Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...