Homeಅಂಕಣಗಳುಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

- Advertisement -
- Advertisement -

ಬೆಂಗಳೂರಿನ ಟಿವಿ ಚಾನೆಲ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಬಂದ ಕಾರಣಕ್ಕೆ ಹಲವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆಗ ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ ಎಂದು ನಾವೂ ಮನವಿ ಮಾಡಿಕೊಂಡಿದ್ದೆವು. ಏಕೆಂದರೆ ಅದಕ್ಕೆ ಮುಂಚೆ ಕೊರೊನಾ ವೈರಸ್‍ಅನ್ನು ಅಮೆರಿಕಾದವರು ಚೀನೀ ವೈರಸ್ ಎಂದು ಕರೆದಂತೆ, ಇಲ್ಲಿನ ಮಾಧ್ಯಮಗಳು ತಬ್ಲಿಘಿ ವೈರಸ್ ಎಂದು ಕರೆಯಲಾರಂಭಿಸಿದ್ದರು. ವೈರಸ್‍ಗೂ ಇಲ್ಲದ ಕೊಳಕು ಮನಸ್ಥಿತಿಯನ್ನು ಟಿವಿ ಚಾನೆಲ್‍ಗಳು ತೋರಿದೆವೆಂದು, ಅದೇ ತಪ್ಪನ್ನು ಎಲ್ಲರೂ ಮಾಡಬಾರದೆಂಬುದು ನಮ್ಮ ಕಾಳಜಿಯಾಗಿತ್ತು. ಮೀಡಿಯಾಗಳನ್ನು ಟ್ರೋಲ್ ಮಾಡಲು ಹೋಗಿ, ವೈರಸ್‍ಅನ್ನು ಯಾವುದಾದರೂ ಸಮುದಾಯಕ್ಕೆ ತಳಕು ಹಾಕುವ ಮನೋಭಾವಕ್ಕೆ ಪುಷ್ಟಿ ಕೊಡುವ ಕೆಲಸವನ್ನು ಯಾರೂ ಮಾಡಬಾರದೆಂಬುದು ಅದರ ಹಿಂದಿನ ಉದ್ದೇಶವಾಗಿತ್ತು.

ಆದರೆ ಮೀಡಿಯಾಗೆ ಹತ್ತಿದ್ದ ವೈರಸ್ ಅಷ್ಟು ಬೇಗ ಇಳಿಯಲಿಲ್ಲ. ಅವರು ಬಿಹಾರದ ಕಾರ್ಮಿಕರೊಬ್ಬರಿಗೆ ಸೋಂಕು ಬಂದಿತೆಂಬ ಸುದ್ದಿಯನ್ನು ಹಿಡಿದು ‘ಬಿಹಾರಿ ಬಾಂಬು’ ಎಂದು ಕರೆದರು. ಹಾಗೆಯೇ ಮುಂದುವರೆದು 11ನೇ ಕ್ರಾಸ್ ವೈರಸ್ ಇತ್ಯಾದಿ ಇತ್ಯಾದಿಗಳನ್ನು ಸೃಷ್ಟಿಸುತ್ತಾ, ಇತ್ತೀಚೆಗೆ ಗರ್ಭಿಣಿ ಬಾಂಬ್ ಎಂತಲೂ ಕರೆದರು. ಮುಸ್ಲಿಮರನ್ನು ಗುರಿ ಮಾಡುವ ಅವರ ದುರುದ್ದೇಶದ ಈಡೇರಿಕೆಗಾಗಿ ಕೊರೊನಾ ಸೋಂಕಿನ (ಕ್ರಿಮಿನಲೈಸೇಷನ್) ಅಪರಾಧೀಕರಣವನ್ನು ವ್ಯವಸ್ಥಿತವಾಗಿ ಮಾಡಿದರು. ಈ ಕೆಲಸದಲ್ಲಿ ಅತ್ಯುಗ್ರವಾಗಿ ತೊಡಗಿಕೊಂಡಿದ್ದ ಇನ್ನೊಂದು ಟಿವಿ ಚಾನೆಲ್ ಝೀ ಸಂಸ್ಥೆಗೂ ಕೊರೊನಾ ಬಾಧಿಸಿದೆ. ಕೊರೊನಾ ಸೋಂಕಿತರೆಲ್ಲರೂ ಇಲ್ಲಿಯವರೆಗೂ ಜಿಹಾದಿಗಳಾಗಿದ್ದರೆ, ಈಗ ಇದ್ದಕ್ಕಿದ್ದಂತೆ ಅವರುಗಳು ವಾರಿಯರ್ಸ್‍ಗಳಾಗಿಬಿಟ್ಟಿದ್ದಾರೆ.

ಇದೇ ಹೊತ್ತಿನಲ್ಲಿ ಕರ್ನಾಟಕದ ಒಂದು ಮನುಷ್ಯ ವಿರೋಧಿ ಟಿವಿ ಚಾನೆಲ್ ಮುಸ್ಲಿಮರ ವಿರುದ್ಧ ಇನ್ನೊಂದು ಫೇಕ್‍ನ್ಯೂಸ್ ಕುರಿತು ಚರ್ಚಿಸಲು ಶುರುಮಾಡಿದೆ. ದಾವಣಗೆರೆ ಜಿಲ್ಲೆಯಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂ ಬಟ್ಟೆ ವ್ಯಾಪಾರಿಗಳಿಂದ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಹೆಣ್ಣುಮಕ್ಕಳನ್ನು ಕೆಲವು ಮುಸ್ಲಿಮರು ಬಲವಂತಪಡಿಸಿದ್ದಾರೆಂಬುದು ಅವರು ಚರ್ಚಿಸುತ್ತಿರುವ ಸುದ್ದಿ. ಈ ಸುದ್ದಿ ಇಲ್ಲಿ ಪ್ರಸಾರವಾಗುವ ಮುಂಚೆಯೇ ದಾವಣಗೆರೆಯಲ್ಲಿ ಯಾವ ಧಾರ್ಮಿಕ ಮುಖಂಡರು ಈ ರೀತಿ ಕರೆ ಕೊಟ್ಟಿದ್ದಾರೆಂದು ಹೇಳಲಾಗಿತ್ತೋ ಅವರು ಪತ್ರಿಕಾಗೋಷ್ಠಿಯನ್ನೂ ಮಾಡಿದ್ದರು.

ಈ ಸಾರಿಯ ರಂಜಾನ್‍ನ ಸಂದರ್ಭದಲ್ಲಿ ಯಾರೂ ದುಂದುವೆಚ್ಚ ಮಾಡಬಾರದು, ಬದಲಿಗೆ ಹಾಗೇನಾದರೂ ಖರ್ಚು ಮಾಡುವುದಿದ್ದಲ್ಲಿ ಅದನ್ನು ಲಾಕ್‍ಡೌನ್‍ನಿಂದ ಸಂತ್ರಸ್ತರಾದ ಬಡವರಿಗೆ ಕೊಡಬೇಕೆಂದು ರಂಜಾನ್ ಶುರುವಾಗುವ ಮುಂಚೆಯೇ ಆ ಸಮುದಾಯದೊಳಗೆ ಚಾಲ್ತಿಯಲ್ಲಿದ್ದ ಸಂದೇಶ. ಅದನ್ನೇ ಅವರು ಅಲ್ಲಿಯೂ ನೀಡಿದ್ದರು. ರಂಜಾನ್ ಸಂದರ್ಭದಲ್ಲಿ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಜಕಾತ್‍ಅನ್ನು ದಾನ ಮಾಡುವುದು ಕಡ್ಡಾಯವಾಗಿದ್ದು ಈ ಸಾರಿ ಅದನ್ನು ಹೆಚ್ಚಿಸುವ ಧರ್ಮದ ಕಾರ್ಯ ಅದಾಗಿತ್ತು. ಇದನ್ನು ಅತಿರೇಕಕ್ಕೆ ಒಯ್ದ ಕೆಲವು ಮುಸ್ಲಿಮರು ಕೆಲವೆಡೆ ಅಂಗಡಿಗಳಿಗೆ ಹೋಗಿದ್ದ ಮುಸ್ಲಿಂ ಹೆಣ್ಣುಮಕ್ಕಳನ್ನು ಬಲವಂತದಿಂದ ತಡೆದದ್ದು ಸುದ್ದಿಯಾಗಿತ್ತಲ್ಲದೇ, ಯಥಾಪ್ರಕಾರ ವಿಡಿಯೋಗಳೂ ಚಾಲನೆಯಲ್ಲಿದ್ದವು. ಇನ್ನೊಬ್ಬರ ಇಷ್ಟಾನಿಷ್ಟಗಳನ್ನು ಸರಿಯಾದ ಕಾರಣಗಳಿಗಾಗಿಯೇ ಬದಲಿಸಬಯಸುವವರೂ ಯಾರನ್ನೂ ಬಲವಂತ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ; ಅದು ಯಾರನ್ನೋ ತಡೆಯುವ ಮಟ್ಟಕ್ಕೆ ಹೋದರೆ ಅದು ಶಿಕ್ಷಾರ್ಹವೂ ಆಗಬೇಕು.

ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾದ್ದೆಂದರೆ, ಇವೆಲ್ಲಾ ನಡೆಯೋಕೆ ಮುಂಚೆಯೇ ಮುಸ್ಲಿಂ ವ್ಯಾಪಾರಿಗಳು ಜಾತ್ರೆಗೆ ಬರಬಾರದು ಅಥವಾ ಮುಸ್ಲಿಂ ವ್ಯಾಪಾರಿಗಳಿಂದ ಕೊಳ್ಳಬಾರದು ಎಂಬ ಘೋಷಣೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಹಿರಂಗವಾಗಿ ಚಾಲ್ತಿಗೆ ಬಂದಿತ್ತು. ಅದಕ್ಕೂ ನಾಲು ವರ್ಷಗಳ ಮುಂಚೆಯೇ ಇಂತಹ ಭಾವನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕವಾಗಿ ಇದ್ದುದು ಖುದ್ದು ನನಗೇ ಅನುಭವಕ್ಕೆ ಬಂದ ಘಟನೆ ನೆನಪಿನಿಂದ ಎಂದೂ ಮಾಸುವುದಿಲ್ಲ. ಆದರೆ ಇದ್ಯಾವುದೂ ಈ ಜೀವವಿರೋಧಿ ಚಾನೆಲ್‍ಗಳಲ್ಲಿ ಸುದ್ದಿ, ಸದ್ದು, ಚರ್ಚೆಗೆ ಕಾರಣವಾಗುವುದಿಲ್ಲ. ಏಕೆಂದರೆ ಅವರ ಅಜೆಂಡಾವೇ ಬೇರೆ. ಜೊತೆಗೆ ಅವರುಗಳು ಈಗ ಮನುಷ್ಯರಾಗಿಯೂ ಉಳಿದಿಲ್ಲ. ಧರ್ಮವಂತರಂತೂ ಅಲ್ಲವೇ ಅಲ್ಲ.

ಇತ್ತ ಮನುಷ್ಯವಿರೋಧಿಗಳಲ್ಲದವರೂ ಚರ್ಚೆಯನ್ನು ‘ಆ ಮುಸ್ಲಿಂ ಹುಡುಗರು ಬಟ್ಟೆ ತೆಗೆದುಕೊಳ್ಳದಂತೆ ಒತ್ತಾಯಿಸುವುದು ಸರಿಯೇ’ ಎಂಬುದರ ಸುತ್ತ ಕೇಂದ್ರೀಕರಿಸುವಂತೆ ಆಗುತ್ತದೆ. ಏಕೆಂದರೆ ಯಾರೋ ಒಬ್ಬರು ‘ಎಲ್ಲಾ ಸರಿ, ನೀವುಗಳು ಆ ಮುಸ್ಲಿಂ ಹುಡುಗರನ್ನೇಕೆ ಸಮರ್ಥಿಸುತ್ತಿದ್ದೀರಿ?’ ಎಂದು ಹೇಳಿರುತ್ತಾರೆ. ‘ಹೌದಲ್ಲವೇ, ನಾವು ಮೊದಲು ಅದನ್ನು ಖಂಡಿಸಬೇಕು ತಾನೇ?’, ‘ಹಿಂದೂ ಅಂಗಡಿಗಳಿಗೆ ಹೋಗಬಾರದೆಂದು ಹೇಳಿಲ್ಲದೇ ಇರಬಹುದು, ಆದರೆ ಹಬ್ಬವನ್ನು ಸರಳವಾಗಿಯೇ ಆಚರಿಸಬೇಕೆಂದು ಬಲವಂತ ಪಡಿಸುವುದು ತಪ್ಪಲ್ಲವೇ?’, ‘ನಾವು ಯಾವ ಮೂಲಭೂತವಾದವನ್ನೂ ಸಮರ್ಥಿಸುವುದಿಲ್ಲ’, ‘ಇವರೂ ಹಾಗೇ ಮಾಡುತ್ತಾರೆ’ ಇತ್ಯಾದಿ ಟ್ರ್ಯಾಪ್‍ಗಳಲ್ಲಿ ಬೀಳಲು ಕೆಲವರು ಉತ್ಸುಕರಾಗಿರುತ್ತಾರೆ. ಏಕೆಂದರೆ ಮನುಷ್ಯವಿರೋಧಿಗಳು ಸೃಷ್ಟಿಸುವ ಅಜೆಂಡಾವನ್ನು ಕೌಂಟರ್ ಮಾಡುವ ಸರಿಯಾದ ದಾರಿಯನ್ನು ಇವರಿನ್ನೂ ಹುಡುಕಿಕೊಂಡಿಲ್ಲ.

ಸತ್ಯ, ಸೌಹಾರ್ದತೆ, ಮನುಷ್ಯ ಪ್ರೀತಿಯ ಪರವಾಗಿರಬೇಕಿದ್ದ ಮಾಧ್ಯಮಗಳು ಮೆದುಳಿಗೆ ಸೋಂಕನ್ನು ಹಬ್ಬಿಸಿಕೊಂಡುಬಿಟ್ಟಿವೆ. ಅದನ್ನು ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದುಬಿಟ್ಟಿದೆ. ಸೋಂಕಿನ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು, ಕೆಲವೊಮ್ಮೆ ಲಾಕ್‍ಡೌನ್ ಮತ್ತು ಚಿಕಿತ್ಸೆಯ ಅಗತ್ಯ ಬೀಳುತ್ತದೆ. ಕರ್ನಾಟಕದ ಜಾಣಜಾಣೆಯರು ಅದಕ್ಕೆ ‘ಸಂಪೂರ್ಣವಾಗಿ ಫೀಲ್ಡಿಗಿಳಿಯಬೇಕು’ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...