Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...