Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...