Homeಮುಖಪುಟ"ಇವಿಎಂ ತಿರುಚುವವರಿಗೆ ಯಾವುದಾದರೂ ಶಿಕ್ಷೆ ಇದೆಯೇ?" ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

“ಇವಿಎಂ ತಿರುಚುವವರಿಗೆ ಯಾವುದಾದರೂ ಶಿಕ್ಷೆ ಇದೆಯೇ?” ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ದುರ್ಬಳಕೆ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಶಿಕ್ಷಿಸುವಂತಹ ಯಾವುದಾದರೂ ಕಾನೂನು ಇದೆಯಾ? ಎಂದು ಭಾರತೀಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಶ್ನಿಸಿದೆ.

ಕಠಿಣ ಶಿಕ್ಷೆಯ ಭಯ ಇಲ್ಲದಿದ್ದರೆ ಮತಯಂತ್ರಗಳನ್ನು ತಿರುಚುವ ಸಾಧ್ಯತೆ ಇರುತ್ತದೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಸಲ್ಲಿಸಿರುವ ಅರ್ಜಿ ಸೇರಿದಂತೆ, ಈ ಕುರಿತಾದ ಇತರ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಿದೆ.

ವಿಚಾರಣೆ ವೇಳೆ, ಇವಿಎಂ ತಿರುಚುವುದು ಗಂಭೀರ ವಿಚಾರ. ಒಂದು ವೇಳೆ ಆ ರೀತಿ ಮಾಡಿದರೆ ಕಠಿಣ ಶಿಕ್ಷೆಯಾಗುತ್ತದೆ ಎಂಬ ಭಯ ಇರಬೇಕು. ಹಾಗಾಗಿ, ಇವಿಎಂ ದುರ್ಬಳಕೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲು ಏನಾದರು ಕಾನೂನು ಇದೆಯಾ? ಎಂದು ನ್ಯಾಯಪೀಠ ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ, ‘ಹುದ್ದೆಯಿಂದ ವಜಾಗೊಳಿಸುವ ಶಿಕ್ಷೆಯಿದೆ’ ಎಂದು ಹೇಳಿದೆ.

“ನಾವು ಕಾರ್ಯವಿಧಾನದ ಬಗ್ಗೆ ಹೇಳುತ್ತಿಲ್ಲ. ತಿರುಚುವಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಸೆಕ್ಷನ್‌ ಇಲ್ಲವೇ ಇಲ್ಲ” ಎಂದು ನ್ಯಾ. ಖನ್ನಾ ಹೇಳಿದ್ದಾರೆ ಮತ್ತು ವ್ಯವಸ್ಥೆಯನ್ನು ಅನುಮಾನಿಸಬಾರದು ಎಂದಿದ್ದಾರೆ.

ಇದಕ್ಕೆ ದನಿಗೂಡಿಸಿದ ನ್ಯಾ. ದತ್ತಾ ಅವರು “ನನ್ನ ತವರು ರಾಜ್ಯ ಪ. ಬಂಗಾಳದಲ್ಲಿ ಜರ್ಮನಿಗಿಂತಲೂ ಅಧಿಕ ಜನಸಂಖ್ಯೆ ಇದೆ. ನಾವು ಯಾರ ಮೇಲಾದರೂ ಸ್ವಲ್ಪ ನಂಬಿಕೆ ಇಡಬೇಕು. ಈ ರೀತಿ ವ್ಯವಸ್ಥೆಯನ್ನು ಬುಡಮೇಲು ಮಾಡಲು ಯತ್ನಿಸದಿರಿ” ಎಂದು ಅರ್ಜಿದಾರರಿಗೆ ಕಿವಿಮಾತು ಹೇಳಿದ್ದಾರೆ.

ಪ್ರಸ್ತುತ, ಪ್ರತಿ ಕ್ಷೇತ್ರದ ಐದು ಮತಗಟ್ಟೆಗಳಲ್ಲಿ ಮಾತ್ರ ವಿವಿಪ್ಯಾಟ್‌ ಚೀಟಿಗಳನ್ನು ತಾಳೆ ನೋಡಲಾಗುತ್ತಿದ್ದು, ಅದರ ಬದಲಿಗೆ ಪ್ರತಿ ಕ್ಷೇತ್ರದ ಎಲ್ಲಾ ಮತಗಟ್ಟೆಗಳ ಇವಿಎಂ- ವಿವಿಪ್ಯಾಟ್‌ ತಾಳೆ ಕಾರ್ಯ ನಡೆಯಬೇಕು ಎಂಬುವುದು ಅರ್ಜಿದಾರರ ಕೋರಿಕೆಯಾಗಿದೆ.

ಇವಿಎಂಗಳ ಬದಲಿಗೆ ಮತ ಪ್ರತಗಳ ಮೂಲಕ ಚುನಾವಣೆ ನಡೆಸುವ ಹಳೆಯ ಕ್ರಮವೇ ಇರಲಿ ಎಂಬ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.

ಎಡಿಆರ್ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು, ಇವಿಎಂಗಳ ಬದಲಿಗೆ ಮತ ಪ್ರತಗಳ ಮೂಲಕ ಚುನಾವಣೆ ನಡೆಸಬೇಕು. ಎಲ್ಲಾ ವಿವಿಪ್ಯಾಟ್ ಸ್ಲಿಪ್‌ಗಳನ್ನು ಇವಿಎಂ ಮತಗಳೊಂದಿಗೆ ತಾಳೆ ಮಾಡಬೇಕು. ವಿವಿಪ್ಯಾಟ್‌ ಚೀಟಿಗಳನ್ನು ಪಡೆದು ಮತಪೆಟ್ಟಿಗೆಗೆ ಹಾಕಲು ಮತದಾರರಿಗೆ ಅವಕಾಶ ನೀಡಬೇಕು. ಈ ಹಿಂದೆ ಇದ್ದ ಪಾರದರ್ಶಕ ಗಾಜಿನ ಬದಲಾಗಿ ವಿವಿಪ್ಯಾಟ್‌ ಯಂತ್ರಕ್ಕೆ 7 ಸೆಕೆಂಡ್‌ಗಳ ಕಾಲ ಬೆಳಕು ಇದ್ದಾಗ ಮಾತ್ರ ಕಾಣುವ ಅಪಾರದರ್ಶಕ ಗಾಜನ್ನು ಅಳವಡಿಸಲಾಗಿದೆ ಇತ್ಯಾದಿ ಕೋರಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 18ರಂದು ನಡೆಯಲಿದೆ.

ಇದನ್ನೂ ಓದಿ : ‘ನಾವು ಬ್ಯಾಲೆಟ್‌ ಪೇಪರ್‌ಗೆ ಹಿಂತಿರುಗಬಹುದು..’: ಸುಪ್ರೀಂ ಮುಂದೆ ವಾದಿಸಿದ ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...