Homeಅಂಕಣಗಳುಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

- Advertisement -
- Advertisement -

ಬೆಂಗಳೂರಿನ ಟಿವಿ ಚಾನೆಲ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಬಂದ ಕಾರಣಕ್ಕೆ ಹಲವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆಗ ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ ಎಂದು ನಾವೂ ಮನವಿ ಮಾಡಿಕೊಂಡಿದ್ದೆವು. ಏಕೆಂದರೆ ಅದಕ್ಕೆ ಮುಂಚೆ ಕೊರೊನಾ ವೈರಸ್‍ಅನ್ನು ಅಮೆರಿಕಾದವರು ಚೀನೀ ವೈರಸ್ ಎಂದು ಕರೆದಂತೆ, ಇಲ್ಲಿನ ಮಾಧ್ಯಮಗಳು ತಬ್ಲಿಘಿ ವೈರಸ್ ಎಂದು ಕರೆಯಲಾರಂಭಿಸಿದ್ದರು. ವೈರಸ್‍ಗೂ ಇಲ್ಲದ ಕೊಳಕು ಮನಸ್ಥಿತಿಯನ್ನು ಟಿವಿ ಚಾನೆಲ್‍ಗಳು ತೋರಿದೆವೆಂದು, ಅದೇ ತಪ್ಪನ್ನು ಎಲ್ಲರೂ ಮಾಡಬಾರದೆಂಬುದು ನಮ್ಮ ಕಾಳಜಿಯಾಗಿತ್ತು. ಮೀಡಿಯಾಗಳನ್ನು ಟ್ರೋಲ್ ಮಾಡಲು ಹೋಗಿ, ವೈರಸ್‍ಅನ್ನು ಯಾವುದಾದರೂ ಸಮುದಾಯಕ್ಕೆ ತಳಕು ಹಾಕುವ ಮನೋಭಾವಕ್ಕೆ ಪುಷ್ಟಿ ಕೊಡುವ ಕೆಲಸವನ್ನು ಯಾರೂ ಮಾಡಬಾರದೆಂಬುದು ಅದರ ಹಿಂದಿನ ಉದ್ದೇಶವಾಗಿತ್ತು.

ಆದರೆ ಮೀಡಿಯಾಗೆ ಹತ್ತಿದ್ದ ವೈರಸ್ ಅಷ್ಟು ಬೇಗ ಇಳಿಯಲಿಲ್ಲ. ಅವರು ಬಿಹಾರದ ಕಾರ್ಮಿಕರೊಬ್ಬರಿಗೆ ಸೋಂಕು ಬಂದಿತೆಂಬ ಸುದ್ದಿಯನ್ನು ಹಿಡಿದು ‘ಬಿಹಾರಿ ಬಾಂಬು’ ಎಂದು ಕರೆದರು. ಹಾಗೆಯೇ ಮುಂದುವರೆದು 11ನೇ ಕ್ರಾಸ್ ವೈರಸ್ ಇತ್ಯಾದಿ ಇತ್ಯಾದಿಗಳನ್ನು ಸೃಷ್ಟಿಸುತ್ತಾ, ಇತ್ತೀಚೆಗೆ ಗರ್ಭಿಣಿ ಬಾಂಬ್ ಎಂತಲೂ ಕರೆದರು. ಮುಸ್ಲಿಮರನ್ನು ಗುರಿ ಮಾಡುವ ಅವರ ದುರುದ್ದೇಶದ ಈಡೇರಿಕೆಗಾಗಿ ಕೊರೊನಾ ಸೋಂಕಿನ (ಕ್ರಿಮಿನಲೈಸೇಷನ್) ಅಪರಾಧೀಕರಣವನ್ನು ವ್ಯವಸ್ಥಿತವಾಗಿ ಮಾಡಿದರು. ಈ ಕೆಲಸದಲ್ಲಿ ಅತ್ಯುಗ್ರವಾಗಿ ತೊಡಗಿಕೊಂಡಿದ್ದ ಇನ್ನೊಂದು ಟಿವಿ ಚಾನೆಲ್ ಝೀ ಸಂಸ್ಥೆಗೂ ಕೊರೊನಾ ಬಾಧಿಸಿದೆ. ಕೊರೊನಾ ಸೋಂಕಿತರೆಲ್ಲರೂ ಇಲ್ಲಿಯವರೆಗೂ ಜಿಹಾದಿಗಳಾಗಿದ್ದರೆ, ಈಗ ಇದ್ದಕ್ಕಿದ್ದಂತೆ ಅವರುಗಳು ವಾರಿಯರ್ಸ್‍ಗಳಾಗಿಬಿಟ್ಟಿದ್ದಾರೆ.

ಇದೇ ಹೊತ್ತಿನಲ್ಲಿ ಕರ್ನಾಟಕದ ಒಂದು ಮನುಷ್ಯ ವಿರೋಧಿ ಟಿವಿ ಚಾನೆಲ್ ಮುಸ್ಲಿಮರ ವಿರುದ್ಧ ಇನ್ನೊಂದು ಫೇಕ್‍ನ್ಯೂಸ್ ಕುರಿತು ಚರ್ಚಿಸಲು ಶುರುಮಾಡಿದೆ. ದಾವಣಗೆರೆ ಜಿಲ್ಲೆಯಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂ ಬಟ್ಟೆ ವ್ಯಾಪಾರಿಗಳಿಂದ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಹೆಣ್ಣುಮಕ್ಕಳನ್ನು ಕೆಲವು ಮುಸ್ಲಿಮರು ಬಲವಂತಪಡಿಸಿದ್ದಾರೆಂಬುದು ಅವರು ಚರ್ಚಿಸುತ್ತಿರುವ ಸುದ್ದಿ. ಈ ಸುದ್ದಿ ಇಲ್ಲಿ ಪ್ರಸಾರವಾಗುವ ಮುಂಚೆಯೇ ದಾವಣಗೆರೆಯಲ್ಲಿ ಯಾವ ಧಾರ್ಮಿಕ ಮುಖಂಡರು ಈ ರೀತಿ ಕರೆ ಕೊಟ್ಟಿದ್ದಾರೆಂದು ಹೇಳಲಾಗಿತ್ತೋ ಅವರು ಪತ್ರಿಕಾಗೋಷ್ಠಿಯನ್ನೂ ಮಾಡಿದ್ದರು.

ಈ ಸಾರಿಯ ರಂಜಾನ್‍ನ ಸಂದರ್ಭದಲ್ಲಿ ಯಾರೂ ದುಂದುವೆಚ್ಚ ಮಾಡಬಾರದು, ಬದಲಿಗೆ ಹಾಗೇನಾದರೂ ಖರ್ಚು ಮಾಡುವುದಿದ್ದಲ್ಲಿ ಅದನ್ನು ಲಾಕ್‍ಡೌನ್‍ನಿಂದ ಸಂತ್ರಸ್ತರಾದ ಬಡವರಿಗೆ ಕೊಡಬೇಕೆಂದು ರಂಜಾನ್ ಶುರುವಾಗುವ ಮುಂಚೆಯೇ ಆ ಸಮುದಾಯದೊಳಗೆ ಚಾಲ್ತಿಯಲ್ಲಿದ್ದ ಸಂದೇಶ. ಅದನ್ನೇ ಅವರು ಅಲ್ಲಿಯೂ ನೀಡಿದ್ದರು. ರಂಜಾನ್ ಸಂದರ್ಭದಲ್ಲಿ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಜಕಾತ್‍ಅನ್ನು ದಾನ ಮಾಡುವುದು ಕಡ್ಡಾಯವಾಗಿದ್ದು ಈ ಸಾರಿ ಅದನ್ನು ಹೆಚ್ಚಿಸುವ ಧರ್ಮದ ಕಾರ್ಯ ಅದಾಗಿತ್ತು. ಇದನ್ನು ಅತಿರೇಕಕ್ಕೆ ಒಯ್ದ ಕೆಲವು ಮುಸ್ಲಿಮರು ಕೆಲವೆಡೆ ಅಂಗಡಿಗಳಿಗೆ ಹೋಗಿದ್ದ ಮುಸ್ಲಿಂ ಹೆಣ್ಣುಮಕ್ಕಳನ್ನು ಬಲವಂತದಿಂದ ತಡೆದದ್ದು ಸುದ್ದಿಯಾಗಿತ್ತಲ್ಲದೇ, ಯಥಾಪ್ರಕಾರ ವಿಡಿಯೋಗಳೂ ಚಾಲನೆಯಲ್ಲಿದ್ದವು. ಇನ್ನೊಬ್ಬರ ಇಷ್ಟಾನಿಷ್ಟಗಳನ್ನು ಸರಿಯಾದ ಕಾರಣಗಳಿಗಾಗಿಯೇ ಬದಲಿಸಬಯಸುವವರೂ ಯಾರನ್ನೂ ಬಲವಂತ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ; ಅದು ಯಾರನ್ನೋ ತಡೆಯುವ ಮಟ್ಟಕ್ಕೆ ಹೋದರೆ ಅದು ಶಿಕ್ಷಾರ್ಹವೂ ಆಗಬೇಕು.

ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾದ್ದೆಂದರೆ, ಇವೆಲ್ಲಾ ನಡೆಯೋಕೆ ಮುಂಚೆಯೇ ಮುಸ್ಲಿಂ ವ್ಯಾಪಾರಿಗಳು ಜಾತ್ರೆಗೆ ಬರಬಾರದು ಅಥವಾ ಮುಸ್ಲಿಂ ವ್ಯಾಪಾರಿಗಳಿಂದ ಕೊಳ್ಳಬಾರದು ಎಂಬ ಘೋಷಣೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಹಿರಂಗವಾಗಿ ಚಾಲ್ತಿಗೆ ಬಂದಿತ್ತು. ಅದಕ್ಕೂ ನಾಲು ವರ್ಷಗಳ ಮುಂಚೆಯೇ ಇಂತಹ ಭಾವನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕವಾಗಿ ಇದ್ದುದು ಖುದ್ದು ನನಗೇ ಅನುಭವಕ್ಕೆ ಬಂದ ಘಟನೆ ನೆನಪಿನಿಂದ ಎಂದೂ ಮಾಸುವುದಿಲ್ಲ. ಆದರೆ ಇದ್ಯಾವುದೂ ಈ ಜೀವವಿರೋಧಿ ಚಾನೆಲ್‍ಗಳಲ್ಲಿ ಸುದ್ದಿ, ಸದ್ದು, ಚರ್ಚೆಗೆ ಕಾರಣವಾಗುವುದಿಲ್ಲ. ಏಕೆಂದರೆ ಅವರ ಅಜೆಂಡಾವೇ ಬೇರೆ. ಜೊತೆಗೆ ಅವರುಗಳು ಈಗ ಮನುಷ್ಯರಾಗಿಯೂ ಉಳಿದಿಲ್ಲ. ಧರ್ಮವಂತರಂತೂ ಅಲ್ಲವೇ ಅಲ್ಲ.

ಇತ್ತ ಮನುಷ್ಯವಿರೋಧಿಗಳಲ್ಲದವರೂ ಚರ್ಚೆಯನ್ನು ‘ಆ ಮುಸ್ಲಿಂ ಹುಡುಗರು ಬಟ್ಟೆ ತೆಗೆದುಕೊಳ್ಳದಂತೆ ಒತ್ತಾಯಿಸುವುದು ಸರಿಯೇ’ ಎಂಬುದರ ಸುತ್ತ ಕೇಂದ್ರೀಕರಿಸುವಂತೆ ಆಗುತ್ತದೆ. ಏಕೆಂದರೆ ಯಾರೋ ಒಬ್ಬರು ‘ಎಲ್ಲಾ ಸರಿ, ನೀವುಗಳು ಆ ಮುಸ್ಲಿಂ ಹುಡುಗರನ್ನೇಕೆ ಸಮರ್ಥಿಸುತ್ತಿದ್ದೀರಿ?’ ಎಂದು ಹೇಳಿರುತ್ತಾರೆ. ‘ಹೌದಲ್ಲವೇ, ನಾವು ಮೊದಲು ಅದನ್ನು ಖಂಡಿಸಬೇಕು ತಾನೇ?’, ‘ಹಿಂದೂ ಅಂಗಡಿಗಳಿಗೆ ಹೋಗಬಾರದೆಂದು ಹೇಳಿಲ್ಲದೇ ಇರಬಹುದು, ಆದರೆ ಹಬ್ಬವನ್ನು ಸರಳವಾಗಿಯೇ ಆಚರಿಸಬೇಕೆಂದು ಬಲವಂತ ಪಡಿಸುವುದು ತಪ್ಪಲ್ಲವೇ?’, ‘ನಾವು ಯಾವ ಮೂಲಭೂತವಾದವನ್ನೂ ಸಮರ್ಥಿಸುವುದಿಲ್ಲ’, ‘ಇವರೂ ಹಾಗೇ ಮಾಡುತ್ತಾರೆ’ ಇತ್ಯಾದಿ ಟ್ರ್ಯಾಪ್‍ಗಳಲ್ಲಿ ಬೀಳಲು ಕೆಲವರು ಉತ್ಸುಕರಾಗಿರುತ್ತಾರೆ. ಏಕೆಂದರೆ ಮನುಷ್ಯವಿರೋಧಿಗಳು ಸೃಷ್ಟಿಸುವ ಅಜೆಂಡಾವನ್ನು ಕೌಂಟರ್ ಮಾಡುವ ಸರಿಯಾದ ದಾರಿಯನ್ನು ಇವರಿನ್ನೂ ಹುಡುಕಿಕೊಂಡಿಲ್ಲ.

ಸತ್ಯ, ಸೌಹಾರ್ದತೆ, ಮನುಷ್ಯ ಪ್ರೀತಿಯ ಪರವಾಗಿರಬೇಕಿದ್ದ ಮಾಧ್ಯಮಗಳು ಮೆದುಳಿಗೆ ಸೋಂಕನ್ನು ಹಬ್ಬಿಸಿಕೊಂಡುಬಿಟ್ಟಿವೆ. ಅದನ್ನು ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದುಬಿಟ್ಟಿದೆ. ಸೋಂಕಿನ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು, ಕೆಲವೊಮ್ಮೆ ಲಾಕ್‍ಡೌನ್ ಮತ್ತು ಚಿಕಿತ್ಸೆಯ ಅಗತ್ಯ ಬೀಳುತ್ತದೆ. ಕರ್ನಾಟಕದ ಜಾಣಜಾಣೆಯರು ಅದಕ್ಕೆ ‘ಸಂಪೂರ್ಣವಾಗಿ ಫೀಲ್ಡಿಗಿಳಿಯಬೇಕು’ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...