Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...