Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...