Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...