Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...