾಣಜಾಣೆಯರು ಅದಕ್ಕೆ ‘ಸಂಪೂರ್ಣವಾಗಿ ಫೀಲ್ಡಿಗಿಳಿಯಬೇಕು’ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...