Homeಅಂಕಣಗಳುಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದಿದೆಯೇ?

- Advertisement -
- Advertisement -

ಬೆಂಗಳೂರಿನ ಟಿವಿ ಚಾನೆಲ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಬಂದ ಕಾರಣಕ್ಕೆ ಹಲವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆಗ ‘ಮೀಡಿಯಾ ವೈರಸ್’ ಎಂದು ಕರೆಯಬೇಡಿ ಎಂದು ನಾವೂ ಮನವಿ ಮಾಡಿಕೊಂಡಿದ್ದೆವು. ಏಕೆಂದರೆ ಅದಕ್ಕೆ ಮುಂಚೆ ಕೊರೊನಾ ವೈರಸ್‍ಅನ್ನು ಅಮೆರಿಕಾದವರು ಚೀನೀ ವೈರಸ್ ಎಂದು ಕರೆದಂತೆ, ಇಲ್ಲಿನ ಮಾಧ್ಯಮಗಳು ತಬ್ಲಿಘಿ ವೈರಸ್ ಎಂದು ಕರೆಯಲಾರಂಭಿಸಿದ್ದರು. ವೈರಸ್‍ಗೂ ಇಲ್ಲದ ಕೊಳಕು ಮನಸ್ಥಿತಿಯನ್ನು ಟಿವಿ ಚಾನೆಲ್‍ಗಳು ತೋರಿದೆವೆಂದು, ಅದೇ ತಪ್ಪನ್ನು ಎಲ್ಲರೂ ಮಾಡಬಾರದೆಂಬುದು ನಮ್ಮ ಕಾಳಜಿಯಾಗಿತ್ತು. ಮೀಡಿಯಾಗಳನ್ನು ಟ್ರೋಲ್ ಮಾಡಲು ಹೋಗಿ, ವೈರಸ್‍ಅನ್ನು ಯಾವುದಾದರೂ ಸಮುದಾಯಕ್ಕೆ ತಳಕು ಹಾಕುವ ಮನೋಭಾವಕ್ಕೆ ಪುಷ್ಟಿ ಕೊಡುವ ಕೆಲಸವನ್ನು ಯಾರೂ ಮಾಡಬಾರದೆಂಬುದು ಅದರ ಹಿಂದಿನ ಉದ್ದೇಶವಾಗಿತ್ತು.

ಆದರೆ ಮೀಡಿಯಾಗೆ ಹತ್ತಿದ್ದ ವೈರಸ್ ಅಷ್ಟು ಬೇಗ ಇಳಿಯಲಿಲ್ಲ. ಅವರು ಬಿಹಾರದ ಕಾರ್ಮಿಕರೊಬ್ಬರಿಗೆ ಸೋಂಕು ಬಂದಿತೆಂಬ ಸುದ್ದಿಯನ್ನು ಹಿಡಿದು ‘ಬಿಹಾರಿ ಬಾಂಬು’ ಎಂದು ಕರೆದರು. ಹಾಗೆಯೇ ಮುಂದುವರೆದು 11ನೇ ಕ್ರಾಸ್ ವೈರಸ್ ಇತ್ಯಾದಿ ಇತ್ಯಾದಿಗಳನ್ನು ಸೃಷ್ಟಿಸುತ್ತಾ, ಇತ್ತೀಚೆಗೆ ಗರ್ಭಿಣಿ ಬಾಂಬ್ ಎಂತಲೂ ಕರೆದರು. ಮುಸ್ಲಿಮರನ್ನು ಗುರಿ ಮಾಡುವ ಅವರ ದುರುದ್ದೇಶದ ಈಡೇರಿಕೆಗಾಗಿ ಕೊರೊನಾ ಸೋಂಕಿನ (ಕ್ರಿಮಿನಲೈಸೇಷನ್) ಅಪರಾಧೀಕರಣವನ್ನು ವ್ಯವಸ್ಥಿತವಾಗಿ ಮಾಡಿದರು. ಈ ಕೆಲಸದಲ್ಲಿ ಅತ್ಯುಗ್ರವಾಗಿ ತೊಡಗಿಕೊಂಡಿದ್ದ ಇನ್ನೊಂದು ಟಿವಿ ಚಾನೆಲ್ ಝೀ ಸಂಸ್ಥೆಗೂ ಕೊರೊನಾ ಬಾಧಿಸಿದೆ. ಕೊರೊನಾ ಸೋಂಕಿತರೆಲ್ಲರೂ ಇಲ್ಲಿಯವರೆಗೂ ಜಿಹಾದಿಗಳಾಗಿದ್ದರೆ, ಈಗ ಇದ್ದಕ್ಕಿದ್ದಂತೆ ಅವರುಗಳು ವಾರಿಯರ್ಸ್‍ಗಳಾಗಿಬಿಟ್ಟಿದ್ದಾರೆ.

ಇದೇ ಹೊತ್ತಿನಲ್ಲಿ ಕರ್ನಾಟಕದ ಒಂದು ಮನುಷ್ಯ ವಿರೋಧಿ ಟಿವಿ ಚಾನೆಲ್ ಮುಸ್ಲಿಮರ ವಿರುದ್ಧ ಇನ್ನೊಂದು ಫೇಕ್‍ನ್ಯೂಸ್ ಕುರಿತು ಚರ್ಚಿಸಲು ಶುರುಮಾಡಿದೆ. ದಾವಣಗೆರೆ ಜಿಲ್ಲೆಯಲ್ಲಿ ರಂಜಾನ್ ಸಂದರ್ಭದಲ್ಲಿ ಹಿಂದೂ ಬಟ್ಟೆ ವ್ಯಾಪಾರಿಗಳಿಂದ ಬಟ್ಟೆ ಖರೀದಿಸಬಾರದೆಂದು ಮುಸ್ಲಿಂ ಹೆಣ್ಣುಮಕ್ಕಳನ್ನು ಕೆಲವು ಮುಸ್ಲಿಮರು ಬಲವಂತಪಡಿಸಿದ್ದಾರೆಂಬುದು ಅವರು ಚರ್ಚಿಸುತ್ತಿರುವ ಸುದ್ದಿ. ಈ ಸುದ್ದಿ ಇಲ್ಲಿ ಪ್ರಸಾರವಾಗುವ ಮುಂಚೆಯೇ ದಾವಣಗೆರೆಯಲ್ಲಿ ಯಾವ ಧಾರ್ಮಿಕ ಮುಖಂಡರು ಈ ರೀತಿ ಕರೆ ಕೊಟ್ಟಿದ್ದಾರೆಂದು ಹೇಳಲಾಗಿತ್ತೋ ಅವರು ಪತ್ರಿಕಾಗೋಷ್ಠಿಯನ್ನೂ ಮಾಡಿದ್ದರು.

ಈ ಸಾರಿಯ ರಂಜಾನ್‍ನ ಸಂದರ್ಭದಲ್ಲಿ ಯಾರೂ ದುಂದುವೆಚ್ಚ ಮಾಡಬಾರದು, ಬದಲಿಗೆ ಹಾಗೇನಾದರೂ ಖರ್ಚು ಮಾಡುವುದಿದ್ದಲ್ಲಿ ಅದನ್ನು ಲಾಕ್‍ಡೌನ್‍ನಿಂದ ಸಂತ್ರಸ್ತರಾದ ಬಡವರಿಗೆ ಕೊಡಬೇಕೆಂದು ರಂಜಾನ್ ಶುರುವಾಗುವ ಮುಂಚೆಯೇ ಆ ಸಮುದಾಯದೊಳಗೆ ಚಾಲ್ತಿಯಲ್ಲಿದ್ದ ಸಂದೇಶ. ಅದನ್ನೇ ಅವರು ಅಲ್ಲಿಯೂ ನೀಡಿದ್ದರು. ರಂಜಾನ್ ಸಂದರ್ಭದಲ್ಲಿ ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಜಕಾತ್‍ಅನ್ನು ದಾನ ಮಾಡುವುದು ಕಡ್ಡಾಯವಾಗಿದ್ದು ಈ ಸಾರಿ ಅದನ್ನು ಹೆಚ್ಚಿಸುವ ಧರ್ಮದ ಕಾರ್ಯ ಅದಾಗಿತ್ತು. ಇದನ್ನು ಅತಿರೇಕಕ್ಕೆ ಒಯ್ದ ಕೆಲವು ಮುಸ್ಲಿಮರು ಕೆಲವೆಡೆ ಅಂಗಡಿಗಳಿಗೆ ಹೋಗಿದ್ದ ಮುಸ್ಲಿಂ ಹೆಣ್ಣುಮಕ್ಕಳನ್ನು ಬಲವಂತದಿಂದ ತಡೆದದ್ದು ಸುದ್ದಿಯಾಗಿತ್ತಲ್ಲದೇ, ಯಥಾಪ್ರಕಾರ ವಿಡಿಯೋಗಳೂ ಚಾಲನೆಯಲ್ಲಿದ್ದವು. ಇನ್ನೊಬ್ಬರ ಇಷ್ಟಾನಿಷ್ಟಗಳನ್ನು ಸರಿಯಾದ ಕಾರಣಗಳಿಗಾಗಿಯೇ ಬದಲಿಸಬಯಸುವವರೂ ಯಾರನ್ನೂ ಬಲವಂತ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ; ಅದು ಯಾರನ್ನೋ ತಡೆಯುವ ಮಟ್ಟಕ್ಕೆ ಹೋದರೆ ಅದು ಶಿಕ್ಷಾರ್ಹವೂ ಆಗಬೇಕು.

ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾದ್ದೆಂದರೆ, ಇವೆಲ್ಲಾ ನಡೆಯೋಕೆ ಮುಂಚೆಯೇ ಮುಸ್ಲಿಂ ವ್ಯಾಪಾರಿಗಳು ಜಾತ್ರೆಗೆ ಬರಬಾರದು ಅಥವಾ ಮುಸ್ಲಿಂ ವ್ಯಾಪಾರಿಗಳಿಂದ ಕೊಳ್ಳಬಾರದು ಎಂಬ ಘೋಷಣೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಹಿರಂಗವಾಗಿ ಚಾಲ್ತಿಗೆ ಬಂದಿತ್ತು. ಅದಕ್ಕೂ ನಾಲು ವರ್ಷಗಳ ಮುಂಚೆಯೇ ಇಂತಹ ಭಾವನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕವಾಗಿ ಇದ್ದುದು ಖುದ್ದು ನನಗೇ ಅನುಭವಕ್ಕೆ ಬಂದ ಘಟನೆ ನೆನಪಿನಿಂದ ಎಂದೂ ಮಾಸುವುದಿಲ್ಲ. ಆದರೆ ಇದ್ಯಾವುದೂ ಈ ಜೀವವಿರೋಧಿ ಚಾನೆಲ್‍ಗಳಲ್ಲಿ ಸುದ್ದಿ, ಸದ್ದು, ಚರ್ಚೆಗೆ ಕಾರಣವಾಗುವುದಿಲ್ಲ. ಏಕೆಂದರೆ ಅವರ ಅಜೆಂಡಾವೇ ಬೇರೆ. ಜೊತೆಗೆ ಅವರುಗಳು ಈಗ ಮನುಷ್ಯರಾಗಿಯೂ ಉಳಿದಿಲ್ಲ. ಧರ್ಮವಂತರಂತೂ ಅಲ್ಲವೇ ಅಲ್ಲ.

ಇತ್ತ ಮನುಷ್ಯವಿರೋಧಿಗಳಲ್ಲದವರೂ ಚರ್ಚೆಯನ್ನು ‘ಆ ಮುಸ್ಲಿಂ ಹುಡುಗರು ಬಟ್ಟೆ ತೆಗೆದುಕೊಳ್ಳದಂತೆ ಒತ್ತಾಯಿಸುವುದು ಸರಿಯೇ’ ಎಂಬುದರ ಸುತ್ತ ಕೇಂದ್ರೀಕರಿಸುವಂತೆ ಆಗುತ್ತದೆ. ಏಕೆಂದರೆ ಯಾರೋ ಒಬ್ಬರು ‘ಎಲ್ಲಾ ಸರಿ, ನೀವುಗಳು ಆ ಮುಸ್ಲಿಂ ಹುಡುಗರನ್ನೇಕೆ ಸಮರ್ಥಿಸುತ್ತಿದ್ದೀರಿ?’ ಎಂದು ಹೇಳಿರುತ್ತಾರೆ. ‘ಹೌದಲ್ಲವೇ, ನಾವು ಮೊದಲು ಅದನ್ನು ಖಂಡಿಸಬೇಕು ತಾನೇ?’, ‘ಹಿಂದೂ ಅಂಗಡಿಗಳಿಗೆ ಹೋಗಬಾರದೆಂದು ಹೇಳಿಲ್ಲದೇ ಇರಬಹುದು, ಆದರೆ ಹಬ್ಬವನ್ನು ಸರಳವಾಗಿಯೇ ಆಚರಿಸಬೇಕೆಂದು ಬಲವಂತ ಪಡಿಸುವುದು ತಪ್ಪಲ್ಲವೇ?’, ‘ನಾವು ಯಾವ ಮೂಲಭೂತವಾದವನ್ನೂ ಸಮರ್ಥಿಸುವುದಿಲ್ಲ’, ‘ಇವರೂ ಹಾಗೇ ಮಾಡುತ್ತಾರೆ’ ಇತ್ಯಾದಿ ಟ್ರ್ಯಾಪ್‍ಗಳಲ್ಲಿ ಬೀಳಲು ಕೆಲವರು ಉತ್ಸುಕರಾಗಿರುತ್ತಾರೆ. ಏಕೆಂದರೆ ಮನುಷ್ಯವಿರೋಧಿಗಳು ಸೃಷ್ಟಿಸುವ ಅಜೆಂಡಾವನ್ನು ಕೌಂಟರ್ ಮಾಡುವ ಸರಿಯಾದ ದಾರಿಯನ್ನು ಇವರಿನ್ನೂ ಹುಡುಕಿಕೊಂಡಿಲ್ಲ.

ಸತ್ಯ, ಸೌಹಾರ್ದತೆ, ಮನುಷ್ಯ ಪ್ರೀತಿಯ ಪರವಾಗಿರಬೇಕಿದ್ದ ಮಾಧ್ಯಮಗಳು ಮೆದುಳಿಗೆ ಸೋಂಕನ್ನು ಹಬ್ಬಿಸಿಕೊಂಡುಬಿಟ್ಟಿವೆ. ಅದನ್ನು ಮೀಡಿಯಾ ವೈರಸ್ ಎಂದು ಕರೆಯಬೇಕಾದ ಸಂದರ್ಭ ಬಂದುಬಿಟ್ಟಿದೆ. ಸೋಂಕಿನ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು, ಕೆಲವೊಮ್ಮೆ ಲಾಕ್‍ಡೌನ್ ಮತ್ತು ಚಿಕಿತ್ಸೆಯ ಅಗತ್ಯ ಬೀಳುತ್ತದೆ. ಕರ್ನಾಟಕದ ಜಾಣಜಾಣೆಯರು ಅದಕ್ಕೆ ‘ಸಂಪೂರ್ಣವಾಗಿ ಫೀಲ್ಡಿಗಿಳಿಯಬೇಕು’ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...